ಬ್ರೇಕಿಂಗ್ ನ್ಯೂಸ್
04-07-25 10:18 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4 : ರಾಜ್ಯದಲ್ಲಿ ಹಾಸನ, ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಹೃದಯಘಾತದಿಂದ ಸರಣಿ ಸಾವು ಸಂಭವಿಸುತ್ತಿರುವುದು ಸರ್ಕಾರದ ನಿದ್ದೆಗೆಡಿಸಿದೆ. ಸರಣಿ ಹೃದಯಾಘಾತಕ್ಕೇನು ಕಾರಣ ಎಂಬ ಬಗ್ಗೆ ಅಧ್ಯಯನಕ್ಕೆ ರಾಜ್ಯ ಸರ್ಕಾರ ಎರಡು ಪ್ರತ್ಯೇಕ ತಾಂತ್ರಿಕ ಸಮಿತಿಗಳನ್ನು ರಚಿಸಿದ್ದು ತಜ್ಞರು ಅಧ್ಯಯನ ವರದಿ ತಯಾರಿಸುತ್ತಿದ್ದಾರೆ. ಶುಕ್ರವಾರ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಬೆಂಗಳೂರಿನಲ್ಲಿ ಸಭೆ ನಡೆಸಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ತಾಂತ್ರಿಕ ಸಲಹಾ ಸಮಿತಿ ಅಧ್ಯಯನ ನಡೆಸಿ ಸಿದ್ಧಪಡಿಸಿರುವ ವರದಿಯಲ್ಲಿ ಹಲವು ಮಹತ್ವದ ವಿಚಾರಗಳಿದ್ದು ಕೊರೋನಾ ರೋಗದ ಬಳಿಕ ಹೃದಯಾಘಾತ ಹೆಚ್ಚಳವಾಗಿರುವುದನ್ನು ಎತ್ತಿ ತೋರಿಸಿದ್ದಾರೆ. ಕೊರೊನಾ ಸೋಂಕಿಗೊಳಗಾಗಿ ಗುಣಮುಖರಾದವರಿಗೆ ಹೃದಯ ಸಮಸ್ಯೆ ಹೆಚ್ಚು ಕಾಡುತ್ತಿದೆ. ಆದರೆ ಹೃದಯಘಾತಕ್ಕೆ ಕರೋನಾ ಲಸಿಕೆ ಕಾರಣವಲ್ಲ. ಕೊರೊನಾ ವೈರಸ್ ಸಮಸ್ಯೆ ಉಂಟು ಮಾಡುತ್ತಿದೆ ಎಂಬ ಮಾಹಿತಿಗಳು ವರದಿಯಲ್ಲಿವೆಯಂತೆ.
ವರದಿಯಲ್ಲಿ ಹೃದಯದ ಕಾರ್ಯಕ್ಷಮತೆ ಕಡಿಮೆಯಾಗಿರುವ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ. ಕೊರೋನಾ ಬಂದ ಮೂರು ವರ್ಷದ ಬಳಿಕ ಹೃದಯ ಸಮಸ್ಯೆ ಕಂಡುಬರುತ್ತಿರುವುದು ಯಾಕೆ ಎನ್ನುವ ಬಗ್ಗೆಯೂ ತಜ್ಞರು ವಿಶ್ಲೇಷಣೆ ನಡೆಸಿದ್ದಾರೆ. ಅಲ್ಲದೆ, ಕರೋನಾ ಸೋಂಕಿಗೆ ಒಳಗಾದವರಿಗೆ ನಿದ್ರಾಹೀನತೆ, ಸುಸ್ತು, ಉಸಿರಾಟದ ಸಮಸ್ಯೆ, ಅತಿಯಾದ ಬೊಜ್ಜು ಕಂಡುಬರುತ್ತಿರುವುದನ್ನು ಪತ್ತೆ ಮಾಡಿದ್ದಾರೆ.
ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆದಿದ್ದು ಸಭೆಯಲ್ಲಿ ವರದಿಯ ಬಗ್ಗೆ ಚರ್ಚೆ ನಡೆಸಲಾಯಿತು. ಸಾಧಕ-ಬಾಧಕಗಳ ಕುರಿತು ಚರ್ಚಿಸಿದ್ದು ಅಂತಿಮ ವರದಿ ತಯಾರಿಸಿ ಮುಖ್ಯಮಂತ್ರಿಗೆ ನೀಡಲಿದ್ದಾರೆ.
The Karnataka government has launched an in-depth technical study into the alarming rise in heart attack cases reported across several districts, including Bengaluru and Hassan, following a series of sudden deaths that have raised public concern.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm