ಬ್ರೇಕಿಂಗ್ ನ್ಯೂಸ್
11-06-25 05:23 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 11 : ಸಚಿವ ಸಂಪುಟ ಪುನರ್ ರಚನೆಗೆ ಒಲವು ತೋರಿದ್ದ ದೆಹಲಿ ಹೈಕಮಾಂಡ್ ನಾಯಕರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್ ಮನವೊಲಿಸಿದ್ದು, ಸಂಪುಟ ಸರ್ಜರಿಯನ್ನು ವರ್ಷಾಂತ್ಯದ ವರೆಗೂ ಮುಂದಕ್ಕೆ ಹಾಕಿಸಿದ್ದಾರೆ.
ದೆಹಲಿಯಲ್ಲಿ ಕಾಂಗ್ರೆಸ್ ಉನ್ನತ ನಾಯಕರ ಜೊತೆಗೆ ಸಿಎಂ, ಡಿಸಿಎಂ ಸಭೆ ನಡೆಸಿದ್ದಾರೆ. ಸದ್ಯಕ್ಕೆ ಸಂಪುಟ ಪುನಾರಚನೆ ಬೇಡ ಎಂದು ಕೇಂದ್ರ ನಾಯಕರನ್ನು ಒಪ್ಪಿಸಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ. ಈಗಾಗಲೇ ಕಾಲ್ತುಳಿತ ಘಟನೆಯಿಂದ ಸರ್ಕಾರದ ವರ್ಚಸ್ಸು ಕುಸಿದಿದ್ದು, ಇದರ ನಡುವೆ ಸಚಿವರ ಬದಲಾವಣೆ ದೋಷವನ್ನು ಒಪ್ಪಿಕೊಂಡಿದ್ದೇವೆಂಬ ಸಂದೇಶ ರವಾನಿಸುತ್ತದೆ. ಹೀಗಾಗಿ, ಸದ್ಯಕ್ಕೆ ಯಾವುದೇ ಬದಲಾವಣೆ ಬೇಡ ಎಂದು ಹೇಳಿದ್ದಾರೆ. ಆದರೆ, ನವೆಂಬರ್ ವೇಳೆಗೆ ರಾಜ್ಯ ಸರ್ಕಾರ ಎರಡೂವರೆ ವರ್ಷ ಪೂರೈಸುವುದರಿಂದ ಆ ವೇಳೆಗೆ ಸರ್ಜರಿ ಪ್ರಕ್ರಿಯೆ ಖಚಿತ ಎಂದು ಹೇಳಲಾಗುತ್ತಿದೆ.
ಇದೇ ವೇಳೆ, ಕಾಲ್ತುಳಿತ ಘಟನೆಯಿಂದ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗಿದ್ದು, ಈ ವಿಚಾರದಲ್ಲಿ ಹೈಕಮಾಂಡ್ ನಾಯಕರು ಅಸಮಾಧಾನಗೊಂಡಿದ್ದು ಜನರ ವಿಶ್ವಾಸ ಗಳಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಇದೇ ವೇಳೆ, ರಾಜ್ಯ ಸರ್ಕಾರವು ಜಾತಿ ಗಣತಿಯನ್ನು ಪುನರ್ ಸಮೀಕ್ಷೆ ನಡೆಸಲು ನಿರ್ಧರಿಸಿದ್ದು, ಆಮೂಲಕ ಕಾಲ್ತುಳಿತ ಘಟನೆಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಯತ್ನ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಸಂಪುಟ ಪುನಾರಚನೆ ವಿಚಾರ ಮುನ್ನೆಲೆಗೆ ಬರುತ್ತಿದ್ದಂತೆ ಪಕ್ಷದ ಹಲವು ಹಿರಿಯ ನಾಯಕರು ಸಚಿವ ಸ್ಥಾನಕ್ಕಾಗಿ ಲಾಬಿಗೆ ಮುಂದಾಗಿದ್ದರು. ಸಚಿವರು ತಮ್ಮ ಸಚಿವಾಲಯದ ಸಾಧನೆಗಳನ್ನು ಎತ್ತಿ ತೋರಿಸುವ ಕಿರುಪುಸ್ತಕವನ್ನು ತೆಗೆದುಕೊಂಡು ದೆಹಲಿಗೆ ಭೇಟಿ ನೀಡಿದ್ದರೆ, ಸಚಿವ ಆಕಾಂಕ್ಷಿಗಳೂ ದೆಹಲಿ ಹಾದಿ ಹಿಡಿದಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಅವರೇ ಸದ್ಯಕ್ಕೆ ಬದಲಾವಣೆ ಬೇಡ ಎನ್ನುವ ಮಾತನ್ನು ಕೇಂದ್ರ ನಾಯಕರ ಮುಂದಿಟ್ಟಿದ್ದಾರೆ ಎನ್ನಲಾಗುತ್ತಿದೆ.
The much-anticipated Karnataka cabinet reshuffle has been put on hold, with Chief Minister Siddaramaiah and Deputy Chief Minister D.K. Shivakumar successfully persuading the Congress high command to defer the exercise until the end of the year.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm