ಬ್ರೇಕಿಂಗ್ ನ್ಯೂಸ್
11-07-25 04:22 pm HK News Desk ಕರ್ನಾಟಕ
ಬೆಳಗಾವಿ, ಜುಲೈ 11 : ರಸ್ತೆಯಲ್ಲಿ ನಡೆದುಕೊಂಡು ಹೋಗ್ತಿದ್ದ ಯೋಧನೊಬ್ಬ ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಯೋಧ ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗಲೇ ಕುಸಿದು ಬೀಳುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬೆಳಗಾವಿ ತಾಲೂಕಿನ ಅನಗೋಳ ನಿವಾಸಿ ಇಬ್ರಾಹಿಂ ದೇವಲಾಪುರ (35) ಮೃತ ಯೋಧ. ಭಾರತೀಯ ಸೇನೆಯಲ್ಲಿ ಕರ್ತವ್ಯದಲ್ಲಿದ್ದ ಇಬ್ರಾಹಿಂ ರಜೆಯಲ್ಲಿ ಊರಿಗೆ ಬಂದಿದ್ದು ರಸ್ತೆಯಲ್ಲಿ ಹೋಗುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಇಬ್ರಾಹಿಂ ಅವರು ತಲೆಸುತ್ತು ಬಂದ ರೀತಿ ಎಲ್ಲರೂ ನೋಡುತ್ತಿದ್ದಾಗಲೇ ರಸ್ತೆ ಪಕ್ಕ ನಿಂತಿದ್ದ ಯುವಕನ ಕೈ ಹಿಡಿಯುತ್ತ ನೆಲಕ್ಕೆ ಉರುಳಿದ್ದಾರೆ. ಕೂಡಲೇ ಅಲ್ಲಿದ್ದ ಜನರು ಸೇರಿದ್ದು ಆರೈಕೆ ಮಾಡಿದ್ದಾರೆ. ಇಬ್ರಾಹಿಂ ಕುಸಿದು ರಸ್ತೆಗೆ ಬಿದ್ದಿದ್ದು ಕೆಲವೇ ಹೊತ್ತಲ್ಲಿ ಸಾವು ಕಂಡಿದ್ದಾರೆ. ಸ್ಥಳೀಯರು ಎಷ್ಟೇ ಪ್ರಯತ್ನಿಸಿದರೂ ಎಚ್ಚರವಾಗದ ಕಾರಣ ಬೀಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆಸ್ಪತ್ರೆಗೆ ದಾಖಲಾಗುವಷ್ಟರಲ್ಲಿ ಇಬ್ರಾಹಿಂ ಉಸಿರು ನಿಲ್ಲಿಸಿದ್ದರು. ಬೆಳಗಾವಿಯ ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೀದರ್ ; ಅತಿಥಿ ಉಪನ್ಯಾಸಕ ಕುಸಿದು ಬಿದ್ದು ಸಾವು
ಬೀದರ್ನಲ್ಲಿ ಅತಿಥಿ ಉಪನ್ಯಾಸಕರೊಬ್ಬರು ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಹುಲಸೂರು ಸರಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕ ಡಾ.ರವಿಕುಮಾರ್(42) ಸಾವನ್ನಪ್ಪಿದವರು. ಬಸವ ಕಲ್ಯಾಣದಿಂದ ಹುಲಸೂರಿಗೆ ಕರ್ತವ್ಯಕ್ಕೆಂದು ತೆರಳುತ್ತಿದ್ದಾಗ ಎದೆ ನೋವು ಕಾಣಿಸಿತ್ತು.
ಇದೇ ವೇಳೆ, ಇದ್ದಕ್ಕಿದ್ದಂತೆ ಎದೆ-ಸೊಂಟ ನೋವು ಹೆಚ್ಚಾಗಿದೆ ಎಂದು ಸಹೋದ್ಯೋಗಿಗೆ ಕರೆ ಮಾಡಿ ತಿಳಿಸಿದ್ದರು. ಕಾಲೇಜಿಗೆ ಬರುವುದು ಬೇಡ ಕೂಡಲೇ ವೈದ್ಯರ ಬಳಿ ತೆರಳಲು ಸಲಹೆ ನೀಡಿದ್ದರು. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ತೆರಳಿದ್ದಾಗಲೇ ಸಾವು ಕಂಡಿದ್ದಾರೆ. 6 ವರ್ಷಗಳಿಂದ ಕನ್ನಡ ವಿಭಾಗದ ಅತಿಥಿ ಉಪನ್ಯಾಸಕರಾಗಿ ರವಿ ಕೆಲಸ ಮಾಡಿದ್ದರು.
#Belagavi: Army soldier Ibrahim Devalapur (35) dies of #heartattack while walking; incident caught on CCTV. #Bidar: Guest lecturer Dr. Ravikumar (42) dies en route to work after chest pain. Both passed away before receiving treatment. 💔
— Headline Karnataka (@hknewsonline) July 11, 2025
#HeartAttack #KarnatakaNews pic.twitter.com/3xzHcWjL2G
In two separate but equally tragic incidents in Karnataka, a serving Indian Army soldier and a college guest lecturer died after suffering sudden heart attacks, leaving their communities in shock.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm