ಬ್ರೇಕಿಂಗ್ ನ್ಯೂಸ್
29-06-25 10:48 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 29 : ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಗಿದ್ದ ಶ್ರೀಕೃಷ್ಣನ್ ಹರಿಹರ ಶರ್ಮಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ರಾಜಿನಾಮೆಯನ್ನು ಆಡಳಿತ ಮಂಡಳಿ ಅಂಗೀಕರಿಸಿದೆ. ನಿರ್ದಿಷ್ಟ ವೆಚ್ಚಕ್ಕೆ ಸಂಬಂಧಿಸಿ ಆಡಳಿತ ಮಂಡಳಿಯ ಜೊತೆಗೆ ತಲೆದೋರಿದ್ದ ಬಿಕ್ಕಟ್ಟು ತೀವ್ರತೆ ಪಡೆದುಕೊಂಡ ನಂತರ ಸಿಇಓ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕಾರ್ಯ ನಿರ್ವಾಹಕ ನಿರ್ದೇಶಕ ಶೇಖರ್ ರಾವ್ ಕೂಡ ಜುಲೈ 30ರೊಳಗೆ ಕೆಳಗಿಳಿಯುವ ಸಾಧ್ಯತೆ ಇದೆ.
ಕರ್ಣಾಟಕ ಬ್ಯಾಂಕ್ ಮಾಡಿದ ಒಂದು ನಿರ್ದಿಷ್ಟ ವೆಚ್ಚದ ಕುರಿತು ಶ್ರೀಕೃಷ್ಣನ್ ಹರಿಹರ ಶರ್ಮಾ ಮತ್ತು ಶೇಖರ್ ರಾವ್ ಹಾಗೂ ಬ್ಯಾಂಕಿನ ಆಡಳಿತ ಮಂಡಳಿಯ ನಡುವೆ ತಿಕ್ಕಾಟ ಏರ್ಪಟ್ಟಿತ್ತು. ಈ ಹೊಯ್ದಾಟವೀಗ ಬ್ಯಾಂಕಿನ ಅತ್ಯುನ್ನತ ಹುದ್ದೆಯಲ್ಲಿದ್ದವರು ರಾಜೀನಾಮೆ ನೀಡುವ ಹಂತಕ್ಕೆ ಬಂದಿದೆ.
ಕಳೆದ ಮೇ ತಿಂಗಳಲ್ಲಿ ಅಡಿಟ್ ರಿಪೋರ್ಟ್ ಸಂದರ್ಭದಲ್ಲಿ, ಬ್ಯಾಂಕಿನ ಪೂರ್ಣಾವಧಿ ನಿರ್ದೇಶಕರ ಅಧಿಕಾರವನ್ನು ಮೀರಿ ಇತರ ಉದ್ದೇಶಗಳಿಗಾಗಿ ಮಾಡಿದ 1.53 ಕೋಟಿ ರೂ. ವೆಚ್ಚದ ಬಗ್ಗೆ ಉಲ್ಲೇಖಿಸಲಾಗಿತ್ತು. ಇದಕ್ಕೆ ಆಡಳಿತ ಮಂಡಳಿಯ ಅನುಮೋದನೆ ಪಡೆದುಕೊಂಡಿರಲಿಲ್ಲ. ಈ ಸಂಬಂಧ ಸಿಇಒ, ಕಾರ್ಯ ನಿರ್ವಾಹಕ ನಿರ್ದೇಶಕರು ಮತ್ತು ಆಡಳಿತ ನಡುವೆ ವ್ಯತ್ಯಾಸಗಳು ಹುಟ್ಟಿಕೊಂಡಿದ್ದವು. 'ಈ ಮೊತ್ತವನ್ನು ಸಂಬಂಧಪಟ್ಟ ನಿರ್ದೇಶಕರಿಂದ ವಸೂಲಿ ಮಾಡಬಹುದು' ಎಂದು ಲೆಕ್ಕಪರಿಶೋಧಕರು ಹೇಳಿದ್ದರಿಂದ ಬಿಸಿ ತಾರಕಕ್ಕೇರಿತ್ತು.
ವೆಚ್ಚದ ಬಗ್ಗೆ ಸಿಇಓ ಹರಿಹರ ಶರ್ಮಾ ಸೂಕ್ತ ಸ್ಪಷ್ಟನೆ ನೀಡಲು ಸಾಧ್ಯವಾಗದೆ, ಅದು ಸಿಲ್ಲಿ ಮ್ಯಾಟರ್ ಎಂದಿದ್ದರು. ಇದೇ ವಿಚಾರದಲ್ಲಿ ಹುಟ್ಟಿಕೊಂಡಿದ್ದ ವಿವಾದ ಇದೀಗ ಇಬ್ಬರ ಹುದ್ದೆಯನ್ನು ಬಲಿ ಪಡೆಯುವ ಹಂತಕ್ಕೆ ತಲುಪಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಬ್ಯಾಂಕಿನ ಲಾಭದಲ್ಲಿಯೂ ಕಡಿಮೆಯಾಗಿರುವುದು ಸಿಇಓ ಮತ್ತು ಕಾರ್ಯ ನಿರ್ವಾಹಕ ನಿರ್ದೇಶಕರ ತಲೆಗೆ ಬಂದಿತ್ತು. ಇದರ ನಡುವೆ ಅನಗತ್ಯ ವೆಚ್ಚ ಎಂದು ಅಡಿಟರ್ಸ್ ಪಟ್ಟಿ ಮಾಡಿರುವುದು ಬ್ಯಾಂಕಿನ ಆಡಳಿತದಲ್ಲಿ ಸಂಚಲನ ಮೂಡಿಸಿತ್ತು.
Srikrishnan Hari Hara Sarma, the Managing Director and Chief Executive Officer of Karnataka Bank, has resigned from his position following internal disagreements with the bank’s board over financial decisions. The board has accepted his resignation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am