ಬ್ರೇಕಿಂಗ್ ನ್ಯೂಸ್
            
                        02-07-25 11:02 pm Bangalore Correspondent ಕರ್ನಾಟಕ
            ಬೆಂಗಳೂರು, ಜು 02 : ಪಕ್ಷದಲ್ಲಿ ಎಲ್ಲಿಯೂ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಹಾಗುಹೋಗುಗಳನ್ನು ಗಮನಿಸಲು ರಣದೀಪ್ ಸುರ್ಜೇವಾಲ ಅವರು ಭೇಟಿ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರ ಎದುರು ಶಾಸಕರು ಅಸಮಾಧಾನ ಹೇಳಿಕೊಂಡಿದ್ದಾರೆ ಎಂದು ಕೇಳಿದಾಗ, "ಈಗಿನಿಂದಲೇ ಚುನಾವಣೆಗೆ ಹೇಗೆ ತಯಾರಿ ನಡೆಸಬೇಕು ಎಂಬುದು ಸೇರಿದಂತೆ, ಜವಾಬ್ದಾರಿಗಳ ನಿರ್ವಹಣೆ ಹೇಗೆ ಮಾಡಬೇಕು ಎಂದು ಚರ್ಚೆ ನಡೆಸಲು, ಜವಾಬ್ದಾರಿ ವಹಿಸಲು ಸುರ್ಜೆವಾಲ ಅವರು ಬಂದಿರೋದು ಎಂದರು.
ಶಾಸಕ ಇಕ್ಬಾಲ್ ಹುಸೇನ್ ಗೆ ನೋಟಿಸ್ ನೀಡಿರುವ ಬಗ್ಗೆ ಕೇಳಿದಾಗ, "ಪಕ್ಷದಲ್ಲಿ ಶಿಸ್ತು ಮುಖ್ಯ. ಅವರಿಗೂ ನೋಟಿಸ್ ನೀಡುವೆ, ಬೇರೆಯವರಿಗೂ ನೋಟಿಸ್ ನೀಡಬೇಕಾಗುತ್ತದೆ. ನನ್ನ ಹೆಸರು ಹೇಳಿ, ನನ್ನನ್ನು ಸಿಎಂ ಮಾಡಿ ಎಂದು ಹೇಳುವ ಅವಶ್ಯಕತೆಯಿಲ್ಲ. ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಇರುವಾಗ ಬೇರೆ ಹೆಸರು ಏಕೆ ?" ಎಂದರು.
ನೀವು ಪಕ್ಷ ಕಟ್ಟಲು ಕಷ್ಟಪಟ್ಟಿದ್ದೀರಿ ಆ ಕಾರಣಕ್ಕೆ ನಿಮ್ಮ ಹೆಸರು ಪ್ರಸ್ತಾಪಿಸಿದ್ದಾರೆ ಎಂದು ಕೇಳಿದಾಗ, "ನಾನೊಬ್ಬನೆ ಪಕ್ಷ ಕಟ್ಟಿದ್ದೇನೆಯೇ? ನನ್ನಂತೆ ನೂರಾರು, ಸಾವಿರಾರು ಲಕ್ಷಾಂತರ ಜನ ಪಕ್ಷ ಕಟ್ಟಿದ್ದಾರೆ. ಮೊದಲು ಅವರ ನಂಬಿಕೆ ಉಳಿಸಿಕೊಳ್ಳೋಣ" ಎಂದು ಹೇಳಿದರು.
ಸಚಿವ ಸಂಪುಟ ಸಭೆ ವಿಚಾರವಾಗಿ ಕೇಳಿದಾಗ, "ನಾಡಪ್ರಭು ಕೆಂಪೇಗೌಡರ ಮಾಗಡಿ ಸ್ಮಾರಕ ಅಭಿವೃದ್ಧಿ ಸೇರಿದಂತೆ ಬೆಂಗಳೂರಿಗೆ ಒಂದಷ್ಟು ಚಿಕ್ಕಪುಟ್ಟ ನೀರಾವರಿ ಯೋಜನೆಗಳ ಅನುಷ್ಠಾನದ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು" ಎಂದು ಹೇಳಿದರು.
"ಕೋಲಾರ, ಚಿಕ್ಕಬಳ್ಳಾಪುರ ಭಾಗಕ್ಕೆ ಈಗಾಗಲೇ ಕುಡಿಯುವ ನೀರಿನ ಯೋಜನೆಗಳನ್ನು ನೀಡಿದ್ದೇವೆ. ಬೆಂಗಳೂರು ಗ್ರಾಮಾಂತರವನ್ನು ಬೆಂಗಳೂರು ಉತ್ತರ ಎಂದು ಮರುನಾಮಕರಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಸಭೆಯಲ್ಲಿ ಇದನ್ನೂ ಪ್ರಸ್ತಾವನೆ ಮಾಡಲಾಗುವುದು" ಎಂದು ಹೇಳಿದರು.
ಬೆಂಗಳೂರು ಉತ್ತರ ಜಿಲ್ಲೆ ಮರುನಾಮಕರಣದ ಬಗ್ಗೆ ಕೇಳಿದಾಗ, "ಈ ಮೊದಲು ಕನಕಪುರ, ಚನ್ನಪಟ್ಟಣ, ರಾಮನಗರ ಭಾಗಗಳು ಹಾಗೂ ನಾನು ಪ್ರತಿನಿಧಿಸಿದ್ದ ಜಿಲ್ಲಾ ಪಂಚಾಯತಿ ಸದಸ್ಯನಾಗಿದ್ದಾಗ ಬೆಂಗಳೂರು ಗ್ರಾಮಾಂತರ ಕ್ಷೇತ್ರವಾಗಿತ್ತು. ಬೆಂಗಳೂರು ದಕ್ಷಿಣ ಎಂದು ನಾಮಕರಣವಾದ ನಂತರ ಈ ಭಾಗದ ಶಾಸಕರ ಮನವಿ ಮೇರೆಗೆ ತೀರ್ಮಾನಕ್ಕೆ ಬರಲಾಗುವುದು" ಎಂದರು.
            
            
            Deputy Chief Minister D.K. Shivakumar on Tuesday clarified that there is no discontent within the Congress party in Karnataka and dismissed speculation about leadership changes, firmly stating, “There is no need to say ‘Make me CM’. When Siddaramaiah is already the Chief Minister, why bring up another name?”
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm