ಬ್ರೇಕಿಂಗ್ ನ್ಯೂಸ್
01-07-25 09:57 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 1 : ಯುವಕರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಎರಡೇ ದಿನದಲ್ಲಿ ವಿದ್ಯಾರ್ಥಿ ಸೇರಿ ನಾಲ್ವರು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.
21 ವರ್ಷದ ಯುವಕ, 23 ವರ್ಷದ ವಿವಾಹಿತೆ ಮತ್ತು ಓರ್ವ ವೈದ್ಯ, ಹಾಗೂ 52 ವರ್ಷದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಭಾನುವಾರ ಡಿವಿಎಸ್ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿ ಶ್ರೀನಿಧಿ (21) ಹೃದಯಾಘಾತದಿಂದ ಸಾವನ್ನಪ್ಪಿದ್ದ. ಬಸವಗಂಗೂರಿನ ನಿವಾಸಿ ಶ್ರೀನಿಧಿಗೆ ಮುಂಜಾನೆಯೇ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಾಣಿಸಿಕೊಂಡಿತ್ತು. ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾನೆ. ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಸೋಮವಾರ ಜಿಲ್ಲೆಯಲ್ಲಿ ಮೂವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹೊಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಸಂದೀಪ್ (40) ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಆಯನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿದ್ದ ಬಾಣಂತಿ ಹರ್ಷಿತಾ (23) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹರ್ಷಿತಾ ಹಾಸನ ಜಿಲ್ಲೆಯ ಯುವಕನನ್ನು ಮದುವೆಯಾಗಿದ್ದರು. ಎ.5 ರಂದು ಎರಡನೇ ಹೆರಿಗೆಗೆ ಆಯನೂರು ಬಳಿಯ ದ್ಯಾವಿನಕೆರೆಯಲ್ಲಿರುವ ತವರು ಮನೆಗೆ ಬಂದಿದ್ದರು. ಮೇ 24 ರಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಮಗುವಿಗೆ ಜನ್ಮ ನೀಡಿ 34 ದಿನಗಳ ಅಂತರದಲ್ಲಿ ಎದೆ ನೋವು ಕಾಣಿಸಿಕೊಂಡಿತ್ತು. ಅವರನ್ನು ಆಯನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಅಲ್ಲಿಂದ ಶಿವಮೊಗ್ಗದ ಮೆಗ್ಗಾನ್ಗೆ ದಾಖಲಿಸಲು ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವಿಗೀಡಾಗಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಚಿಕ್ಕಮ್ಮನ ಮಗನ ಅಂತ್ಯಕ್ರಿಯೆಗೆ ತೆರಳಿದ್ದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಭದ್ರಾವತಿ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಮಹಿಳೆ ಸಾವಿಗೀಡಾಗಿದ್ದಾರೆ. ಮೃತರನ್ನು ಚೈತ್ರಾ (52) ಎಂದು ಗುರುತಿಸಲಾಗಿದೆ. ಹಾಸನ ಜಿಲ್ಲೆಯ ರೀತಿಯಲ್ಲೇ ಶಿವಮೊಗ್ಗದಲ್ಲೂ ಸರಣಿ ಹೃದಯಾಘಾತಕ್ಕೆ ಜನ ಬಲಿಯಾಗುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
Rising incidents of heart attacks among young people have caused concern in Shivamogga district, where four individuals, including a student, a doctor, and a young woman, have died of cardiac arrest within just two days.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm