ಬ್ರೇಕಿಂಗ್ ನ್ಯೂಸ್
01-06-25 11:50 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್.1: ಮಂಡ್ಯ ಪೊಲೀಸರ ಕರ್ತವ್ಯ ಲೋಪದಿಂದ ಮಗುವೊಂದು ಮೃತಪಟ್ಟ ಬೆನ್ನಲ್ಲೇ ಎಚ್ಚತ್ತಿರುವ ಪೊಲೀಸ್ ಇಲಾಖೆ ತಪಾಸಣೆ ನೆಪದಲ್ಲಿ ಸಕಾರಣವಿಲ್ಲದೆ ವಾಹನಗಳನ್ನು ಏಕಾಏಕಿ ಅಡ್ಡಗಟ್ಟಿ ನಿಲ್ಲಿಸಬಾರದು ಎಂದು ಆದೇಶ ಹೊರಡಿಸಿದೆ.
ಈ ಕುರಿತು ಶನಿವಾರ ರಾಜ್ಯದ ಎಲ್ಲ ಜಿಲ್ಲೆಗಳ ಪೊಲೀಸರಿಗೆ ಸುತ್ತೋಲೆ ಹೊರಡಿಸಿರುವ ಡಿಜಿಪಿ ಡಾ.ಎಂ.ಎ ಸಲೀಂ, ವಾಹನಗಳ ತಪಾಸಣೆ ಸಂಬಂಧ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಆದೇಶಿಸಿದ್ದಾರೆ.
ಹೆದ್ದಾರಿಗಳಲ್ಲಿ ಜಿಗ್ ಜಾಗ್ ಬ್ಯಾರಿಕೇಡ್ ಅಳವಡಿಸಿ ವಾಹನಗಳನ್ನು ತಡೆಯಬಾರದು. ರಸ್ತೆಯಲ್ಲಿ ಏಕಾಏಕಿ ಅಡ್ಡಬಂದು ವಾಹನಗಳನ್ನು ನಿಲ್ಲಿಸಬಾರದು. ವಾಹನಗಳನ್ನು ನಿಲ್ಲಿಸಿ ಕೀ ಕಸಿದು ಅಡ್ಡಿ ಪಡಿಸಬಾರದು. ಬೈಕ್ ಹಿಂಬದಿ ಕುಳಿತಿರುವ ಸವಾರನನ್ನು ಹಿಡಿದೆಳೆಯುವುದು ಮಾಡುವಂತಿಲ್ಲ. ಪ್ರಮುಖವಾಗಿ ಇಂಟಲಿಜೆನ್ಸ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ ಜಾರಿಯಿರುವ ಬೆಂಗಳೂರು ಸೇರಿದಂತೆ ಇತರ ನಗರಗಳಲ್ಲಿ ತಂತ್ರಜ್ಞಾನ ಆಧರಿತ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಲು ಆದ್ಯತೆ ನೀಡಬೇಕು ಎಂದು ಸೂಚಿಸಿದ್ದಾರೆ.
ರಸ್ತೆಗಳಲ್ಲಿ ಅತಿ ವೇಗವಾಗಿ ಚಲಾಯಿಸುವ ವಾಹನಗಳನ್ನು ಬೆನ್ನಟ್ಟುವ ಬದಲಿಗೆ ವಾಹನಗಳ ಸಂಖ್ಯೆ ಗುರುತು ಮಾಡಿಕೊಂಡು ಜಿಲ್ಲಾ ಸರಹದ್ದುಗಳ ನಿಯಂತ್ರಣ ಕೊಠಡಿಗಳಿಗೆ ಮಾಹಿತಿ ರವಾನಿಸಿ ಪ್ರಕರಣ ದಾಖಲಿಸಬೇಕು. ಸಂಚಾರ ನಿಯಮ ಉಲ್ಲಂಘನೆ ಸಲುವಾಗಿ ವಾಹನಗಳನ್ನು ತಪಾಸಣೆ ಮಾಡುವಾಗ ಪ್ರತಿಫಲನ ಜಾಕೆಟ್ ಗಳನ್ನು ಧರಿಸಬೇಕು. ಸಂಜೆ ವೇಳೆ ಎಲ್ ಇಡಿ ಬಟನ್ ಗಳನ್ನು ಉಪಯೋಗಿಸಬೇಕು. ಕರ್ತವ್ಯ ನಿರ್ವಹಣೆ ವೇಳೆ ಕಡ್ಡಾಯವಾಗಿ ಬಾಡಿ ವೋರ್ನ್ ಕ್ಯಾಮೆರಾ ಧರಿಸಿರಬೇಕು ಎಂದು ನಿರ್ದೇಶನ ನೀಡಲಾಗಿದೆ.
Director General and Inspector General of Police (DG&IGP) M A Saleem on Saturday issued new guidelines to the traffic policemen in the state.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am