ಬ್ರೇಕಿಂಗ್ ನ್ಯೂಸ್
            
                        12-07-25 10:47 pm HK News Desk ಕರ್ನಾಟಕ
            ಶಿವಮೊಗ್ಗ, ಜುಲೈ 12 : ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಸೋಗಾನೆಯ ಕೇಂದ್ರ ಕಾರಾಗೃಹದ ಕೈದಿಯೊಬ್ಬನ ಹೊಟ್ಟೆಯಿಂದ ಮೊಬೈಲ್ ಫೋನ್ ಹೊರಗೆ ತೆಗೆದಿದ್ದಾರೆ.
ಕೈದಿ ದೌಲತ್ ಖಾನ್ ಅಲಿಯಾಸ್ ಗೂಂಡಾ (30) ಎಂಬಾತನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ 10 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ದೌಲತ್ ಖಾನ್ ಗೆ, ಕಳೆದ ಜೂನ್ 24 ರಂದು ಹೊಟ್ಟೆ ನೋವು ತೀವ್ರವಾಗಿದ್ದು, ಜೈಲಿನ ಆಸ್ಪತ್ರೆಗೆ ಬಂದು, ತಾನು ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ತಿಳಿಸಿದ್ದ.
ಔಷಧಿ ಕೊಟ್ಟಿದ್ದರೂ ಹೊಟ್ಟೆನೋವು ಹೆಚ್ಚಾದಾಗ ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದರು. ನಂತರ ಎಕ್ಸ್ ರೇ ಮಾಡಿದ್ದ ವೈದ್ಯರಿಗೆ ಅಚ್ಚರಿ ಕಾದಿತ್ತು. ಕೈದಿ ದೌಲತ್ ನ ಹೊಟ್ಟೆಯಲ್ಲಿ ಒಂದು ಇಂಚು ಅಗಲ, ಮೂರು ಇಂಚು ಉದ್ದದ ಮೊಬೈಲ್ ಫೋನ್ ಪತ್ತೆಯಾಗಿದೆ. ಅದನ್ನು ಯಶಸ್ವಿಯಾಗಿ ಈಗ ಹೊರಗೆ ತಂದಿದ್ದಾರೆ.
ಆ ಪೋನ್ ಈಗ ಜೈಲು ಅಧಿಕಾರಿಗಳ ವಶಕ್ಕೆ ನೀಡಲಾಗಿದೆ. ಮೊಬೈಲ್ ಬಳಕೆಗೆ ಜೈಲಿನಲ್ಲಿ ನಿರ್ಬಂಧವಿದ್ದರೂ ಹೇಗೆ ಮೊಬೈಲ್ ಜೈಲಿಗೆ ತಲುಪಿತು ಎಂಬುದರ ಕುರಿತು ತನಿಖೆಗೆ ಅಧಿಕಾರಿಗಳು ಆದೇಶಿಸಿದ್ದಾರೆ. ಕೈದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಜೈಲು ಸಿಬ್ಬಂದಿ ತೊಡಗಿಸಿಕೊಡಿರುವ ಆರೋಪವೂ ಕೇಳಿಬಂದಿದೆ. ಭದ್ರತಾ ಲೋಪದ ಕುರಿತಾಗಿಯೂ ತನಿಖೆಗೆ ಮುಂದಾಗಿದ್ದಾರೆ.
            
            
            In a shocking incident at the Shivamogga Central Prison, doctors at the Government McGann Hospital surgically removed a mobile phone from the stomach of an inmate, leaving medical staff stunned.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm