ಬ್ರೇಕಿಂಗ್ ನ್ಯೂಸ್
30-06-25 02:55 pm HK News Desk ಕರ್ನಾಟಕ
ಮೈಸೂರು, ಜೂ 30 : ನಾನು ಡಿ ಕೆ ಶಿವಕುಮಾರ್ ಚೆನ್ನಾಗಿಯೇ ಇದ್ದೇವೆ, ನಮ್ಮ ಸರ್ಕಾರ 5 ವರ್ಷ ಬಂಡೆಯ ರೀತಿ ಭದ್ರವಾಗಿ ಇರುತ್ತದೆ ಎಂದು ಡಿಕೆಶಿ ಕೈಹಿಡಿದು ಘೋಷಿಸಿದ ಸಿಎಂ ಸಿದ್ದರಾಮಯ್ಯ, ನಮ್ಮಬ್ಬರ ನಡುವೆ ತಂದಾಕುವ ಪ್ರಯತ್ನ ಮಾಡಿದರೂ ಅದು ಆಗುವುದಿಲ್ಲ ಎಂದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು.
ಕೆಲವು ದಿನಗಳಿಂದ ಪವರ್ ಸೆಂಟರ್ ಬದಲಾವಣೆ, ಕ್ರಾಂತಿ, 3 ತಿಂಗಳಲ್ಲಿ ಅಧಿಕಾರ ಕಳೆದುಕೊಳ್ಳಲಿರುವ ಸಿದ್ದರಾಮಯ್ಯ ಹೀಗೆ ವಿವಿಧ ವಿಚಾರಗಳು ಚರ್ಚೆಯಾಗುತ್ತಿದ್ದು, ಇದಕ್ಕೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸೂಕ್ತ ಉತ್ತರ ಕೊಟ್ಟು, ಟೀಕಿಸುವವರು ಬಾಯಿ ಮುಚ್ಚಿಸಲು ಯತ್ನಿಸಿದರು.
ಕೆಆರ್ ಎಸ್ ಗೆ ಬಾಗೀನ ಅರ್ಪಿಸುವ ಹಿನ್ನೆಲೆಯಲ್ಲಿ ಸೋಮವಾರ ಮೈಸೂರು ವಿಮಾನ ನಿಲ್ದಾಣಕ್ಕರ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದರು. ನಾವಿಬ್ಬರು ಒಟ್ಟಾಗಿಯೇ ಇದ್ದೇವೆ. ಡಿ ಕೆ ಶಿವಕುಮಾರ್ ಕೈ ಹಿಡಿದು ಮೇಲೆತ್ತಿ ನಾವು ಚೆನ್ನಾಗಿದ್ದೇವೆ ಎಂದು ಮಾಧ್ಯಮಗಳ ಕ್ಯಾಮರಾಗಳತ್ತವೂ ತೋರಿಸಿದರು. ಇನ್ನು ನಮ್ಮ ಬಗ್ಗೆ ಮಾತನಾಡುವ ಶ್ರೀರಾಮಲು ಎಷ್ಟು ಚುನಾವಣೆ ಸೋತಿದ್ದಾನೆ ಹೇಳಿ ಎಂದು ಪ್ರಶ್ನಿಸಿದರು. ಪಾರ್ಲಿಮೆಂಟ್ನಲ್ಲೂ ಸೋತ, ವಿಧಾನ ಸಭೆಯಲ್ಲೂ ಸೋತ, ಅವರೇನು ಭವಿಷ್ಯ ಹೇಳೋದು ಎಂದು ತಿರುಗೇಟು ಕೊಟ್ಟರು.
ದಸರಾ ಉದ್ಘಾಟನೆ ಮಾಡೋದು ನಾನೇ;
ದಸರಾ ಉದ್ಘಾಟನೆ ನೀವು ಮಾಡಲ್ಲ ಎಂದು ಬಿಜೆಪಿ ಹೇಳುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ಬಿಜೆಪಿಯವರು ಬರೀ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದರು. ನಾನೂ ಇವನೂ ಚೆನ್ನಾಗೆ ಇದೀವಿ. ನಾನೇ ದಸರಾ ಉದ್ಘಾಟನೆ ಮಾಡುತ್ತೇನೆ ಎಂದು ಮಾಧ್ಯಮದವರಿಗೆ ಅನಿಸಿದೆ ಅಲ್ವಾ, ಅದೇ ಸತ್ಯ ಎಂದರು.
ಸುರ್ಜೇವಾಲಾ ಭೇಟಿ ವಿಚಾರವಾಗಿ ಮಾತನಾಡಿ, ಅವರು ಈ ರಾಜ್ಯದ ಕಾಂಗ್ರೆಸ್ ಉಸ್ತುವಾರಿ. ಕಾಂಗ್ರೆಸ್ ಶಾಸಕರ ಕಷ್ಟ ಸುಖ ಕೇಳುತ್ತಾರೆ. ಪಕ್ಷ ಸಂಘಟನೆಯ ಬಗ್ಗೆ ಸಲಹೆ ಕೊಡುತ್ತಾರೆ. ಅದು ಅವರ ಕೆಲಸ, ಇದರಲ್ಲಿ ಬೇರೆ ಏನು ವಿಶೇಷ ಇಲ್ಲ ಎಂದರು.
Karnataka Chief Minister Siddaramaiah firmly dismissed ongoing speculation about a rift within the state government and rumors of leadership change, stating that both he and Deputy CM D.K. Shivakumar are working in perfect coordination and the Congress government will complete its full five-year term “as solid as a rock.”
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am