ಬ್ರೇಕಿಂಗ್ ನ್ಯೂಸ್
10-06-25 06:49 pm HK News Desk ಕರ್ನಾಟಕ
ಕಾರವಾರ, ಜೂ.10 : ಒಳ್ಳು ಒನಕೆಯ ನುಂಗಿ, ಕಲ್ಲು ಗೂಟವ ನುಂಗಿ.. ಕೋಡಗನ ಕೋಳಿ ನುಂಗಿತ್ತಾ... ಅನ್ನುವ ತತ್ವಪದವನ್ನು ನೀವೆಲ್ಲ ಕೇಳಿರುತ್ತೀರಿ. ಅದೇ ರೀತಿ ಇಲ್ಲಿ ಕೋಡಗನ ಬದಲು ಹಾವು ವಿಚಿತ್ರವಾಗಿ ವರ್ತಿಸಿ, ಈ ಪದ್ಯ ನೆನಪಿಸಿದೆ. ಯಾಕಂದ್ರೆ, ಇಲ್ಲೊಂದು ನಾಗರಹಾವು ಹರಿತ ಚಾಕುವನ್ನು ನುಂಗಿ ಒದ್ದಾಡಿ ಸುದ್ದಿಯಾಗಿದೆ.
ಇಲಿ, ಕೋಳಿ, ಮೊಟ್ಟೆ, ಕಪ್ಪೆಯನ್ನು ಹಾವುಗಳು ನುಂಗುವುದನ್ನು ಕಂಡಿದ್ದೇವೆ, ಕೇಳಿದ್ದೇವೆ. ಆದರೆ ತನ್ನ ಆಹಾರ ಅನ್ಕೊಂಡು ನಾಗರ ಹಾವು ಚಾಕುವನ್ನೇ ನುಂಗಿದ್ದು ಆನಂತರ ವಿಲ ವಿಲ ಒದ್ದಾಡಿದ ಪ್ರಸಂಗ ಕುಮಟಾದಲ್ಲಿ ನಡೆದಿದೆ.


ಕುಮಟಾ ತಾಲೂಕಿನ ಹೆಗಡೆಯ ಗೋವಿಂದ ನಾಯ್ಕರ ಅಡುಗೆ ಮನೆಯಲ್ಲಿದ್ದ ಚಾಕು ಮನೆಯ ಹೊರಗಡೆ ಬಿದ್ದಿತ್ತು. ಆದರೆ ಅಲ್ಲಿ ಹಾವು ಓಡಾಡುತ್ತಿರುವುದನ್ನು ಕಂಡ ಮನೆಯವರು ಸ್ಥಳಕ್ಕೆ ಹೋಗಲು ಹೆದರಿದ್ದರು. ಕೆಲ ಹೊತ್ತಲ್ಲಿ ಅಲ್ಲಿದ್ದ ಚಾಕು ಕಣ್ಮರೆಯಾಗಿತ್ತು. ಹಾವು ಮಾತ್ರ ಏನೋ ತಿಂದು ಮಲಗಿರುವಂತೆ ಬಿದ್ದುಕೊಂಡಿತ್ತು. ಹಾವು ಅಲ್ಲಿಂದ ಕದಲದೇ ಇದ್ದುದರಿಂದ ಮತ್ತು ಚಾಕು ಕೂಡ ಇಲ್ಲದಿರುವುದನ್ನು ನೋಡಿ ಅನುಮಾನದಲ್ಲಿ ಉರಗ ತಜ್ಞ ಪವನ್ ನಾಯ್ಕ ಅವರನ್ನು ಕರೆಸಿದ್ದರು.
ಸ್ಥಳಕ್ಕೆ ಬಂದು ಪರಿಶೀಲಿಸಿದಾಗ, ಹಾವು ಚಾಕು ನುಂಗಿ ಒದ್ದಾಡುತ್ತಿರುವುದು ಖಚಿತವಾಗಿದೆ. ಚಾಕುವಿನ ತುದಿ ಗಂಟಲಿನಲ್ಲಿ ಸಿಲುಕಿದ್ದು, ಅದನ್ನು ಹೊರಹಾಕಲು ಹಾವು ಒಡ್ಡಾಡುತ್ತಿರುವುದು ಕಂಡುಬಂದಿದೆ. ಚಾಕುವನ್ನು ಹೊರತೆಗೆಯದಿದ್ದರೆ ಹಾವು ಸಾಯುತ್ತದೆ ಎಂದು ಪವನ್ ಕೂಡಲೇ ಅದನ್ನು ಪಶು ಆಸ್ಪತ್ರೆಯ ಸಹಾಯಕ ಅದ್ವೈತ ಭಟ್ ಅವರ ಮನೆಗೆ ಕೊಂಡೊಯ್ದು ಅರ್ಧ ಗಂಟೆಗೂ ಆಪರೇಶನ್ ಮಾಡಿಸಿದ್ದಾರೆ. ಕೊನೆಗೆ, ಚಾಕುವನ್ನು ಹಾವಿನ ಹೊಟ್ಟೆಯಿಂದ ಹೊರ ತೆಗೆದು ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
Kumta Snake Swallows Knife in Bizarre Incident at Kumta, Rescued After Emergency Operation.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm