ಬ್ರೇಕಿಂಗ್ ನ್ಯೂಸ್
06-07-25 06:25 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 6 : ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯಾರೂ ನಿರಾಕರಿಸಲು ಸಾಧ್ಯವಿಲ್ಲ ಎಂದು ಮಹಾತ್ಮ ಗಾಂಧಿ ಮತ್ತು ಸಿ. ರಾಜಗೋಪಾಲಾಚಾರಿ (ರಾಜಾಜಿ) ಅವರ ಮೊಮ್ಮಗ, ಮಾಜಿ ರಾಜ್ಯಪಾಲ, ಲೇಖಕ ಗೋಪಾಲಕೃಷ್ಣ ಗಾಂಧಿ ಹೇಳಿದ್ದಾರೆ.
ಇಲ್ಲಿನ ಮೈಸೂರು ಸಾಹಿತ್ಯ ಸಂಭ್ರಮದಲ್ಲಿ ‘ಎ ನೇಮ್ ಇನ್ಹೆರಿಟೆಡ್, ಎ ವಾಯ್ಸ್ ಅರ್ನಡ್’ ಕುರಿತ ಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಕುರಿತ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
‘ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ನಿರಾಕರಿಸಲು ಸಾಧ್ಯವಿಲ್ಲ. ರಾಜೀವ್ ಗಾಂಧಿ ಕೂಡ ತುರ್ತು ಪರಿಸ್ಥಿತಿಯನ್ನು ಬಹಿರಂಗವಾಗಿ ವಿರೋಧಿಸಿದ್ದರು. ಸಂಸತ್ನಲ್ಲೂ ತುರ್ತು ಪರಿಸ್ಥಿತಿ ಘಟಿಸಬಾರದಿತ್ತು ಎಂದಿದ್ದರು. ಕೆಲವರಿಗೆ ಮಾತ್ರ ಇಂಥ ಧೈರ್ಯವಿರುತ್ತದೆ. ಜನರು ಮೌನವಾಗಿಯೇ ಚುನಾವಣೆ ಮೂಲಕ ಉತ್ತರ ಕೊಟ್ಟಿದ್ದರು ಎಂದು ಸ್ಮರಿಸಿದರು.
ಇಂದಿರಾ ಗಾಂಧಿ ಮಾಡಿದ ಎಲ್ಲವನ್ನೂ ಖಂಡಿಸುವ ಅಗತ್ಯ ನನಗೆ ಕಾಣುತ್ತಿಲ್ಲ. ನನ್ನ ಸಹೋದರರಾದ ರಾಜ್ಮೋಹನ್ ಮತ್ತು ರಾಮಸ್ವಾಮಿ ವಿಶೇಷ ಅನುಮತಿಯೊಂದಿಗೆ ರಾಜ್ ಘಾಟ್ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು. ಕೃಪಲಾನಿ ಸಭೆಯನ್ನುದ್ದೇಶಿಸಿ ಮಾತನಾಡಲು ಎದ್ದಾಗ, ಪೊಲೀಸರು ಅದರ ಮೇಲೆ ದಾಳಿ ಮಾಡಿ, ಸಭೆಗೆ ಯಾವುದೇ ಸಂಬಂಧವಿಲ್ಲದವರನ್ನು ಸಹ ಬಂಧಿಸಿ ಜೈಲಿಗೆ ಹಾಕಿದರು. ಬಂಧಿಸಲ್ಪಟ್ಟವರಲ್ಲಿ ನನ್ನ ಸಹೋದರರೂ ಇದ್ದರು. ಆದರೆ, ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಣಾಮ ಬೀರುತ್ತದೆ ಎಂದು ಅರಿತ ಇಂದಿರಾ ಗಾಂಧಿಯವರು, ಆದೇಶ ನೀಡಿ ಸಂಜೆಯ ವೇಳೆಗೆ ಬಿಡುಗಡೆ ಮಾಡಿಸಿದರು ಎಂದು ತಿಳಿಸಿದರು.
ಇದೇ ವೇಳೆ ತುರ್ತು ಪರಿಸ್ಥಿತಿಯನ್ನು ವಿರೋಧಿಸಿದವರ ಅಸಾಧಾರಣ ಧೈರ್ಯವನ್ನು ಗೋಪಾಲಕೃಷ್ಣ ಗಾಂಧಿ ಅವರು ಶ್ಲಾಘಿಸಿದರು. ತುರ್ತು ಪರಿಸ್ಥಿತಿ ಮತ್ತೆ ಜಗತ್ತಿನಲ್ಲಿ ಎಲ್ಲಿ ಬೇಕಾದರೂ ಮರುಕಳಿಸಬಹುದು. ಅಧಿಕಾರ ಶಾಹಿ ಹಾಗೂ ಸರ್ವಾಧಿಕಾರ ಶಕ್ತಿಯ ವಿರುದ್ಧ ಗಟ್ಟಿಯಾಗಿ ಮಾತಾಡುವ ಧೈರ್ಯ ಎಲ್ಲರಿಗೂ ಬೇಕಾಗುತ್ತದೆ. ರವೀಂದ್ರನಾಥ ಟ್ಯಾಗೋರ್ ಅವರ ‘ಭಯವಿಲ್ಲದ ಮನಸ್ಸು ಮಾತ್ರವೇ ತಲೆಯೆತ್ತಿ ನಡೆಯುತ್ತದೆ’ ಎಂಬ ಮಾತನ್ನು ನಾವು ಸ್ಮರಿಸಬೇಕು ಎಂದು ಹೇಳಿದರು.
Former Governor, author, and grandson of Mahatma Gandhi and C. Rajagopalachari, Gopalkrishna Gandhi has described the Emergency imposed in India in 1975 as a “disturbing event” that no one can deny.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am