ಬ್ರೇಕಿಂಗ್ ನ್ಯೂಸ್
09-06-25 04:41 pm HK News Desk ಕರ್ನಾಟಕ
ಚಿತ್ರದುರ್ಗ, ಜೂ 09: ಎರಡನೇ ಮದುವೆಗೆ ಹಸೆಮಣೆಗೆ ಏರಲು ಸಿದ್ಧವಾಗಿದ್ದ ಪತಿಗೆ ಮೊದಲ ಪತ್ನಿ ಚಪ್ಪಲಿ ಏಟು ಕೊಟ್ಟ ಘಟನೆ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆಯ ರೂಪನಗರ ಗ್ರಾಮದ ಕಾರ್ತಿಕ್ ನಾಯ್ಕ ಎರಡನೇ ಮದುವೆಗೆ ಮುಂದಾಗಿದ್ದ ಆರೋಪಿ.
ಆರೋಪಿ ಕಾರ್ತಿಕ್ ನಾಯ್ಕ ಎರಡನೇ ಮದುವೆ ಮಾಡಿಕೊಳ್ಳಲು ಮುಂದಾಗಿದ್ದ ಯುವತಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಚಿತ್ರದುರ್ಗ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕಾರ್ತಿಕ್ ನಾಯ್ಕ್, ಪೋಷಕರಾದ ಮಹೇಶ್ ನಾಯ್ಕ್, ವೈಶಾಲಿ ಹಾಗೂ ಸಹೋದರಿ ಮೇಘಶ್ರೀ ಅವರನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ.



ತನ್ನನ್ನು ಕಾರ್ತಿಕ್ ಮೋಹನ್ ನಾಯ್ಕ್ ಎಂದು ಹೇಳಿಕೊಂಡಿದ್ದ ಆರೋಪಿ, ಪೋಷಕರನ್ನು ಮೋಹನ್ ಮಹೇಶ್ ನಾಯ್ಕ್ ಹಾಗೂ ವಿಶಾಲಾಕ್ಷಿ ಎಂದು ಪರಿಚಯಿಸಿದ್ದ. ಅಲ್ಲದೇ, ಬ್ರೋಕರ್ ಕೂಡ ವಧುವಿನ ಕಡೆಯವರಿಂದ ಎಲ್ಲ ವಿಚಾರಗಳನ್ನೂ ಮುಚ್ಚಿಟ್ಟು, ಹುಡುಗ ತುಂಬಾ ಒಳ್ಳೆಯವನು, ಯಾವುದೇ ದುಶ್ಚಟವಿಲ್ಲ ಎಂದು ನಂಬಿಸಿದ್ದ. ಕಾರ್ತಿಕ್ ಕೂಡ ಯುವತಿಯ ಮನೆಯವರೊಂದಿಗೆ ನಂಬಿಕೆ ಬರುವಂತೆ ಮಾತನಾಡಿಕೊಂಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೇ, ಮದುವೆಗೂ ಮುನ್ನವೇ ಕಾರ್ತಿಕ್ ಕಡೆಯವರು ಮದುವೆಗೆ ಹಣದ ಅಗತ್ಯತೆ ಇದೆ. ಬಳಿಕ ಮರಳಿಸುತ್ತೇವೆ ಎಂದು ಹೇಳಿ ಯುವತಿ ಕಡೆಯವರಿಂದ ಐದು ಲಕ್ಷ ರೂ. ಸಾಲ ಪಡೆದಿದ್ದರು. ಜೊತೆಗೆ, ಕಲ್ಯಾಣ ಮಂಟಪದ ಖರ್ಚು ಸೇರಿದಂತೆ ಮದುವೆಗೆ ಲಕ್ಷಾಂತರ ರೂ. ವ್ಯಯಿಸಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು.
ಮದುವೆ ಸಂದರ್ಭದಲ್ಲಿ ದಾವಣಗೆರೆಯೆ ನ್ಯಾಮತಿಯ ಮೊದಲ ಪತ್ನಿ ಏಕಾಏಕಿ ಮಧ್ಯೆ ಪ್ರವೇಶಿಸಿ ಹೇಳಿದ ಬಳಿಕವೇ ಕಾರ್ತಿಕ್ಗೆ ಈಗಾಗಲೇ 2021ರಲ್ಲೇ ವಿವಾಹವಾಗಿದೆ ಎಂಬ ವಿಚಾರ ಗೊತ್ತಾಯಿತು. ಅಲ್ಲದೇ, ಆತ ತನ್ನ ಹಾಗೂ ಮನೆಯವರ ಹೆಸರು ಬದಲಾಯಿಸಿ ಮೋಸ ಮಾಡಿರುವುದು ಸಹ ಮೊದಲ ಪತ್ನಿಯಿಂದ ತಿಳಿಯಿತು. ಮೊದಲೇ ಮದುವೆಯಾಗಿರುವ ವಿಚಾರವನ್ನು ಮರೆಮಾಚಿ, ನಮ್ಮಿಂದ 5 ಲಕ್ಷ ರೂ. ಪಡೆದಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
Drama at Wedding Hall, First Wife Storms Venue, Thrashes Groom Attempting Second Marriage in Chitradurga
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am