ಬ್ರೇಕಿಂಗ್ ನ್ಯೂಸ್
14-06-25 11:05 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 14 : ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಲೋಕಾಯುಕ್ತ ಪೊಲೀಸರ ಹೆಸರಲ್ಲಿ ಸಂಗ್ರಹಿಸಿದ ಕೋಟ್ಯಂತರ ರೂ.ಗಳನ್ನು ಕ್ರಿಪ್ಟೋಕರೆನ್ಸಿಯಾಗಿ ಪರಿವರ್ತಿಸಿದ ಬಗ್ಗೆ ಮಾಹಿತಿ ಲಭಿಸಿದ್ದು ಲೋಕಾಯುಕ್ತ ಅಧಿಕಾರಿಗಳು ಕ್ರಿಪ್ಟೋ ಕರೆನ್ಸಿಯ 25ಕ್ಕೂ ಹೆಚ್ಚು ಕಂಪನಿಗಳಿಗೆ ಪತ್ರ ಬರೆದು ಮಾಹಿತಿ ಕೇಳಿದ್ದಾರೆ.
ಜೂನ್ 2 ರಂದು ಲೋಕಾಯುಕ್ತ ಪೊಲೀಸರು ಬಂಧಿಸಿದ ಚಿತ್ರದುರ್ಗದ ನಿಂಗಪ್ಪ ಸಾವಂತ್ (46ವ) ಅಲಿಯಾಸ್ ಜಿ. ನಿಂಗಪ್ಪ ಅವರ ವಿಚಾರಣೆ ವೇಳೆ, ಸರ್ಕಾರಿ ಅಧಿಕಾರಿಗಳಿಂದ ಸುಲಿಗೆ ಮಾಡಿದ್ದ ಹಣವನ್ನು ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸುತ್ತಿರುವ ಕೆಲವು ಐಪಿಎಸ್ ಅಧಿಕಾರಿಗಳು ಸೇರಿದಂತೆ ಹಲವಾರು ಹೆಸರುಗಳಲ್ಲಿ ನೋಂದಾಯಿಸಲಾದ ಕ್ರಿಪ್ಟೋಕರೆನ್ಸಿ ವ್ಯಾಲೆಟ್ಗಳಲ್ಲಿ ಹೂಡಿಕೆ ಮಾಡಿದ್ದೇನೆ ಎಂದು ತಿಳಿಸಿದ್ದಾನೆ.
ಕೇಂದ್ರೀಕೃತ ಮತ್ತು ವಿಕೇಂದ್ರೀಕೃತ ಕ್ರಿಪ್ಟೋಕರೆನ್ಸಿ ವಹಿವಾಟಿನ ಮೂಲಕ ನಿಂಗಪ್ಪ ಹೂಡಿಕೆ ಮಾಡಿದ ಒಟ್ಟು ಮೊತ್ತ ಎಷ್ಟೆಂದು ಖಚಿತಪಡಿಸಲು ಲೋಕಾಯುಕ್ತ ಪೊಲೀಸರು ಸುಮಾರು 25 ಕಂಪನಿಗಳಿಗೆ ಪತ್ರ ಬರೆದಿದ್ದಾರೆ. ಚಿತ್ರದುರ್ಗದಲ್ಲಿ ನಿಯೋಜನೆಗೊಂಡಿದ್ದ ನಿಂಗಪ್ಪನನ್ನು ಕೆಲವು ವರ್ಷಗಳ ಹಿಂದೆಯೇ ಕೆಎಸ್ಸಾರ್ಪಿ ಸೇವೆಯಿಂದ ವಜಾಗೊಳಿಸಲಾಗಿತ್ತು.
ನಿಂಗಪ್ಪನ ಮೊಬೈಲ್ ಫೋನ್ ನ್ನು ಸಿಐಡಿ ಸೈಬರ್ ವಿಭಾಗಕ್ಕೆ ಕ್ರಿಪ್ಟೋಕರೆನ್ಸಿ ವಹಿವಾಟುಗಳ ಪರಿಶೀಲನೆಗಾಗಿ ಕಳುಹಿಸಲಾಗಿದೆ. ಆರಂಭಿಕ ತನಿಖೆಯಲ್ಲಿ ಅವರು ಬೈನಾನ್ಸ್ ಮತ್ತು ಬಿಟ್ ಗೇಟ್ ಸೇರಿದಂತೆ ಎಂಟು ಕ್ರಿಪ್ಟೋಕರೆನ್ಸಿ ವಿನಿಮಯ ವೇದಿಕೆಗಳಲ್ಲಿ 4.19 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಿರುವುದು ತಿಳಿದುಬಂದಿದೆ. ನಿಂಗಪ್ಪ ಹೆಸರಿನಲ್ಲಿ, ಆತನ ಪತ್ನಿ ಚಂದ್ರಕಲಾ ಹೆಸರಿನಲ್ಲಿ ಮತ್ತು ಕೆಲವು ಅಧಿಕಾರಿಗಳ ಹೆಸರಿನಲ್ಲಿ ಹೂಡಿಕೆ ಮಾಡಲಾಗಿದೆ. ಲೋಕಾಯುಕ್ತ ಪೊಲೀಸರು ಚಿತ್ರದುರ್ಗದಲ್ಲಿರುವ ಅವರ ನಿವಾಸದಿಂದ ಸುಮಾರು 90 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ವ್ಯವಹಾರ ಹೇಗೆ ಮಾಡುತ್ತಿದ್ದ ?
ನಿಂಗಪ್ಪನ ಕಾರ್ಯ ವಿಧಾನವೆಂದರೆ ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ಮತ್ತು ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಫೋನ್ ಸಂಖ್ಯೆಯನ್ನು ತೋರಿಸುವುದು, ಲೋಕಾಯುಕ್ತದ ತನ್ನ 'ಮೂಲಗಳಿಂದ' ತನಗೆ ಹೆಸರುಗಳು ಸೋರಿಕೆಯಾದ ಅಧಿಕಾರಿಗಳಿಗೆ ಸ್ಕ್ರೀನ್ ಶಾಟ್ಗಳನ್ನು ಕಳುಹಿಸುತ್ತಿದ್ದನು. ಉನ್ನತ ಅಧಿಕಾರಿಗಳೊಂದಿಗೆ ನಿಕಟ ಸಂಬಂಧ ಹೊಂದಿದ್ದೇನೆ ಎಂಬ ಭಾವನೆ ಮೂಡಿಸುತ್ತಿದ್ದನು. "ಇಂದು ಬೆಳಗ್ಗೆ 7 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ. ಜಾಗರೂಕರಾಗಿರಿ" ಎಂಬಂತಹ ಎಚ್ಚರಿಕೆ ಸಂದೇಶಗಳನ್ನು ಕಳುಹಿಸುತ್ತಿದ್ದನು.
In a major revelation, Lokayukta officials have uncovered a massive extortion racket where crores of rupees were allegedly collected by impersonating Lokayukta police officials and later invested in cryptocurrencies. The investigation has prompted authorities to send formal requests to more than 25 cryptocurrency companies seeking transaction details.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm