ಬ್ರೇಕಿಂಗ್ ನ್ಯೂಸ್
25-06-25 02:56 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 25 : ಬೆಂಗಳೂರು, ಉಡುಪಿ ಸೇರಿ ಹಲವಾರು ಶಿಕ್ಷಣ ಸಂಸ್ಥೆ, ಆಸ್ಪತ್ರೆ ಸೇರಿ ದೇಶದ 11 ರಾಜ್ಯಗಳ 21 ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿ ಯುವತಿಯನ್ನು ಪೊಲೀಸರು ಬಂಧಿಸಿದ್ದು ತನ್ನ ಸ್ನೇಹಿತ ಮದುವೆಯಾಗಲು ಒಪ್ಪದೇ ಇದ್ದುದಕ್ಕಾಗಿ ಈ ರೀತಿ ಮಾಡಿದ್ದೇನೆಂದು ಹೇಳಿ ಅಚ್ಚರಿ ಮೂಡಿಸಿದ್ದಾಳೆ. ತಮಿಳುನಾಡಿನ ಚೈನ್ನೈ ಮೂಲದ ರೀನಾ ಜೊಶಿಲ್ಡಾ ಎಂಬಾಕೆ ಬಂಧಿತ ಯುವತಿ.
ಗುಜರಾತಿನ ಅಹಮದಾಬಾದ್ ಪೊಲೀಸರು ಕಾರ್ಯಾಚರಣೆ ನಡೆಸಿ ಈಕೆಯನ್ನು ಬಂಧಿಸಿದ್ದಾರೆ. ಚೆನ್ನೈಯಲ್ಲಿ ಎಂಎನ್ಸಿ ಕಂಪನಿ ಡೆಲಾಯಿಟ್ ಉದ್ಯೋಗಿಯಾದ ರೀನಾ ಜೊಶಿಲ್ಡಾ ಹುಸಿ ಬಾಂಬ್ ಬೆದರಿಕೆ ಹಾಕಿ ಸಿಕ್ಕಿಬಿದ್ದಿದ್ದಾಳೆ. ಜೋಶಿಲ್ಡಾ ತನ್ನ ಸಹೋದ್ಯೋಗಿ ದಿವಿಜ್ ಪ್ರಭಾಕರ್ ಎಂಬಾತನ್ನು ಪ್ರೀತಿಸುತ್ತಿದ್ದಳು. ಆದರೆ ಆತ ಈಕೆಯ ಪ್ರೀತಿಯನ್ನು ನಿರಾಕರಿಸಿದ್ದಲ್ಲದೆ, ಮದುವೆ ಆಗೋದಕ್ಕೂ ನಿರಾಕರಣೆ ಮಾಡಿದ್ದ. ಕಾನ್ಪರೆನ್ಸ್ ಮೀಟಿಂಗ್ ನಲ್ಲಿ ದಿವಿಜ್ ಭೇಟಿಯಾಗಿದ್ದ ಯುವತಿ ಬೆಂಗಳೂರಿನಲ್ಲಿ ಭೇಟಿಯಾಗಿ ತಿಳಿಸಿದ್ದಳು. ಆದರೆ ದಿವಿಜ್ ಎಲ್ಲದಕ್ಕೂ ನಿರಾಕರಣೆ ಮಾಡಿದ್ದು ಈಕೆಯ ಸಿಟ್ಟಿಗೆ ಕಾರಣವಾಗಿತ್ತು. ಬಳಿಕ ದಿವಿಜ್ ಜೊತೆ ಮದುವೆಯಾದ ರೀತಿ ಫೋಟೋಗಳನ್ನು ಸೃಷ್ಟಿಸಿ ಜಾಲತಾಣದಲ್ಲಿ ಹಾಕಿದ್ದಳು. ಇದರಿಂದ ಬೇಸತ್ತ ದಿವಿಜ್ ಪ್ರಭಾಕರ್ ಸೈಬರ್ ಪೊಲೀಸರಿಗೆ ಕಂಪ್ಲೆಂಟ್ ಕೊಟ್ಟಿದ್ದ.
ಈ ನಡುವೆ, ದಿವಿಜ್ ಬೇರೆ ಯುವತಿಯೊಂದಿಗೆ ವಿವಾಹ ನಿಶ್ಚಯವಾಗಿದ್ದು ಸುದ್ದಿ ತಿಳಿದ ಜೋಶಿಲ್ಡಾ ಸಿಟ್ಟುಗೊಂಡು ಕಳೆದ ಫೆಬ್ರವರಿ ಮತ್ತು ಜೂನ್ ತಿಂಗಳ ನಡುವೆ ದೇಶದ ಹಲವಾರು ಸಂಸ್ಥೆಗಳ ಮಾಹಿತಿ ಪಡೆದು ಹುಸಿ ಬೆದರಿಕೆ ಹಾಕಿದ್ದಳು. ಗುಜರಾತ್, ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಮಹಾರಾಷ್ಟ್ರ ಸೇರಿದಂತೆ 12 ರಾಜ್ಯಗಳ ಶಿಕ್ಷಣ ಸಂಸ್ಥೆಗಳು, ಕ್ರೀಡಾಂಗಣಗಳು ಮತ್ತು ಆಸ್ಪತ್ರೆಗಳಿಗೆ ದಿವಿಜ್ ಹೆಸರಿನಲ್ಲಿ ಬಾಂಬ್ ಬೆದರಿಕೆ ಇಮೇಲ್ಗಳನ್ನು ಕಳುಹಿಸಿದ್ದಳು.
ಆರೋಪಿ ರೀನಾ ಉಡುಪಿ ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಳು. ಪ್ರಕರಣದಲ್ಲಿ ಆರೋಪಿಯನ್ನು ಕಸ್ಟಡಿಗೆ ಪಡೆಯಲು ಉಡುಪಿ ಪೊಲೀಸರು ಮುಂದಾಗಿದ್ದಾರೆ. ಜೂನ್ 16ರಂದು ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್ಗೆ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ದೇಶಾದ್ಯಂತ 21 ಸಂಸ್ಥೆಗಳಿಗೆ ಈಕೆಯ ಕಡೆಯಿಂದ ಹುಸಿ ಬೆದರಿಕೆಯ ಸಂದೇಶ ಹೋಗಿದ್ದು ಈ ಪೈಕಿ ಒಂದರಲ್ಲಿ ಇತ್ತೀಚೆಗೆ ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತ ಮಾಡಿಸಿದ್ದು ನಾನೇ ಅಂತಲೂ ಬರೆದುಕೊಂಡಿದ್ದಳು.
In a bizarre case that has left authorities stunned, a woman from Tamil Nadu was arrested for allegedly sending fake bomb threat emails to 21 institutions across 11 Indian states, all in the name of her former colleague who had declined her proposal for marriage.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm