ಬ್ರೇಕಿಂಗ್ ನ್ಯೂಸ್
            
                        17-07-25 04:50 pm Bangalore Correspondent ಕರ್ನಾಟಕ
            ಬೆಂಗಳೂರು, ಜುಲೈ 17 : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಸಾಕ್ಷಿದಾರನೊಬ್ಬ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದರೂ, ಪೊಲೀಸರು ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸದೇ ಇರುವುದರಿಂದ ಈ ಬಗ್ಗೆ ಸಮಗ್ರ ತನಿಖೆಯ ಸಲುವಾಗಿ ಎಡಿಜಿಪಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಬೇಕು. ಅಲ್ಲದೆ, ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟಿನ ಹಾಲಿ ಜಡ್ಜ್ ನೇತೃತ್ವದಲ್ಲಿ ಮೇಲ್ವಿಚಾರಣೆಗೆ ನೇಮಕ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ನಿವೃತ್ತ ಜಡ್ಜ್ ಗೋಪಾಲ ಗೌಡ ಆಗ್ರಹ ಮಾಡಿದ್ದಾರೆ.
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಹಿರಿಯ ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರ ಜೊತೆಗೆ ಸುದ್ದಿಗೋಷ್ಟಿ ನಡೆಸಿದ ಅವರು, ಸಾಕ್ಷಿದಾರ ಹೇಳಿರುವ ವಿಚಾರಗಳು ಗಂಭೀರವಾಗಿದ್ದು, ಸಾರ್ವಜನಿಕರ ಗಮನ ಸೆಳೆದಿದೆ. ಮೂರು ವಾರಗಳಿಂದ ಆಗುತ್ತಿರುವ ಬೆಳವಣಿಗೆಯನ್ನು ನೋಡಿದ್ದೇನೆ. ಸಾಕ್ಷಿದಾರ ವ್ಯಕ್ತಿ ಸ್ವತಃ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ್ದಾನೆ. ಆದರೆ ತನಿಖೆ ನಡೆಸಬೇಕಾದ ಪೊಲೀಸರು ಸರಿಯಾದ ರೀತಿಯಲ್ಲಿ ಹೋಗುತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಸೂಕ್ತ ತನಿಖೆ ನಡೆಸುವ ಜವಾಬ್ದಾರಿ ಹೊಂದಿದ್ದಾರೆ. ಇದಕ್ಕಾಗಿ ಉನ್ನತ ಮತ್ತು ದಕ್ಷ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ರಚಿಸಬೇಕು ಎಂದು ಹೇಳಿದ್ದಾರೆ.
ಸಾಕ್ಷಿದಾರ ನೀಡಿರುವ ಹೇಳಿಕೆಯನ್ನು ಆಧರಿಸಿ ತನಿಖೆ ಕೈಗೊಳ್ಳಬೇಕಾಗಿದೆ. ನುರಿತ ಎಫ್ಎಸ್ಎಲ್ ಮತ್ತು ಡಿಎನ್ಎ ಟೆಸ್ಟ್ ಮಾಡುವ ತಜ್ಞರನ್ನೂ ನೇಮಕ ಮಾಡಬೇಕು. ಅಲ್ಲಿರುವ ಸಮಾಧಿಗಳನ್ನು ಅಗೆದು ಕಳೇಬರಗಳನ್ನು ತೆಗೆದು ತನಿಖೆ ನಡೆಸಬೇಕಾಗಿದೆ. ಅಲ್ಲದೆ, ತನಿಖಾ ಹಂತಗಳನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಬೇಕು ಎಂದು ಆಗ್ರಹಿಸಿದರು. ಈಗಾಗಲೇ ನಮ್ಮ ವಕೀಲರು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿದ್ದು, ಎಸ್ಐಟಿ ರಚನೆಗೆ ಮನವಿ ಮಾಡಿದ್ದಾರೆ. ವಿಶೇಷ ತನಿಖಾ ತಂಡ ರಚಿಸುವ ವಿಶ್ವಾಸ ಇದೆ ಎಂದು ಗೋಪಾಲ ಗೌಡ ಹೇಳಿದ್ದಾರೆ.
ಯಾವುದೇ ಪ್ರಭಾವಕ್ಕೆ ಒಳಗಾಗದೆ ಪ್ರಕರಣದಲ್ಲಿ ಸಂಬಂಧಪಟ್ಟವರನ್ನು ಬಂಧಿಸಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಬೇಕು. ಹಾಗಾದಲ್ಲಿ ಮಾತ್ರ ಮುಚ್ಚಿ ಹೋದ ವಿಚಾರಗಳು ಹೊರಗೆ ಬರಬಹುದು ಎಂದು ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾಜಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ದ್ವಾರಕನಾಥ್, ಹಿರಿಯ ವಕೀಲ ಬಾಲನ್ ಮತ್ತಿತರರು ಇದ್ದರು.
            
            
            A witness has given a statement in court that hundreds of bodies were buried in Dharmasthala, but the police are not investigating in the right direction.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm