ಬ್ರೇಕಿಂಗ್ ನ್ಯೂಸ್
10-06-25 06:49 pm HK News Desk ಕರ್ನಾಟಕ
ಕಾರವಾರ, ಜೂ.10 : ಒಳ್ಳು ಒನಕೆಯ ನುಂಗಿ, ಕಲ್ಲು ಗೂಟವ ನುಂಗಿ.. ಕೋಡಗನ ಕೋಳಿ ನುಂಗಿತ್ತಾ... ಅನ್ನುವ ತತ್ವಪದವನ್ನು ನೀವೆಲ್ಲ ಕೇಳಿರುತ್ತೀರಿ. ಅದೇ ರೀತಿ ಇಲ್ಲಿ ಕೋಡಗನ ಬದಲು ಹಾವು ವಿಚಿತ್ರವಾಗಿ ವರ್ತಿಸಿ, ಈ ಪದ್ಯ ನೆನಪಿಸಿದೆ. ಯಾಕಂದ್ರೆ, ಇಲ್ಲೊಂದು ನಾಗರಹಾವು ಹರಿತ ಚಾಕುವನ್ನು ನುಂಗಿ ಒದ್ದಾಡಿ ಸುದ್ದಿಯಾಗಿದೆ.
ಇಲಿ, ಕೋಳಿ, ಮೊಟ್ಟೆ, ಕಪ್ಪೆಯನ್ನು ಹಾವುಗಳು ನುಂಗುವುದನ್ನು ಕಂಡಿದ್ದೇವೆ, ಕೇಳಿದ್ದೇವೆ. ಆದರೆ ತನ್ನ ಆಹಾರ ಅನ್ಕೊಂಡು ನಾಗರ ಹಾವು ಚಾಕುವನ್ನೇ ನುಂಗಿದ್ದು ಆನಂತರ ವಿಲ ವಿಲ ಒದ್ದಾಡಿದ ಪ್ರಸಂಗ ಕುಮಟಾದಲ್ಲಿ ನಡೆದಿದೆ.
ಕುಮಟಾ ತಾಲೂಕಿನ ಹೆಗಡೆಯ ಗೋವಿಂದ ನಾಯ್ಕರ ಅಡುಗೆ ಮನೆಯಲ್ಲಿದ್ದ ಚಾಕು ಮನೆಯ ಹೊರಗಡೆ ಬಿದ್ದಿತ್ತು. ಆದರೆ ಅಲ್ಲಿ ಹಾವು ಓಡಾಡುತ್ತಿರುವುದನ್ನು ಕಂಡ ಮನೆಯವರು ಸ್ಥಳಕ್ಕೆ ಹೋಗಲು ಹೆದರಿದ್ದರು. ಕೆಲ ಹೊತ್ತಲ್ಲಿ ಅಲ್ಲಿದ್ದ ಚಾಕು ಕಣ್ಮರೆಯಾಗಿತ್ತು. ಹಾವು ಮಾತ್ರ ಏನೋ ತಿಂದು ಮಲಗಿರುವಂತೆ ಬಿದ್ದುಕೊಂಡಿತ್ತು. ಹಾವು ಅಲ್ಲಿಂದ ಕದಲದೇ ಇದ್ದುದರಿಂದ ಮತ್ತು ಚಾಕು ಕೂಡ ಇಲ್ಲದಿರುವುದನ್ನು ನೋಡಿ ಅನುಮಾನದಲ್ಲಿ ಉರಗ ತಜ್ಞ ಪವನ್ ನಾಯ್ಕ ಅವರನ್ನು ಕರೆಸಿದ್ದರು.
ಸ್ಥಳಕ್ಕೆ ಬಂದು ಪರಿಶೀಲಿಸಿದಾಗ, ಹಾವು ಚಾಕು ನುಂಗಿ ಒದ್ದಾಡುತ್ತಿರುವುದು ಖಚಿತವಾಗಿದೆ. ಚಾಕುವಿನ ತುದಿ ಗಂಟಲಿನಲ್ಲಿ ಸಿಲುಕಿದ್ದು, ಅದನ್ನು ಹೊರಹಾಕಲು ಹಾವು ಒಡ್ಡಾಡುತ್ತಿರುವುದು ಕಂಡುಬಂದಿದೆ. ಚಾಕುವನ್ನು ಹೊರತೆಗೆಯದಿದ್ದರೆ ಹಾವು ಸಾಯುತ್ತದೆ ಎಂದು ಪವನ್ ಕೂಡಲೇ ಅದನ್ನು ಪಶು ಆಸ್ಪತ್ರೆಯ ಸಹಾಯಕ ಅದ್ವೈತ ಭಟ್ ಅವರ ಮನೆಗೆ ಕೊಂಡೊಯ್ದು ಅರ್ಧ ಗಂಟೆಗೂ ಆಪರೇಶನ್ ಮಾಡಿಸಿದ್ದಾರೆ. ಕೊನೆಗೆ, ಚಾಕುವನ್ನು ಹಾವಿನ ಹೊಟ್ಟೆಯಿಂದ ಹೊರ ತೆಗೆದು ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
Kumta Snake Swallows Knife in Bizarre Incident at Kumta, Rescued After Emergency Operation.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm