ಬ್ರೇಕಿಂಗ್ ನ್ಯೂಸ್
            
                        18-07-25 04:48 pm HK News Desk ಕರ್ನಾಟಕ
            ಮೈಸೂರು, ಜುಲೈ 18 : ಧರ್ಮಸ್ಥಳ ಪ್ರಕರಣದ ಬಗ್ಗೆ ತನಿಖೆಗೆ ಎಸ್ಐಟಿ ತಂಡ ರಚನೆ ಮಾಡಬೇಕೋ, ಬೇಡವೋ ಅಂತ ಪೊಲೀಸರ ವರದಿ ಆಧರಿಸಿ ನಿರ್ಧಾರ ಮಾಡ್ತೀವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗೋಪಾಲ ಗೌಡರು ಏನು ಹೇಳಿದ್ದಾರೋ ಅದರ ಪರವೂ ಇಲ್ಲ. ವಿರೋಧವೂ ಇಲ್ಲ. ಕಾನೂನು ಪ್ರಕಾರ ಏನು ಮಾಡಬೇಕೋ ಮಾಡುತ್ತೀವಿ. ಆತ ಹತ್ತು ವರ್ಷ ನಾಪತ್ತೆಯಾಗಿದ್ದ. ಈಗ ಬಂದು 164 ಅಡಿ ಹೇಳಿಕೆ ಕೊಟ್ಟಿದ್ದಾನೆ. ಹೆಣಗಳನ್ನು ಹೂತು ಹಾಕಿದ ಜಾಗ ತೋರಿಸ್ತೀನಿ ಎಂದಿದ್ದಾನೆ.
ಪೊಲೀಸರು ಒಂದೆರಡು ದಿನದಲ್ಲಿ ವರದಿ ಕೊಡುತ್ತಾರೆ, ಅದನ್ನು ಆಧರಿಸಿ ನಿರ್ಧಾರ ಮಾಡುತ್ತೇವೆ, ಈಗ ಎಸ್ಐಟಿ ಬಗ್ಗೆ ಮಾಡ್ತೀವಿ, ಮಾಡಲ್ಲ ಅಂತ ಹೇಳಕ್ಕೆ ಆಗಲ್ಲ. ಅಗತ್ಯ ಎನಿಸಿದರೆ ಎಸ್ಐಟಿ ಮಾಡ್ತೀವಿ. ಪ್ರಕರಣ ವಿಚಾರದಲ್ಲಿ ಸರ್ಕಾರಕ್ಕೆ ಯಾವ ಒತ್ತಡವೂ ಇಲ್ಲ. ಯಾರು ಒತ್ತಡ ಹಾಕಿದ್ರು ನಾವು ಕೇಳೋದೂ ಇಲ್ಲ ಎಂದು ಸಿದ್ದರಾಮಯ್ಯ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ್ದಾರೆ.
ಮೈಸೂರು ಆಗಮಿಸಿದ್ದ ಸಂದರ್ಭದಲ್ಲಿ ಧರ್ಮಸ್ಥಳದ ಸುತ್ತ ನೂರಾರು ಶವಗಳನ್ನ ಹೂತಿಟ್ಟಿರುವ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, ಮೇಲಿನಂತೆ ಉತ್ತರಿಸಿದ್ದಾರೆ. ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತ ಪ್ರಕರಣ ತೀವ್ರ ಸಂಚಲನ ಮೂಡಿಸಿದ್ದು ವಿಶೇಷ ತನಿಖಾ ತಂಡ ರಚಿಸಬೇಕೆಂದು ವಕೀಲರು ಮತ್ತು ಪ್ರಗತಿಪರರ ತಂಡ ಒತ್ತಾಯಿಸಿದೆ.
ಆರ್.ಸಿ.ಬಿ ಕಾಲ್ತುಳಿತ ಪ್ರಕರಣ ಕುರಿತಾಗಿ ನಿವೃತ್ತ ನ್ಯಾಯಾಧೀಶ ಮೈಕಲ್ ಡಿಕುನ್ನಾ ವರದಿ ನೀಡಿರುವುದು ಕ್ಯಾಬಿನೆಟ್ ಮಂಡನೆಯಾಗಿದೆ. ಅದರಲ್ಲಿ ಏನಿದೆ ಅಂತ ಕ್ಯಾಬಿನೆಟ್ ಮೀಟಿಂಗ್ ಬಳಿಕ ಮಾತನಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
            
            
            Chief Minister Siddaramaiah on Thursday stated that a decision on whether to form a Special Investigation Team (SIT) to probe the Dharmasthala case will be taken based on the report submitted by the police.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm