ಬ್ರೇಕಿಂಗ್ ನ್ಯೂಸ್
24-06-25 01:53 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.24 : ಶಿವಮೊಗ್ಗ, ಧಾರವಾಡ, ಬೆಂಗಳೂರು, ಚಿಕ್ಕಮಗಳೂರು, ಗದಗ ಸೇರಿದಂತೆ ಎಂಟಕ್ಕೂ ಹೆಚ್ಚು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಪರಿಶೀಲನೆ ನಡೆಸಿದ್ದು ದಾಳಿ ವೇಳೆ ಕೋಟಿ ಕೋಟಿ ಆಸ್ತಿ, ಚಿನ್ನಾಭರಣ ಪತ್ತೆಯಾಗಿದೆ.
ಅಕೌಂಟೆಂಟ್ ಮನೆಯಲ್ಲಿ ಕೋಟಿ ಕೋಟಿ ಆಸ್ತಿ!
ಚಿಕ್ಕಮಗಳೂರು ನಗರಸಭೆ ಅಕೌಂಟ್ ಆಫೀಸರ್ ಲತಾಮಣಿ ಮನೆ ಮೇಲೆ ಲೋಕಾ ರೇಡ್ ನಡೆದಿದೆ. ಲತಾಮಣಿ ಮನೆಯಲ್ಲಿ ಕೋಟ್ಯಾಂತರ ಮೌಲ್ಯದ ಆಸ್ತಿ, ಚಿನ್ನಾಭರಣ ಪತ್ತೆಯಾಗಿದೆ. 300 ಗ್ರಾಂ ಚಿನ್ನ ,1 ಕೆ.ಜಿ ಬೆಳ್ಳಿ, ಕೋಟ್ಯಾಂತರ ಮೌಲ್ಯದ ಆಸ್ತಿ ಪತ್ತೆಯಾಗಿರುವ ಬಗ್ಗೆ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಜಯನಗರದ ಲತಾಮಣಿ ನಿವಾಸದಲ್ಲಿ ಶೋಧ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗ್ತಿದೆ. ಕಳೆದ 8 ವರ್ಷದಿಂದ ನಗರಸಭೆಯಲ್ಲಿ ಲತಾ ಮಣಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಲತಾ ಮಣಿ ಅವರ ಪತಿ ಚಂದ್ರಶೇಖರ್ ಕೂಡ ಸರ್ಕಾರಿ ಅಧಿಕಾರಿ ಆಗಿದ್ದು, ಚಂದ್ರಶೇಖರ್ ನಿರ್ಮಿತಿ ಕೇಂದ್ರದ ಇಂಜಿನಿಯರ್ ಆಗಿದ್ದಾರೆ.





ಟೌನ್ ಸಿಪಿಐ ಮನೆ ಮೇಲೆ ರೇಡ್
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಗದಗ ಪೊಲೀಸ್ ಠಾಣೆಯ ಟೌನ್ ಸಿಪಿಐ ಡಿ.ಬಿ ಪಾಟೀಲ್ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಶಹರ ಪೊಲೀಸ್ ಠಾಣೆ ಹಾಗೂ ಮನೆಗಳಲ್ಲಿ ಪರಿಶೀಲನೆ ನಡೆಸಲಾಗ್ತಿದೆ. ಸಿಪಿಐ ಡಿಬಿ ಪಾಟೀಲ ಮನೆಯಲ್ಲಿ ಮೂರು ಲಕ್ಷ ನಗದು ಪತ್ತೆಯಾಗಿದೆ. ಸಿಪಿಐ ಡಿ ಬಿ ಪಾಟೀಲ್ ಗೆ ಸೇರಿದ ಬಾಗಲಕೋಟೆ, ಜಮಖಂಡಿ, ಕೆರೂರ ಮನೆಗಳಲ್ಲೂ ಪರಿಶೀಲನೆ ನಡೆಸಲಾಗ್ತಿದೆ.
ಬೆಳಗಾವಿಯಲ್ಲಿ ಕರ್ನಾಟಕ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಅಶೋಕ ವಸಂತ್ ಮನೆ ಮೇಲೆ ಲೋಕಾಯುಕ್ತ ರೇಡ್ ಆಗಿದ್ದು, ಮುಖ್ಯ ಇಂಜಿನಿಯರ್ ಮನೆಯಲ್ಲಿ ವಜ್ರಾಭರಣ, ಚಿನ್ನಾಭರಣ, ಬೆಳ್ಳಿ ಹಾಗೂ ಒಂದೂವರೆ ಲಕ್ಷ ನಗದು ಪತ್ತೆಯಾಗಿದೆ. ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಅಧಿಕಾರಿ ಮನೆ ಹಾಗೂ ಧಾರವಾಡ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
In a major crackdown on alleged corruption, Lokayukta officials conducted simultaneous raids across more than eight locations in Karnataka, including Bengaluru, Shivamogga, Dharwad, Chikkamagaluru, Gadag, and Belagavi. The raids targeted the homes and offices of several government officials suspected of possessing disproportionate assets.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am