ಬ್ರೇಕಿಂಗ್ ನ್ಯೂಸ್
17-07-25 04:50 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 17 : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಸಾಕ್ಷಿದಾರನೊಬ್ಬ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದರೂ, ಪೊಲೀಸರು ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸದೇ ಇರುವುದರಿಂದ ಈ ಬಗ್ಗೆ ಸಮಗ್ರ ತನಿಖೆಯ ಸಲುವಾಗಿ ಎಡಿಜಿಪಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಬೇಕು. ಅಲ್ಲದೆ, ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟಿನ ಹಾಲಿ ಜಡ್ಜ್ ನೇತೃತ್ವದಲ್ಲಿ ಮೇಲ್ವಿಚಾರಣೆಗೆ ನೇಮಕ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ನಿವೃತ್ತ ಜಡ್ಜ್ ಗೋಪಾಲ ಗೌಡ ಆಗ್ರಹ ಮಾಡಿದ್ದಾರೆ.
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಹಿರಿಯ ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರ ಜೊತೆಗೆ ಸುದ್ದಿಗೋಷ್ಟಿ ನಡೆಸಿದ ಅವರು, ಸಾಕ್ಷಿದಾರ ಹೇಳಿರುವ ವಿಚಾರಗಳು ಗಂಭೀರವಾಗಿದ್ದು, ಸಾರ್ವಜನಿಕರ ಗಮನ ಸೆಳೆದಿದೆ. ಮೂರು ವಾರಗಳಿಂದ ಆಗುತ್ತಿರುವ ಬೆಳವಣಿಗೆಯನ್ನು ನೋಡಿದ್ದೇನೆ. ಸಾಕ್ಷಿದಾರ ವ್ಯಕ್ತಿ ಸ್ವತಃ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ್ದಾನೆ. ಆದರೆ ತನಿಖೆ ನಡೆಸಬೇಕಾದ ಪೊಲೀಸರು ಸರಿಯಾದ ರೀತಿಯಲ್ಲಿ ಹೋಗುತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಸೂಕ್ತ ತನಿಖೆ ನಡೆಸುವ ಜವಾಬ್ದಾರಿ ಹೊಂದಿದ್ದಾರೆ. ಇದಕ್ಕಾಗಿ ಉನ್ನತ ಮತ್ತು ದಕ್ಷ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ರಚಿಸಬೇಕು ಎಂದು ಹೇಳಿದ್ದಾರೆ.
ಸಾಕ್ಷಿದಾರ ನೀಡಿರುವ ಹೇಳಿಕೆಯನ್ನು ಆಧರಿಸಿ ತನಿಖೆ ಕೈಗೊಳ್ಳಬೇಕಾಗಿದೆ. ನುರಿತ ಎಫ್ಎಸ್ಎಲ್ ಮತ್ತು ಡಿಎನ್ಎ ಟೆಸ್ಟ್ ಮಾಡುವ ತಜ್ಞರನ್ನೂ ನೇಮಕ ಮಾಡಬೇಕು. ಅಲ್ಲಿರುವ ಸಮಾಧಿಗಳನ್ನು ಅಗೆದು ಕಳೇಬರಗಳನ್ನು ತೆಗೆದು ತನಿಖೆ ನಡೆಸಬೇಕಾಗಿದೆ. ಅಲ್ಲದೆ, ತನಿಖಾ ಹಂತಗಳನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಬೇಕು ಎಂದು ಆಗ್ರಹಿಸಿದರು. ಈಗಾಗಲೇ ನಮ್ಮ ವಕೀಲರು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿದ್ದು, ಎಸ್ಐಟಿ ರಚನೆಗೆ ಮನವಿ ಮಾಡಿದ್ದಾರೆ. ವಿಶೇಷ ತನಿಖಾ ತಂಡ ರಚಿಸುವ ವಿಶ್ವಾಸ ಇದೆ ಎಂದು ಗೋಪಾಲ ಗೌಡ ಹೇಳಿದ್ದಾರೆ.
ಯಾವುದೇ ಪ್ರಭಾವಕ್ಕೆ ಒಳಗಾಗದೆ ಪ್ರಕರಣದಲ್ಲಿ ಸಂಬಂಧಪಟ್ಟವರನ್ನು ಬಂಧಿಸಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಬೇಕು. ಹಾಗಾದಲ್ಲಿ ಮಾತ್ರ ಮುಚ್ಚಿ ಹೋದ ವಿಚಾರಗಳು ಹೊರಗೆ ಬರಬಹುದು ಎಂದು ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾಜಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ದ್ವಾರಕನಾಥ್, ಹಿರಿಯ ವಕೀಲ ಬಾಲನ್ ಮತ್ತಿತರರು ಇದ್ದರು.
A witness has given a statement in court that hundreds of bodies were buried in Dharmasthala, but the police are not investigating in the right direction.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm