ಬ್ರೇಕಿಂಗ್ ನ್ಯೂಸ್
15-07-25 10:35 am Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 15: ‘ಇ-ಸ್ವತ್ತು' ಸರ್ಟಿಫಿಕೇಟ್ ನೀಡುವುದಕ್ಕಾಗಿ 2,000 ರೂ. ಲಂಚ ಪಡೆದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗೆ ರಾಜ್ಯ ಸರ್ಕಾರ ಕಡ್ಡಾಯ ನಿವೃತ್ತಿ ನೀಡಿ ಶಾಕ್ ಕೊಟ್ಟಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಚನ್ನೇಪುರ ಗ್ರಾಮ ಪಂಚಾಯತ್ ಪಿಡಿಒ ಹನುಮಂತಪ್ಪ ಹಂಚಿನಮನೆ, ಮಂಗಳಾಬಾಯಿ ಎಂಬವರಿಂದ 14x100 ಅಡಿ ಅಳತೆಯ ಮನೆಯೊಂದಿಗೆ ಮನೆ ಖರೀದಿಸಲು ‘ಇ-ಸ್ವತ್ತು’ ಮಂಜೂರಾತಿಗೆ ಲಂಚದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಮಾವಿನಕಟ್ಟೆ ಗ್ರಾಮದ ನಿವಾಸಿ ರಂಗನಾಥ ಬಿ.ಎಚ್. ಅವರಿಂದ ಪಿಡಿಓ 2,000 ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದರು.
ರಾಜ್ಯ ಸರ್ಕಾರವು ಜುಲೈ 31, 2023 ರಂದು ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957 ರ ನಿಯಮ 14 (ಎ) ಅಡಿಯಲ್ಲಿ ಅವರ ವಿರುದ್ಧದ ತನಿಖೆಯನ್ನು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರಿಗೆ ವಹಿಸಿತ್ತು. 2024ರ ಫೆಬ್ರವರಿ 18 ರಂದು ಉಪ ಲೋಕಾಯುಕ್ತರು, ಕರ್ನಾಟಕ ನಾಗರಿಕ ಸೇವಾ (ನಡವಳಿಕೆ) ನಿಯಮಗಳು, 1966ರ ನಿಯಮ 3 (1) (i), (ii) ಮತ್ತು (iii) ಅಡಿಯಲ್ಲಿ ಅನುಚಿತ ವರ್ತಿಸಿದ್ದರಿಂದ ಅವರಿಗೆ ಕಡ್ಡಾಯ ನಿವೃತ್ತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.
ಶಿಫಾರಸನ್ನು ಅಂಗೀಕರಿಸಿದ ರಾಜ್ಯ ಸರ್ಕಾರವು ಮಾರ್ಚ್ 10 ರಂದು ಹನುಮಂತಪ್ಪ ಹಂಚಿನಮನೆ ಅವರಿಗೆ ಶೋಕಾಸ್ ನೋಟಿಸ್ ನೀಡಿತು. ಇದಕ್ಕೆ ಉತ್ತರಿಸಿ ಅವರು ಆರೋಪಗಳನ್ನು ನಿರಾಕರಿಸಿದ್ದಲ್ಲದೆ, ತನಿಖಾಧಿಕಾರಿ ತನ್ನ ವಿರುದ್ಧದ ಆರೋಪಗಳ ಬಗ್ಗೆ ಸರಿಯಾಗಿ ವಿಚಾರಣೆ ನಡೆಸಿಲ್ಲ ಎಂದಿದ್ದರು. ವಿಚಾರಣಾ ವರದಿಯನ್ನು ಪರಿಶೀಲಿಸಿದ ರಾಜ್ಯ ಸರ್ಕಾರ ಆರೋಪ ಸಾಬೀತಾಗಿದ್ದು ಎಂದು ತೀರ್ಮಾನಿಸಿ ಪಿಡಿಓಗೆ ಕಡ್ಡಾಯ ನಿವೃತ್ತಿ ಘೋಷಿಸಿದೆ.
Hanumanthappa Hanchinamane, PDO of Channepura Grama Panchayat in Channagiri taluk of Davanagere District, was trapped by the Lokayukta police while accepting the bribe of Rs 2,000.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am