ಬ್ರೇಕಿಂಗ್ ನ್ಯೂಸ್
09-06-25 04:41 pm HK News Desk ಕರ್ನಾಟಕ
ಚಿತ್ರದುರ್ಗ, ಜೂ 09: ಎರಡನೇ ಮದುವೆಗೆ ಹಸೆಮಣೆಗೆ ಏರಲು ಸಿದ್ಧವಾಗಿದ್ದ ಪತಿಗೆ ಮೊದಲ ಪತ್ನಿ ಚಪ್ಪಲಿ ಏಟು ಕೊಟ್ಟ ಘಟನೆ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆಯ ರೂಪನಗರ ಗ್ರಾಮದ ಕಾರ್ತಿಕ್ ನಾಯ್ಕ ಎರಡನೇ ಮದುವೆಗೆ ಮುಂದಾಗಿದ್ದ ಆರೋಪಿ.
ಆರೋಪಿ ಕಾರ್ತಿಕ್ ನಾಯ್ಕ ಎರಡನೇ ಮದುವೆ ಮಾಡಿಕೊಳ್ಳಲು ಮುಂದಾಗಿದ್ದ ಯುವತಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಚಿತ್ರದುರ್ಗ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕಾರ್ತಿಕ್ ನಾಯ್ಕ್, ಪೋಷಕರಾದ ಮಹೇಶ್ ನಾಯ್ಕ್, ವೈಶಾಲಿ ಹಾಗೂ ಸಹೋದರಿ ಮೇಘಶ್ರೀ ಅವರನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ.



ತನ್ನನ್ನು ಕಾರ್ತಿಕ್ ಮೋಹನ್ ನಾಯ್ಕ್ ಎಂದು ಹೇಳಿಕೊಂಡಿದ್ದ ಆರೋಪಿ, ಪೋಷಕರನ್ನು ಮೋಹನ್ ಮಹೇಶ್ ನಾಯ್ಕ್ ಹಾಗೂ ವಿಶಾಲಾಕ್ಷಿ ಎಂದು ಪರಿಚಯಿಸಿದ್ದ. ಅಲ್ಲದೇ, ಬ್ರೋಕರ್ ಕೂಡ ವಧುವಿನ ಕಡೆಯವರಿಂದ ಎಲ್ಲ ವಿಚಾರಗಳನ್ನೂ ಮುಚ್ಚಿಟ್ಟು, ಹುಡುಗ ತುಂಬಾ ಒಳ್ಳೆಯವನು, ಯಾವುದೇ ದುಶ್ಚಟವಿಲ್ಲ ಎಂದು ನಂಬಿಸಿದ್ದ. ಕಾರ್ತಿಕ್ ಕೂಡ ಯುವತಿಯ ಮನೆಯವರೊಂದಿಗೆ ನಂಬಿಕೆ ಬರುವಂತೆ ಮಾತನಾಡಿಕೊಂಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೇ, ಮದುವೆಗೂ ಮುನ್ನವೇ ಕಾರ್ತಿಕ್ ಕಡೆಯವರು ಮದುವೆಗೆ ಹಣದ ಅಗತ್ಯತೆ ಇದೆ. ಬಳಿಕ ಮರಳಿಸುತ್ತೇವೆ ಎಂದು ಹೇಳಿ ಯುವತಿ ಕಡೆಯವರಿಂದ ಐದು ಲಕ್ಷ ರೂ. ಸಾಲ ಪಡೆದಿದ್ದರು. ಜೊತೆಗೆ, ಕಲ್ಯಾಣ ಮಂಟಪದ ಖರ್ಚು ಸೇರಿದಂತೆ ಮದುವೆಗೆ ಲಕ್ಷಾಂತರ ರೂ. ವ್ಯಯಿಸಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು.
ಮದುವೆ ಸಂದರ್ಭದಲ್ಲಿ ದಾವಣಗೆರೆಯೆ ನ್ಯಾಮತಿಯ ಮೊದಲ ಪತ್ನಿ ಏಕಾಏಕಿ ಮಧ್ಯೆ ಪ್ರವೇಶಿಸಿ ಹೇಳಿದ ಬಳಿಕವೇ ಕಾರ್ತಿಕ್ಗೆ ಈಗಾಗಲೇ 2021ರಲ್ಲೇ ವಿವಾಹವಾಗಿದೆ ಎಂಬ ವಿಚಾರ ಗೊತ್ತಾಯಿತು. ಅಲ್ಲದೇ, ಆತ ತನ್ನ ಹಾಗೂ ಮನೆಯವರ ಹೆಸರು ಬದಲಾಯಿಸಿ ಮೋಸ ಮಾಡಿರುವುದು ಸಹ ಮೊದಲ ಪತ್ನಿಯಿಂದ ತಿಳಿಯಿತು. ಮೊದಲೇ ಮದುವೆಯಾಗಿರುವ ವಿಚಾರವನ್ನು ಮರೆಮಾಚಿ, ನಮ್ಮಿಂದ 5 ಲಕ್ಷ ರೂ. ಪಡೆದಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
Drama at Wedding Hall, First Wife Storms Venue, Thrashes Groom Attempting Second Marriage in Chitradurga
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm