ಬ್ರೇಕಿಂಗ್ ನ್ಯೂಸ್
01-07-25 04:19 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 1 : ಆರ್ ಸಿಬಿ ತಂಡದ ಐಪಿಎಲ್ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೂರ್ವ ವಿಭಾಗದ ಹೆಚ್ಚುವರಿ ಆಯುಕ್ತ ವಿಕಾಸ್ ಕುಮಾರ್ ವಿಕಾಸ್ ಅವರ ಅಮಾನತು ರದ್ದುಗೊಳಿಸುವಂತೆ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ) ಆದೇಶ ಮಾಡಿದ್ದು ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.
ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. 64 ಮಂದಿ ಗಾಯಗೊಂಡಿದ್ದರು. ಜನದಟ್ಟಣೆ ನಿಯಂತ್ರಿಸುವಲ್ಲಿ ವೈಫಲ್ಯದಿಂದಾಗಿ ಭಾರಿ ಟೀಕೆ ವ್ಯಕ್ತವಾಗಿತ್ತು. ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ವಹಿಸಿದ್ದ ರಾಜ್ಯ ಸರ್ಕಾರ, ವಿಕಾಸ್ ಕುಮಾರ್ ಜೊತೆಗೆ ಹಿಂದಿನ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ದಯಾನಂದ್ ಸೇರಿದಂತೆ ಆರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿತ್ತು.
ಅಮಾನತು ಆದೇಶ ಪ್ರಶ್ನಿಸಿ ವಿಕಾಸ್ ಕುಮಾರ್ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿಯ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಕೆ. ಶ್ರೀವಾತ್ಸವ, ಸಂತೋಷ್ ಮೆಹ್ರಾ ನೇತೃತ್ವದ ಪೀಠ, ಜೂನ್ 24ರಂದು ಕಾಯ್ದಿರಿಸಿದ್ದ ಆದೇಶವನ್ನು ಇಂದು ಪ್ರಕಟಿಸಿದ್ದು, ವಿಕಾಸ್ ಕುಮಾರ್ ಅವರ ಅಮಾನತು ರದ್ದುಪಡಿಸಿ ಆದೇಶಿಸಿದೆ.
ವಿಕಾಸ್ ಕುಮಾರ್ ಪರ ವಾದಿಸಿದ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ, ಟ್ರಿಬ್ಯೂನಲ್ ವಿಕಾಸ್ ಕುಮಾರ್ ಅಮಾನತು ರದ್ದುಗೊಳಿಸಿದ್ದು, ಸೇವಾ ನಿಯಮಗಳ ಪ್ರಕಾರ ಅವರು ಪ್ರಯೋಜನಗಳಿಗೆ ಅರ್ಹರಾಗಿದ್ದಾರೆ ಎಂದು ದೃಢಪಡಿಸಿದರು. ದಯಾನಂದ್ ಮತ್ತು ತೆಕ್ಕಣ್ಣನವರ್ ಗೆ ಸಂಬಂಧಿಸಿದ ಪ್ರಕರಣಗಳನ್ನು ಸಿಎಟಿ ಪರಿಶೀಲಿಸುತ್ತಿದ್ದು, ಅವರ ಅಮಾನತು ರದ್ದುಗೊಳಿಸುವ ಸಾಧ್ಯತೆಯಿದೆ.
ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ಹಿಂದಿನ ಪೊಲೀಸ್ ಕಮಿಷನರ್ ದಯಾನಂದ್, ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್, ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತ ಶೇಖರ್ ಎಚ್ ತೆಕ್ಕಣ್ಣವರ್, ಸಹಾಯಕ ಪೊಲೀಸ್ ಆಯುಕ್ತ ಸಿ ಬಾಲಕೃಷ್ಣ, ಕಬ್ಬನ್ ಪಾರ್ಕ್ ಠಾಣೆಯ ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ಎ. ಕೆ. ಗಿರೀಶ್ ಅವರನ್ನು ಅಮಾನತು ಮಾಡಲಾಗಿತ್ತು.
In a significant blow to the Karnataka government, the Central Administrative Tribunal (CAT) has revoked the suspension of Bengaluru East Zone Additional Commissioner of Police Vikas Kumar in connection with the tragic stampede incident near Chinnaswamy Stadium during the Royal Challengers Bangalore (RCB) IPL victory celebrations.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am