ಬ್ರೇಕಿಂಗ್ ನ್ಯೂಸ್
18-07-25 03:38 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 18 : ಯಾದಗಿರಿ ಡಿವೈಎಸ್ಪಿ ಆಗಿ ವರ್ಗಾವಣೆಗೊಂಡಿದ್ದ ವಿಜಯಕ್ರಾಂತಿ ಅವರನ್ನು ಮಂಗಳೂರು ದಕ್ಷಿಣ ಉಪವಿಭಾಗ ಎಸಿಪಿ ಹುದ್ದೆಗೆ ಮರು ವರ್ಗಾವಣೆ ಮಾಡಲಾಗಿದೆ. ಒಂದೂವರೆ ತಿಂಗಳ ಹಿಂದೆ ಮಂಗಳೂರು ದಕ್ಷಿಣ ಎಸಿಪಿಯಾಗಿ ನಿಯೋಜಿಸಲ್ಪಟ್ಟಿದ್ದ ಪ್ರಕಾಶ್ ಸ್ವಂತ ಕೋರಿಕೆಯ ಮೇರೆಗೆ ಅಲ್ಲಿಂದ ಬೆಂಗಳೂರು ಸಿಐಡಿ ವಿಭಾಗಕ್ಕೆ ವರ್ಗ ಮಾಡಲಾಗಿದೆ.
ಯಾದಗಿರಿ ಉಪ ವಿಭಾಗಕ್ಕೆ ಡಿವೈಎಸ್ಪಿ ಆಗಿ ನೇಮಕಗೊಂಡಿದ್ದ ವಿಜಯಕ್ರಾಂತಿ ಅವರು ಅಲ್ಲಿ 20 ದಿನ ಆದರೂ ಅಧಿಕಾರ ಸ್ವೀಕರಿಸಿರಲಿಲ್ಲ. ಇದಕ್ಕೆ ಯಾದಗಿರಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಡಿಮ್ಯಾಂಡ್ ಕಾರಣ ಅನ್ನುವ ಆರೋಪ ಕೇಳಿಬಂದಿತ್ತು. ಅಲ್ಲಿಯ ಮಾಜಿ ಶಾಸಕ ರಾಜ್ಕುಮಾರ್ ತೇಲ್ಕೂರ್, ಪಾಟೀಲ್ ವಿರುದ್ಧ ಲಂಚದ ಆರೋಪ ಮಾಡಿದ್ದರು. ಯಾದಗಿರಿ ಡಿವೈಎಸ್ಪಿ ವಿಜಯಕ್ರಾಂತಿಗೆ ಪೋಸ್ಟಿಂಗ್ ಆದರೂ ಕೆಲಸಕ್ಕೆ ಹಾಜರಾಗಲು ಶಾಸಕ ಚೆನ್ನಾರೆಡ್ಡಿ ಪಾಟೀಲ್ ಮತ್ತು ಅವರ ಮಗ ಪಂಪನಗೌಡ ಪಾಟೀಲ್ ಬಿಡುತ್ತಿಲ್ಲ. 50 ಲಕ್ಷ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದಾರೆ ಅಂತ ತೇಲ್ಕೂರ್ ಆರೋಪಿಸಿದ್ದರು. ಪೋಸ್ಟಿಂಗ್ ಆಗಿ 15 ದಿನಗಳಾದ್ರೂ ಡಿವೈಎಸ್ಪಿ ವಿಜಯಕ್ರಾಂತಿಗೆ ಕೆಲಸಕ್ಕೆ ಬರದಂತೆ ಅಡ್ಡಿಪಡಿಸಿರೋದಾಗಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಡಿಜಿಪಿ ಸಲೀಂ ಅಹಮದ್ಗೆ ದೂರನ್ನೂ ನೀಡಿದ್ದರು.

ಆದರೆ ರಾಜಕುಮಾರ್ ತೇಲ್ಕೂರ್ ಆರೋಪವನ್ನ ಶಾಸಕ ಚೆನ್ನಾರೆಡ್ಡಿ ತಳ್ಳಿಹಾಕಿದ್ದಾರೆ. ಎಡಿಜಿಪಿ, ಡಿಐಜಿ ಲೆವೆಲ್ನಲ್ಲಿ ಡಿವೈಎಸ್ಪಿಗಳ ವರ್ಗಾವಣೆ ಆಗುತ್ತದೆ. ವಿನಾಕಾರಣ ನನ್ನ ತೇಜೋವಧೆ ಮಾಡೋದು ಸರಿಯಲ್ಲ. ಡಿವೈಎಸ್ಪಿ ಏನಾದ್ರೂ ಕಂಪ್ಲೆಂಟ್ ಕೊಟ್ಟಿದ್ದಾರಾ.. ಎಂದು ಪ್ರಶ್ನಿಸಿದ್ದರು. ಇದರ ಬೆನ್ನಲ್ಲೇ ವಿಜಯಕ್ರಾಂತಿ ಅವರನ್ನು ಮಂಗಳೂರಿಗೆ ವರ್ಗಾಯಿಸಿ ರಾಜ್ಯ ಸರ್ಕಾರ ಇಬ್ಬರ ಜಗಳದ ವಿವಾದಕ್ಕೆ ಇತಿಶ್ರೀ ಹಾಡಿದೆ.
ಮಂಗಳೂರು ದಕ್ಷಿಣ ಉಪ ವಿಭಾಗದಲ್ಲಿ ಒಂದೂವರೆ ವರ್ಷದಿಂದ ಧನ್ಯ ನಾಯಕ್ ಎಸಿಪಿ ಆಗಿದ್ದರು. ಅದಕ್ಕೂ ಹಿಂದೆಯೂ ಈ ಹುದ್ದೆಯಲ್ಲಿ ಮಹಿಳಾ ಅಧಿಕಾರಿಯೇ ಇದ್ದರು. ಇದೀಗ ಮತ್ತೊಮ್ಮೆ ಲೇಡಿ ಅಧಿಕಾರಿ ವಿಜಯಕ್ರಾಂತಿ ಬಂದಿದ್ದಾರೆ.
In a significant move, the Karnataka government has reappointed IPS officer Vijayakranti as the Assistant Commissioner of Police (ACP) for Mangalore South Sub-Division. This comes after Prakash, who was appointed to the post just over a month ago, sought a transfer and has now been moved to the CID division in Bengaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am