ಬ್ರೇಕಿಂಗ್ ನ್ಯೂಸ್
11-06-25 09:35 pm HK News Desk ಕರ್ನಾಟಕ
ಹಾಸನ, ಜೂ.11 : ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವ ಯುವಜನರ ಸಂಖ್ಯೆ ಏರುತ್ತಿದ್ದು ಕಳೆದೆರಡು ತಿಂಗಳಲ್ಲಿ ನಾಲ್ವರು ಯುವಕರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇದೀಗ 19 ವರ್ಷದ ನಿಶಾಂತ್ ಎಂಬ ಮತ್ತೊಬ್ಬ ಯುವಕ ಹೃದಯಾಘಾತಕ್ಕೆ ತುತ್ತಾಗಿದ್ದಾನೆ.
ಹೊಳೆನರಸೀಪುರ ಪಟ್ಟಣದ ನಿವಾಸಿಗಳಾದ ಚನ್ನಕೇಶವ ಮತ್ತು ಜ್ಯೋತಿ ದಂಪತಿಯ ಪುತ್ರ ನಿಶಾಂತ್ (19) ಬೆಂಗಳೂರಿನ ಜೆಪಿ ನಗರದಲ್ಲಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾನೆ. ಡಿಪ್ಲೋಮಾ ವ್ಯಾಸಂಗ ಮುಗಿಸಿದ್ದ ನಿಶಾಂತ್, ಕೈಗಾರಿಕಾ ತರಬೇತಿಗಾಗಿ 15 ದಿನಗಳ ಹಿಂದೆ ಬೆಂಗಳೂರಿಗೆ ಆಗಮಿಸಿ ಪಿಜಿಯಲ್ಲಿ ವಾಸವಿದ್ದ. ಜೂನ್ 11ರಂದು ಬೆಳಗ್ಗೆ ತನ್ನ ಕೋಣೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಬೆಳಗ್ಗೆ 10 ಗಂಟೆಯಾದರೂ ನಿಶಾಂತ್ ಬಾಗಿಲನ್ನು ತೆರೆಯದ ಕಾರಣ, ಸ್ನೇಹಿತರು ಬಾಗಿಲು ಒಡೆದು ನೋಡಿದಾಗ ಮೃತಪಟ್ಟಿರುವುದು ಗೊತ್ತಾಗಿದೆ. ಮೃತದೇಹವನ್ನು ಬೆಂಗಳೂರಿನ ಸೇಂಟ್ ಜಾನ್ ಆಸ್ಪತ್ರೆಗೆ ರವಾನಿಸಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಅವನ ಪೋಷಕರು ಮೃತದೇಹವನ್ನು ಹಾಸನಕ್ಕೆ ತರಲಿದ್ದಾರೆ. ಕೊರೊನಾ ಸಂದರ್ಭದಲ್ಲಿ ನಿಶಾಂತ್ ತಾಯಿ ಜ್ಯೋತಿ ಸಾವಿಗೀಡಾಗಿದ್ದರು.
ಹಾಸನದಲ್ಲಿ ಹೃದಯಾಘಾತ ಹೆಚ್ಚಳ
ಹಾಸನ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಐವರು ಯುವಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೆಲವತ್ತಿ ಗ್ರಾಮದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಕವನ ಕೆ.ವಿ., ಹೊಳೆನರಸೀಪುರದ ಮಡಿವಾಳ ಬಡಾವಣೆಯ ಸಂಧ್ಯಾ, ಅರಕಲಗೂಡು ತಾಲೂಕಿನ ಕಾಡನೂರು ಗ್ರಾಮದ ಅಭಿಷೇಕ್ ಮತ್ತು ಹಾಸನ ತಾಲೂಕಿನ ಅಗಲಹಳ್ಳಿ ಕೊಪ್ಪಲು ಗ್ರಾಮದ ನವೀನ್ ಕುಮಾರ್ (21) ಹೃದಯಾಘಾತಕ್ಕೆ ಬಲಿಯಾಗಿದ್ದರು. ಇದೀಗ ನಿಶಾಂತ್ ಸಾವು ಆತಂಕ ಹೆಚ್ಚಿಸಿದೆ.
In a concerning trend, Hassan district has witnessed a sharp rise in heart attack-related deaths among young people, with five reported fatalities in the last two months. The latest victim is 19-year-old Nishanth, a resident of Holenarasipura town, who died of a sudden heart attack in Bengaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am