ಬ್ರೇಕಿಂಗ್ ನ್ಯೂಸ್
01-06-25 10:08 pm HK News Desk ಕರ್ನಾಟಕ
ಶಿವಮೊಗ್ಗ, ಜೂನ್ 1 : ರಾಜ್ಯದಲ್ಲಿ ವೈಮಾನಿಕ ಸೌಲಭ್ಯ ವಿಸ್ತರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ತರಬೇತಿ ಸಂಸ್ಥೆ ಸ್ಥಾಪಿಸಲು ಮುಂದಾಗಿದೆ. ಆಮೂಲಕ ವಿಮಾನ ನಿಲ್ದಾಣ ರೆಡಿಯಾಗಿದ್ದರೂ, ಬಳಕೆಗೆ ಬಾರದ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಸದುದ್ದೇಶಕ್ಕೆ ಬಳಸಿಕೊಳ್ಳಲು ಮುಂದಾಗಿದೆ.
ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರದ ಅಧೀನದ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ (ಕೆಎಸ್ಐಐಡಿಸಿ) ನಿರ್ವಹಣೆ ಮಾಡುತ್ತಿದ್ದು ಇದೀಗ ವೈಮಾನಿಕ ತರಬೇತಿ ಸಂಸ್ಥೆ ಆರಂಭಿಸಲು ಟೆಂಡರ್ ಆಹ್ವಾನಿಸಿದೆ.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಎಫ್ಟಿಒ ಸ್ಥಾಪನೆಗಾಗಿ 3,500 ಚದರ ಮೀ. ವಿಸ್ತೀರ್ಣದ ಜಾಗ ನೀಡಲಾಗುತ್ತಿದ್ದು, ಅದರಲ್ಲಿ 1,500 ಚದರ ಮೀ. ಅನ್ನು ವಿಮಾನಗಳ ಹ್ಯಾಂಗರ್ಗಳಿಗೆ, 2 ಸಾವಿರ ಚದರ ಮೀ. ತರಗತಿ ಕೊಠಡಿ, ಕಚೇರಿಗಳಿಗಾಗಿ ಬಳಸಿಕೊಳ್ಳಲಾಗುತ್ತದೆ. 2000 ಚದರ ಮೀಟರ್ ಜಾಗವನ್ನು ಟರ್ಮಿನಲ್ ಹೊರ ಭಾಗದಲ್ಲಿ ನೀಡಲಾಗುತ್ತಿದೆ. ಇಲ್ಲಿ ಕ್ಲಾಸ್ರೂಂ, ಸಿಮ್ಯುಲೇಟರ್ ವಿಭಾಗ, ಗ್ರಂಥಾಲಯ, ರೇಡಿಯೋ ಟೆಲಿಫೋನಿ ತರಬೇತಿ, ಟೆಸ್ಟಿಂಗ್ ರೂಮ್, ಕಚೇರಿಗಳು ಸೇರಿದಂತೆ ವಿವಿಧ ಕೊಠಡಿಗಳನ್ನು ನಿರ್ಮಿಸಲಾಗುತ್ತದೆ.
ಕೆಎಸ್ಐಐಡಿಸಿ ಸಂಸ್ಥೆಯು ಫೈರ್ ಸೇಫ್ಟಿ, ಆಂಬ್ಯುಲೆನ್ಸ್ ಸೌಲಭ್ಯ, ಏರ್ ಟ್ರಾಫಿಕ್ ಕಂಟ್ರೋಲ್, ರನ್ ವೇ ನಿರ್ವಹಣೆ ಮಾಡಲಿದೆ. ತರಬೇತಿ ಸಂಸ್ಥೆ ಆರಂಭಿಸುವ ಏಜೆನ್ಸಿಯು ತನ್ನ ವ್ಯಾಪ್ತಿಯ ವಿದ್ಯುತ್ ಬಿಲ್, ಸೆಕ್ಯೂರಿಟಿ ಸೇರಿದಂತೆ ವಿವಿಧ ನಿರ್ವಹಣೆಗಳನ್ನು ತಾನೆ ಮಾಡಿಕೊಳ್ಳಬೇಕು. ಅಲ್ಲದೆ, ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ), ನಾಗರಿಕ ವಿಮಾನಯಾನ ಇಲಾಖೆ ಸೂಚಿಸಿರುವ ನಿಯಮಗಳ ಪ್ರಕಾರ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.
ಪ್ರತಿ ವರ್ಷ 100 ಮಂದಿಗೆ ತರಬೇತಿ ನೀಡುವ ಗುರಿ ಇದೆ. ತರಬೇತಿ ಸಂಸ್ಥೆ ಆರಂಭಗೊಂಡ ಮೊದಲ ವರ್ಷ 50 ಅಭ್ಯರ್ಥಿಗಳನ್ನು ದಾಖಲು ಮಾಡಲಾಗುತ್ತದೆ. ಮೂರನೇ ವರ್ಷದ ಹೊತ್ತಿಗೆ 100 ಅಭ್ಯರ್ಥಿಗಳನ್ನು ದಾಖಲು ಮಾಡಿಕೊಳ್ಳಬೇಕು. ಶೇ.25 ಸೀಟುಗಳನ್ನು ಕರ್ನಾಟಕದ ವಿದ್ಯಾರ್ಥಿಗಳು ಮತ್ತು ಮಹಿಳೆಯರಿಗೆ ಕಾಯ್ದಿರಿಸಬೇಕು. ಅವರಿಗೆ ಶುಲ್ಕ ವಿನಾಯಿತಿ ಸಹ ನೀಡಬೇಕು. ಏಜೆನ್ಸಿಯು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದರೂ ಅದಕ್ಕೆ ಮುನ್ನ ಕೆಎಸ್ಐಐಡಿಸಿ ಅನುಮತಿ ಪಡೆಯಬೇಕು.
ಪ್ರತಿ ಚದರ ಮೀಟರ್ಗೆ ವಾರ್ಷಿಕ 650 ರೂ.ಗಳನ್ನು ಕೆಎಸ್ಐಐಡಿಸಿಗೆ ಏಜೆನ್ಸಿ ಸಂಸ್ಥೆ ಪಾವತಿಸಬೇಕು. ಪ್ರತಿ ಮೂರು ವರ್ಷಕ್ಕೆ ಈ ದರ ಶೇ.15ರಷ್ಟು ಹೆಚ್ಚಳವಾಗಲಿದೆ. ವಿಮಾನ ನಿಲ್ದಾಣ ಮತ್ತು ರನ್ವೇ ಬಳಕೆ ಮಾಡಿಕೊಳ್ಳುವಾಗ ಕೆಎಸ್ಐಐಡಿಸಿಯೊಂದಿಗೆ ಮಾಹಿತಿ ಪಡೆಯಬೇಕು. ದೈನಂದಿನ ಕಾರ್ಯಾಚರಣೆ, ಸರ್ಕಾರದ ವಿಮಾನಗಳು, ವಿವಿಐಪಿ ವಿಮಾನಗಳಿಗೆ ಮೊದಲ ಆದ್ಯತೆ ನೀಡಬೇಕು. ತರಬೇತಿ ಸಂಸ್ಥೆ ಕಾರ್ಯಾರಂಭ ಮಾಡಿದ ಮೂರು ತಿಂಗಳ ಒಳಗೆ ಮೂರು ವಿಮಾನಗಳನ್ನು ಹೊಂದಿಸಿಕೊಳ್ಳಬೇಕು ಎಂಬ ಷರತ್ತುಗಳನ್ನು ಹಾಕಲಾಗಿದೆ.
Flight Training Academy Planned at Shivamogga Airport, Govt Invites Tenders.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm