ಬ್ರೇಕಿಂಗ್ ನ್ಯೂಸ್
06-06-25 09:03 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.6 : ಕಾಲ್ತುಳಿತ ಪ್ರಕರಣದಲ್ಲಿ ನಗರ ಪೊಲೀಸ್ ಕಮಿಷನರ್ ದಯಾನಂದ್ ಅವರನ್ನ ಅಮಾನತುಗೊಳಿಸಿದ ರಾಜ್ಯ ಸರ್ಕಾರದ ಆದೇಶದ ವಿರುದ್ಧ ರಾಜ್ಯದೆಲ್ಲೆಡೆ ಆಕ್ರೋಶ ಕೇಳಿಬರುತ್ತಿದ್ದರೆ, ಮಡಿವಾಳ ಠಾಣೆಯ ಹೆಡ್ ಕಾನ್ಸ್ಟೇಬಲ್ ಒಬ್ಬರು ರಾಜಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿ ರಾಜ್ಯದ ಗಮನ ಸೆಳೆದಿದ್ದಾರೆ.
ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ಸರ್ಕಾರ ವಿನಾಕಾರಣ ಅಮಾನತು ಶಿಕ್ಷೆ ನೀಡಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಇವೆಲ್ಲದರ ಮಧ್ಯೆ ಪೊಲೀಸ್ ಇಲಾಖೆಯದ್ದೇ ಸಿಬ್ಬಂದಿ ನರಸಿಂಹರಾಜು, ಪೊಲೀಸ್ ಅಧಿಕಾರಿಗಳ ವಿರುದ್ಧ ಸರ್ಕಾರದ ಕ್ರಮ ಕೈಗೊಂಡಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಿ ಪೊಲೀಸ್ ವಶವಾಗಿದ್ದಾರೆ.
ಮಡಿವಾಳ ಠಾಣೆಯ ಹೆಡ್ ಕಾನ್ಸ್ಟೇಬಲ್ ನರಸಿಂಹರಾಜು ಸರ್ಕಾರದ ನಡೆಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ತೆರಳಿದ್ದರು. ಈ ವೇಳೆ ಕೈಯಲ್ಲಿ ಅಂಬೇಡ್ಕರ್ ಫೋಟೋ ಹಿಡಿದು, ಕಪ್ಪುಪಟ್ಟಿ ಧರಿಸಿ ರಾಜಭವನದ ಎದುರು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ರದ್ದು ಪಡಿಸಬೇಕು. ಆಮೂಲಕ ಪೊಲೀಸ್ ಇಲಾಖೆಗೆ ನೈತಿಕ ಸ್ಥೈರ್ಯ ತುಂಬಬೇಕು ಎಂದು ಆಗ್ರಹ ಮಾಡಿದ್ದಾರೆ. ಅವರನ್ನು ಕೂಡಲೇ ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬುಧವಾರ ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತಕ್ಕೆ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾಗರೋಪಾದಿಯಲ್ಲಿ ಜನ ನೆರೆದಿದ್ದು ನೂಕುನುಗ್ಗಲು ಉಂಟಾಗಿ ದುರಂತ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಸಿಎಂ ಸಿದ್ದರಾಮಯ್ಯ ಅವರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದರು.
Police Constable Protests Against Suspension of Commissioner Dayanand; Wears Black Band, Demonstrates Outside Raj Bhavan.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm