ಬ್ರೇಕಿಂಗ್ ನ್ಯೂಸ್
06-06-25 09:03 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.6 : ಕಾಲ್ತುಳಿತ ಪ್ರಕರಣದಲ್ಲಿ ನಗರ ಪೊಲೀಸ್ ಕಮಿಷನರ್ ದಯಾನಂದ್ ಅವರನ್ನ ಅಮಾನತುಗೊಳಿಸಿದ ರಾಜ್ಯ ಸರ್ಕಾರದ ಆದೇಶದ ವಿರುದ್ಧ ರಾಜ್ಯದೆಲ್ಲೆಡೆ ಆಕ್ರೋಶ ಕೇಳಿಬರುತ್ತಿದ್ದರೆ, ಮಡಿವಾಳ ಠಾಣೆಯ ಹೆಡ್ ಕಾನ್ಸ್ಟೇಬಲ್ ಒಬ್ಬರು ರಾಜಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿ ರಾಜ್ಯದ ಗಮನ ಸೆಳೆದಿದ್ದಾರೆ.
ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ಸರ್ಕಾರ ವಿನಾಕಾರಣ ಅಮಾನತು ಶಿಕ್ಷೆ ನೀಡಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಇವೆಲ್ಲದರ ಮಧ್ಯೆ ಪೊಲೀಸ್ ಇಲಾಖೆಯದ್ದೇ ಸಿಬ್ಬಂದಿ ನರಸಿಂಹರಾಜು, ಪೊಲೀಸ್ ಅಧಿಕಾರಿಗಳ ವಿರುದ್ಧ ಸರ್ಕಾರದ ಕ್ರಮ ಕೈಗೊಂಡಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಿ ಪೊಲೀಸ್ ವಶವಾಗಿದ್ದಾರೆ.

ಮಡಿವಾಳ ಠಾಣೆಯ ಹೆಡ್ ಕಾನ್ಸ್ಟೇಬಲ್ ನರಸಿಂಹರಾಜು ಸರ್ಕಾರದ ನಡೆಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ತೆರಳಿದ್ದರು. ಈ ವೇಳೆ ಕೈಯಲ್ಲಿ ಅಂಬೇಡ್ಕರ್ ಫೋಟೋ ಹಿಡಿದು, ಕಪ್ಪುಪಟ್ಟಿ ಧರಿಸಿ ರಾಜಭವನದ ಎದುರು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ರದ್ದು ಪಡಿಸಬೇಕು. ಆಮೂಲಕ ಪೊಲೀಸ್ ಇಲಾಖೆಗೆ ನೈತಿಕ ಸ್ಥೈರ್ಯ ತುಂಬಬೇಕು ಎಂದು ಆಗ್ರಹ ಮಾಡಿದ್ದಾರೆ. ಅವರನ್ನು ಕೂಡಲೇ ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬುಧವಾರ ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತಕ್ಕೆ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾಗರೋಪಾದಿಯಲ್ಲಿ ಜನ ನೆರೆದಿದ್ದು ನೂಕುನುಗ್ಗಲು ಉಂಟಾಗಿ ದುರಂತ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಸಿಎಂ ಸಿದ್ದರಾಮಯ್ಯ ಅವರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದರು.
Police Constable Protests Against Suspension of Commissioner Dayanand; Wears Black Band, Demonstrates Outside Raj Bhavan.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm