ಬ್ರೇಕಿಂಗ್ ನ್ಯೂಸ್
10-06-25 06:49 pm HK News Desk ಕರ್ನಾಟಕ
ಕಾರವಾರ, ಜೂ.10 : ಒಳ್ಳು ಒನಕೆಯ ನುಂಗಿ, ಕಲ್ಲು ಗೂಟವ ನುಂಗಿ.. ಕೋಡಗನ ಕೋಳಿ ನುಂಗಿತ್ತಾ... ಅನ್ನುವ ತತ್ವಪದವನ್ನು ನೀವೆಲ್ಲ ಕೇಳಿರುತ್ತೀರಿ. ಅದೇ ರೀತಿ ಇಲ್ಲಿ ಕೋಡಗನ ಬದಲು ಹಾವು ವಿಚಿತ್ರವಾಗಿ ವರ್ತಿಸಿ, ಈ ಪದ್ಯ ನೆನಪಿಸಿದೆ. ಯಾಕಂದ್ರೆ, ಇಲ್ಲೊಂದು ನಾಗರಹಾವು ಹರಿತ ಚಾಕುವನ್ನು ನುಂಗಿ ಒದ್ದಾಡಿ ಸುದ್ದಿಯಾಗಿದೆ.
ಇಲಿ, ಕೋಳಿ, ಮೊಟ್ಟೆ, ಕಪ್ಪೆಯನ್ನು ಹಾವುಗಳು ನುಂಗುವುದನ್ನು ಕಂಡಿದ್ದೇವೆ, ಕೇಳಿದ್ದೇವೆ. ಆದರೆ ತನ್ನ ಆಹಾರ ಅನ್ಕೊಂಡು ನಾಗರ ಹಾವು ಚಾಕುವನ್ನೇ ನುಂಗಿದ್ದು ಆನಂತರ ವಿಲ ವಿಲ ಒದ್ದಾಡಿದ ಪ್ರಸಂಗ ಕುಮಟಾದಲ್ಲಿ ನಡೆದಿದೆ.


ಕುಮಟಾ ತಾಲೂಕಿನ ಹೆಗಡೆಯ ಗೋವಿಂದ ನಾಯ್ಕರ ಅಡುಗೆ ಮನೆಯಲ್ಲಿದ್ದ ಚಾಕು ಮನೆಯ ಹೊರಗಡೆ ಬಿದ್ದಿತ್ತು. ಆದರೆ ಅಲ್ಲಿ ಹಾವು ಓಡಾಡುತ್ತಿರುವುದನ್ನು ಕಂಡ ಮನೆಯವರು ಸ್ಥಳಕ್ಕೆ ಹೋಗಲು ಹೆದರಿದ್ದರು. ಕೆಲ ಹೊತ್ತಲ್ಲಿ ಅಲ್ಲಿದ್ದ ಚಾಕು ಕಣ್ಮರೆಯಾಗಿತ್ತು. ಹಾವು ಮಾತ್ರ ಏನೋ ತಿಂದು ಮಲಗಿರುವಂತೆ ಬಿದ್ದುಕೊಂಡಿತ್ತು. ಹಾವು ಅಲ್ಲಿಂದ ಕದಲದೇ ಇದ್ದುದರಿಂದ ಮತ್ತು ಚಾಕು ಕೂಡ ಇಲ್ಲದಿರುವುದನ್ನು ನೋಡಿ ಅನುಮಾನದಲ್ಲಿ ಉರಗ ತಜ್ಞ ಪವನ್ ನಾಯ್ಕ ಅವರನ್ನು ಕರೆಸಿದ್ದರು.
ಸ್ಥಳಕ್ಕೆ ಬಂದು ಪರಿಶೀಲಿಸಿದಾಗ, ಹಾವು ಚಾಕು ನುಂಗಿ ಒದ್ದಾಡುತ್ತಿರುವುದು ಖಚಿತವಾಗಿದೆ. ಚಾಕುವಿನ ತುದಿ ಗಂಟಲಿನಲ್ಲಿ ಸಿಲುಕಿದ್ದು, ಅದನ್ನು ಹೊರಹಾಕಲು ಹಾವು ಒಡ್ಡಾಡುತ್ತಿರುವುದು ಕಂಡುಬಂದಿದೆ. ಚಾಕುವನ್ನು ಹೊರತೆಗೆಯದಿದ್ದರೆ ಹಾವು ಸಾಯುತ್ತದೆ ಎಂದು ಪವನ್ ಕೂಡಲೇ ಅದನ್ನು ಪಶು ಆಸ್ಪತ್ರೆಯ ಸಹಾಯಕ ಅದ್ವೈತ ಭಟ್ ಅವರ ಮನೆಗೆ ಕೊಂಡೊಯ್ದು ಅರ್ಧ ಗಂಟೆಗೂ ಆಪರೇಶನ್ ಮಾಡಿಸಿದ್ದಾರೆ. ಕೊನೆಗೆ, ಚಾಕುವನ್ನು ಹಾವಿನ ಹೊಟ್ಟೆಯಿಂದ ಹೊರ ತೆಗೆದು ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
Kumta Snake Swallows Knife in Bizarre Incident at Kumta, Rescued After Emergency Operation.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm