ಬ್ರೇಕಿಂಗ್ ನ್ಯೂಸ್
11-06-25 05:23 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 11 : ಸಚಿವ ಸಂಪುಟ ಪುನರ್ ರಚನೆಗೆ ಒಲವು ತೋರಿದ್ದ ದೆಹಲಿ ಹೈಕಮಾಂಡ್ ನಾಯಕರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್ ಮನವೊಲಿಸಿದ್ದು, ಸಂಪುಟ ಸರ್ಜರಿಯನ್ನು ವರ್ಷಾಂತ್ಯದ ವರೆಗೂ ಮುಂದಕ್ಕೆ ಹಾಕಿಸಿದ್ದಾರೆ.
ದೆಹಲಿಯಲ್ಲಿ ಕಾಂಗ್ರೆಸ್ ಉನ್ನತ ನಾಯಕರ ಜೊತೆಗೆ ಸಿಎಂ, ಡಿಸಿಎಂ ಸಭೆ ನಡೆಸಿದ್ದಾರೆ. ಸದ್ಯಕ್ಕೆ ಸಂಪುಟ ಪುನಾರಚನೆ ಬೇಡ ಎಂದು ಕೇಂದ್ರ ನಾಯಕರನ್ನು ಒಪ್ಪಿಸಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ. ಈಗಾಗಲೇ ಕಾಲ್ತುಳಿತ ಘಟನೆಯಿಂದ ಸರ್ಕಾರದ ವರ್ಚಸ್ಸು ಕುಸಿದಿದ್ದು, ಇದರ ನಡುವೆ ಸಚಿವರ ಬದಲಾವಣೆ ದೋಷವನ್ನು ಒಪ್ಪಿಕೊಂಡಿದ್ದೇವೆಂಬ ಸಂದೇಶ ರವಾನಿಸುತ್ತದೆ. ಹೀಗಾಗಿ, ಸದ್ಯಕ್ಕೆ ಯಾವುದೇ ಬದಲಾವಣೆ ಬೇಡ ಎಂದು ಹೇಳಿದ್ದಾರೆ. ಆದರೆ, ನವೆಂಬರ್ ವೇಳೆಗೆ ರಾಜ್ಯ ಸರ್ಕಾರ ಎರಡೂವರೆ ವರ್ಷ ಪೂರೈಸುವುದರಿಂದ ಆ ವೇಳೆಗೆ ಸರ್ಜರಿ ಪ್ರಕ್ರಿಯೆ ಖಚಿತ ಎಂದು ಹೇಳಲಾಗುತ್ತಿದೆ.
ಇದೇ ವೇಳೆ, ಕಾಲ್ತುಳಿತ ಘಟನೆಯಿಂದ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗಿದ್ದು, ಈ ವಿಚಾರದಲ್ಲಿ ಹೈಕಮಾಂಡ್ ನಾಯಕರು ಅಸಮಾಧಾನಗೊಂಡಿದ್ದು ಜನರ ವಿಶ್ವಾಸ ಗಳಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಇದೇ ವೇಳೆ, ರಾಜ್ಯ ಸರ್ಕಾರವು ಜಾತಿ ಗಣತಿಯನ್ನು ಪುನರ್ ಸಮೀಕ್ಷೆ ನಡೆಸಲು ನಿರ್ಧರಿಸಿದ್ದು, ಆಮೂಲಕ ಕಾಲ್ತುಳಿತ ಘಟನೆಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಯತ್ನ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಸಂಪುಟ ಪುನಾರಚನೆ ವಿಚಾರ ಮುನ್ನೆಲೆಗೆ ಬರುತ್ತಿದ್ದಂತೆ ಪಕ್ಷದ ಹಲವು ಹಿರಿಯ ನಾಯಕರು ಸಚಿವ ಸ್ಥಾನಕ್ಕಾಗಿ ಲಾಬಿಗೆ ಮುಂದಾಗಿದ್ದರು. ಸಚಿವರು ತಮ್ಮ ಸಚಿವಾಲಯದ ಸಾಧನೆಗಳನ್ನು ಎತ್ತಿ ತೋರಿಸುವ ಕಿರುಪುಸ್ತಕವನ್ನು ತೆಗೆದುಕೊಂಡು ದೆಹಲಿಗೆ ಭೇಟಿ ನೀಡಿದ್ದರೆ, ಸಚಿವ ಆಕಾಂಕ್ಷಿಗಳೂ ದೆಹಲಿ ಹಾದಿ ಹಿಡಿದಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಅವರೇ ಸದ್ಯಕ್ಕೆ ಬದಲಾವಣೆ ಬೇಡ ಎನ್ನುವ ಮಾತನ್ನು ಕೇಂದ್ರ ನಾಯಕರ ಮುಂದಿಟ್ಟಿದ್ದಾರೆ ಎನ್ನಲಾಗುತ್ತಿದೆ.
The much-anticipated Karnataka cabinet reshuffle has been put on hold, with Chief Minister Siddaramaiah and Deputy Chief Minister D.K. Shivakumar successfully persuading the Congress high command to defer the exercise until the end of the year.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm