ಬ್ರೇಕಿಂಗ್ ನ್ಯೂಸ್
04-07-25 06:52 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4 : ಕನ್ನಡದ ನಟಿ ಮತ್ತು ರಾಜಕಾರಣಿಯೂ ಆಗಿರುವ ಭಾವನಾ ರಾಮಣ್ಣ ಮದುವೆಯಾಗದೆ ತಾಯಿಯಾಗುತ್ತಿದ್ದಾರೆ. ಅವರೀಗ ಆರು ತಿಂಗಳ ಗರ್ಭಿಣಿಯಾಗಿದ್ದು ಅವಳಿ ಮಕ್ಕಳಿಗೆ ಜನ್ಮ ನೀಡಲು ಮುಂದಾಗಿದ್ದಾರೆ. ಐವಿಎಫ್ ಮೂಲಕ ಭಾವನಾ ಗರ್ಭ ಧರಿಸಿದ್ದು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಇನ್ಸ್ಟಾ ಖಾತೆಯಲ್ಲಿ ಭಾವನಾ ತನ್ನ ಭಾವನೆಗಳನ್ನು ಹಂಚಿಕೊಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಎದುರಾದ ನೆಟ್ಟಿಗರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. 40ರ ಆಸುಪಾಸಿನಲ್ಲಿ ತಾವು ಗರ್ಭಿಣಿಯಾಗಲು ನಿರ್ಧರಿಸಿದ್ದು ಯಾಕೆ..? ಆ ದಾರಿ ಹೇಗಿತ್ತು..? ತಂದೆ ಇಲ್ಲದೆ ಮಕ್ಕಳು ಹೇಗೆ ಬೆಳೆಯಬಹುದು..? ಯಾಕೆ ಸೂಕ್ತ ವಯಸ್ಸಿದ್ದಾಗಲೇ ತಾಯ್ತನದ ಬಗ್ಗೆ ಆಸಕ್ತಿ ಇರಲಿಲ್ಲ ಅನ್ನುವ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಪ್ರಸ್ತಾಪಿಸಿದ್ದಾರೆ.

"ಇದು ನನ್ನ ಹೊಸ ಅಧ್ಯಾಯ, ಹೊಸ ಲಯ, ನಾನು ಇದನ್ನು ಹೇಳುತ್ತೇನೆಂದು ಎಂದಿಗೂ ಊಹಿಸಿರಲಿಲ್ಲ, ಆದರೆ ಇಲ್ಲಿ ನಾನು ಅವಳಿ ಮಕ್ಕಳೊಂದಿಗೆ ಆರು ತಿಂಗಳ ಗರ್ಭಿಣಿಯಾಗಿದ್ದೇನೆ. ನನಗೆ 20-30 ವರ್ಷ ಇದ್ದಾಗ ತಾಯ್ತನದ ಆಸೆ ನನ್ನ ಮನಸ್ಸಿನಲ್ಲಿ ಇರಲಿಲ್ಲ. 40 ವರ್ಷ ತುಂಬಿದಾಗ, ಆ ಆಸೆಯನ್ನು ನಿರಾಕರಿಸಲಾಗಲಿಲ್ಲ. ಒಂಟಿ ಮಹಿಳೆಯಾಗಿ, ದಾರಿ ಸುಲಭವಾಗಿರಲಿಲ್ಲ. ಅನೇಕ ಐವಿಎಫ್ ಸೆಂಟರ್ಗಳು ನನ್ನನ್ನು ತಿರಸ್ಕಾರ ಮಾಡಿದ್ದವು. ಬಳಿಕ ನಾನು ಡಾ. ಸುಷ್ಮಾರನ್ನು ಭೇಟಿಯಾದೆ. ಅವರು ನನ್ನ ಮೇಲೆ ಯಾವುದೇ ಯಾವುದೇ ಕೀಳು ಭಾವನೆ ಪಡದೇ ಸ್ವಾಗತಿಸಿದ್ರು. ಅವರ ಬೆಂಬಲದೊಂದಿಗೆ, ನಾನು ನನ್ನ ಮೊದಲ ಪ್ರಯತ್ನದಲ್ಲೇ ಗರ್ಭಿಣಿಯಾಗಿದ್ದೇನೆ.
ನನ್ನ ತಂದೆ, ಒಡಹುಟ್ಟಿದವರು ಮತ್ತು ಪ್ರೀತಿ ಪಾತ್ರರು ಹೆಮ್ಮೆ ಮತ್ತು ಪ್ರೀತಿಯಿಂದ ನನ್ನ ಪಕ್ಕದಲ್ಲಿ ನಿಂತರು. ಕೆಲವರು ನನ್ನ ಆಯ್ಕೆಯನ್ನು ಪ್ರಶ್ನಿಸಿದರು, ಆದರೆ ನನ್ನ ಮನಸ್ಸಿನಲ್ಲಿ ನಾನು ಎಲ್ಲದಕ್ಕೂ ಸಿದ್ಧಳಾಗಿದ್ದೆ. ನನ್ನ ಮಕ್ಕಳಿಗೆ ತಂದೆ ಇಲ್ಲದಿರಬಹುದು. ಆದರೆ ಅವರು ಕಲೆ, ಸಂಗೀತ, ಸಂಸ್ಕೃತಿ ಮತ್ತು ಬೇಷರತ್ತಾದ ಪ್ರೀತಿಯಿಂದ ತುಂಬಿದ ಮನೆಯಲ್ಲಿ ಬೆಳೆಯುತ್ತಾರೆ. ದಯೆ, ಆತ್ಮವಿಶ್ವಾಸ ಮತ್ತು ಹೆಮ್ಮೆಯಿಂದ ಬೆಳೆಯುತ್ತಾರೆ. ನಾನು ರೆಬೆಲ್ ಆಗಲು ಈ ಮಾರ್ಗವನ್ನು ಆರಿಸಿಕೊಂಡಿಲ್ಲ, ನನ್ನ ಸತ್ಯವನ್ನು ಗೌರವಿಸಲು ನಾನು ಈ ಮಾರ್ಗವನ್ನ ಆಯ್ಕೆ ಮಾಡಿಕೊಂಡೆ. ನನ್ನ ಕಥೆ, ಒಬ್ಬಳೇ ಒಬ್ಬಳು ಮಹಿಳೆಯಾದರೂ ತನ್ನನ್ನು ತಾನು ನಂಬುವಂತೆ ಪ್ರೇರೇಪಿಸಿದರೆ ಸಾಕು. ಶೀಘ್ರದಲ್ಲೇ, ಎರಡು ಪುಟ್ಟ ಆತ್ಮಗಳು ನನ್ನನ್ನು ಅಮ್ಮ ಎಂದು ಕರೆಯುತ್ತವೆ ಹಾಗೂ ಅದೇ ಎಲ್ಲವೂ ಆಗಿರುತ್ತದೆ" ಎಂದು ಬರೆದಿದ್ದಾರೆ.
Bhavana, who shared her joy about becoming a mother, said that she is legally becoming a mother through IVF without getting married. Bhavana, who is about to give birth to two children as a single parent, is expecting twins through IVF.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am