ಬ್ರೇಕಿಂಗ್ ನ್ಯೂಸ್
12-07-25 10:47 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 12 : ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಸೋಗಾನೆಯ ಕೇಂದ್ರ ಕಾರಾಗೃಹದ ಕೈದಿಯೊಬ್ಬನ ಹೊಟ್ಟೆಯಿಂದ ಮೊಬೈಲ್ ಫೋನ್ ಹೊರಗೆ ತೆಗೆದಿದ್ದಾರೆ.
ಕೈದಿ ದೌಲತ್ ಖಾನ್ ಅಲಿಯಾಸ್ ಗೂಂಡಾ (30) ಎಂಬಾತನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ 10 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ದೌಲತ್ ಖಾನ್ ಗೆ, ಕಳೆದ ಜೂನ್ 24 ರಂದು ಹೊಟ್ಟೆ ನೋವು ತೀವ್ರವಾಗಿದ್ದು, ಜೈಲಿನ ಆಸ್ಪತ್ರೆಗೆ ಬಂದು, ತಾನು ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ತಿಳಿಸಿದ್ದ.
ಔಷಧಿ ಕೊಟ್ಟಿದ್ದರೂ ಹೊಟ್ಟೆನೋವು ಹೆಚ್ಚಾದಾಗ ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದರು. ನಂತರ ಎಕ್ಸ್ ರೇ ಮಾಡಿದ್ದ ವೈದ್ಯರಿಗೆ ಅಚ್ಚರಿ ಕಾದಿತ್ತು. ಕೈದಿ ದೌಲತ್ ನ ಹೊಟ್ಟೆಯಲ್ಲಿ ಒಂದು ಇಂಚು ಅಗಲ, ಮೂರು ಇಂಚು ಉದ್ದದ ಮೊಬೈಲ್ ಫೋನ್ ಪತ್ತೆಯಾಗಿದೆ. ಅದನ್ನು ಯಶಸ್ವಿಯಾಗಿ ಈಗ ಹೊರಗೆ ತಂದಿದ್ದಾರೆ.
ಆ ಪೋನ್ ಈಗ ಜೈಲು ಅಧಿಕಾರಿಗಳ ವಶಕ್ಕೆ ನೀಡಲಾಗಿದೆ. ಮೊಬೈಲ್ ಬಳಕೆಗೆ ಜೈಲಿನಲ್ಲಿ ನಿರ್ಬಂಧವಿದ್ದರೂ ಹೇಗೆ ಮೊಬೈಲ್ ಜೈಲಿಗೆ ತಲುಪಿತು ಎಂಬುದರ ಕುರಿತು ತನಿಖೆಗೆ ಅಧಿಕಾರಿಗಳು ಆದೇಶಿಸಿದ್ದಾರೆ. ಕೈದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಜೈಲು ಸಿಬ್ಬಂದಿ ತೊಡಗಿಸಿಕೊಡಿರುವ ಆರೋಪವೂ ಕೇಳಿಬಂದಿದೆ. ಭದ್ರತಾ ಲೋಪದ ಕುರಿತಾಗಿಯೂ ತನಿಖೆಗೆ ಮುಂದಾಗಿದ್ದಾರೆ.
In a shocking incident at the Shivamogga Central Prison, doctors at the Government McGann Hospital surgically removed a mobile phone from the stomach of an inmate, leaving medical staff stunned.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm