ಬ್ರೇಕಿಂಗ್ ನ್ಯೂಸ್
16-07-25 03:58 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 16 : ಸೈಬರ್ ವಂಚಕರು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಡಿಜಿಟಲ್ ಅರೆಸ್ಟ್ ಎಂದು ಹೇಳಿ ಬೆದರಿಕೆ ಹಾಕಿ ಲಕ್ಷಾಂತರ ರೂಪಾಯಿ ಹಣ ದೋಚಿದ್ದಲ್ಲದೇ, ಮತ್ತಷ್ಟು ಹಣಕ್ಕಾಗಿ ಪೀಡಿಸಿದ್ದಕ್ಕೆ ಬೆಸ್ಕಾಂ ಸಿಬ್ಬಂದಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೆಲಗೆರೆ ಗ್ರಾಮದಲ್ಲಿ ನಡೆದಿದೆ.
ಸೈಬರ್ ವಂಚಕರ ಕಿರುಕುಳದ ಬಗ್ಗೆ ಡೆತ್ ನೋಟ್ ಬರೆದಿಟ್ಟು ಬೆಸ್ಕಾಂ ಸಿಬ್ಬಂದಿ ಕುಮಾರ್ (42) ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲದೆ, ಡೆತ್ನೋಟ್ನಲ್ಲಿ ಡಿಜಿಟಲ್ ಅರೆಸ್ಟ್ ಮತ್ತು ತನಗೆ ನೀಡಿದ್ದ ಕಿರುಕುಳದ ಬಗ್ಗೆ ತಿಳಿಸಿದ್ದಾರೆ. ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ನಲ್ಲಿ ಕುಮಾರ್ ಬೆಸ್ಕಾಂ ಹೊರಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದರು. ವಿಕ್ರಮ್ ಗೋಸ್ವಾಮಿ ಎಂಬಾತ ವೀಡಿಯೋ ಕರೆ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ನೀವು ಡಿಜಿಟಲ್ ಅರೆಸ್ಟ್ ಆಗಿದ್ದೀರಿ ಎಂದು ನಂಬಿಸಿ, ಕೇಸ್ನಿಂದ ಕೈಬಿಡಲು ಹಣ ಹಾಕುವಂತೆ ಬೆದರಿಸಿದ್ದ. ಸುಮಾರು 11 ಲಕ್ಷ ಹಣವನ್ನ ತನ್ನ ಬೇರೆ ಬೇರೆ ಬ್ಯಾಂಕ್ ಅಕೌಂಟ್ಗೆ ಹಾಕಿಸಿದ್ದ. ಮತ್ತಷ್ಟು ಹಣಕ್ಕಾಗಿ ಬೆದರಿಸಿದ್ದು ಮಾನಸಿಕ ಕಿರುಕುಳಕ್ಕೆ ಬೇಸತ್ತು ಸಾವಿಗೆ ಶರಣಾಗುತ್ತಿದ್ದೇನೆ. ಜೊತೆಗೆ ತನ್ನ ಅನಾರೋಗ್ಯದ ಬಗ್ಗೆಯೂ ಉಲ್ಲೇಖಿಸಿದ್ದು ಹಣವನ್ನೆಲ್ಲ ಇವರಿಗೆ ಕೊಟ್ಟು ಕಳೆದುಕೊಂಡಿದ್ದೇನೆ ಎಂದೂ ತಿಳಿಸಿದ್ದಾರೆ.
ವಿಕ್ರಂ ಗೋಸ್ವಾಮಿ, ಸಿಬಿಐ ಅಂತ ನನಗೆ 8109931663ರ ನಂಬರ್ನಿಂದ ಫೋನ್ ಮಾಡಿ ನಿನ್ನ ಮೇಲೆ ಅರೆಸ್ಟ್ ವಾರೆಂಟ್ ಇದೆ ಎಂದು ಹೆದರಿಸಿದ್ದ. ಮೊದಲಿಗೆ ನನ್ನ ಅಕೌಂಟಿಗೆ 1,95,000 ರೂ. ಹಾಕು ಎಂದು ಅಕೌಂಟ್ ನಂಬರ್ ಕಳುಹಿಸಿದ್ದು, ನಾನು ಭಯಪಟ್ಟು ಹಣವನ್ನು ಹಾಕಿದ್ದೆ. ಆನಂತರವೂ ಫೋನ್ ಮಾಡಿ ಹಣ ಹಾಕಲು ಬೆದರಿಕೆ ಹಾಕಿದ್ದ. ನನ್ನಿಂದ ಬೇರೆ ಬೇರೆ ಖಾತೆಗಳಿಗೆ ಸುಮಾರು 11 ಲಕ್ಷ ಹಾಕಿಸಿಕೊಂಡಿದ್ದಾರೆ ಎಂದು ಬರೆಯಲಾಗಿದೆ.
ಘಟನೆ ಸಂಬಂಧ ಚನ್ನಪಟ್ಟಣ ತಾಲೂಕಿನ ಎಂ.ಕೆ.ದೊಡ್ಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದು ಪ್ರಕರಣವನ್ನು ಸೈಬರ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
In a shocking case of cybercrime-induced mental harassment, a BESCOM contract employee from Karnataka died by suicide after cyber fraudsters, posing as CBI officers, extorted over ₹11 lakh from him under the pretense of a “digital arrest.”
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am