ಬ್ರೇಕಿಂಗ್ ನ್ಯೂಸ್
            
                        18-07-25 10:31 pm Bangalore Correspondent ಕರ್ನಾಟಕ
            ಬೆಂಗಳೂರು, ಜುಲೈ 18 : ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಮತ್ತು ಮೂರು ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆಗೆ ಸಂಭಾವ್ಯ ಸ್ಥಳಗಳನ್ನು ಗುರುತಿಸುವ ಬಗ್ಗೆ ಹಾಗೂ ಈ ಕುರಿತು ಪ್ರಾಥಮಿಕ ಅಧ್ಯಯನಗಳನ್ನು ನಡೆಸಲು ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ತಿಳಿಸಿದ್ದಾರೆ.
NTPC ಅಧ್ಯಯನ ಮಾಡಲು ಮೂರು ಸ್ಥಳಗಳನ್ನು ಗುರುತಿಸಿದ್ದು ಚರ್ಚೆ ನಡೆಸಲಾಗಿದೆ. ಆದರೆ ಇದನ್ನು ಸಚಿವ ಸಂಪುಟ ಸಭೆ ಒಪ್ಪಲಿಲ್ಲ. ಸಂಭಾವ್ಯ ಕಾರ್ಯ ಸಾಧ್ಯ ಪರ್ಯಾಯಗಳಿಗಾಗಿ ಇಡೀ ರಾಜ್ಯದಲ್ಲಿ ಅಧ್ಯಯನ ಮಾಡುವಂತೆ ಸೂಚಿಸಲು ನಿರ್ಧರಿಸಿದ್ದೇವೆ. ನಂತರ ರಾಜ್ಯ ಸರ್ಕಾರವು ಪರಿಣತರ ಅಭಿಪ್ರಾಯ ತೆಗೆದುಕೊಳ್ಳುತ್ತದೆ ಎಂದು ಎಚ್.ಕೆ ಪಾಟೀಲ್ ಹೇಳಿದರು.
ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪರಮಾಣು ಯೋಜನೆ ಹೊಂದುವ ಅಗತ್ಯವಿದೆ ಎಂಬುದಕ್ಕೆ ಒಪ್ಪಿದ್ದೇವೆ. ಆದರೆ ಸ್ಥಳದ ವಿಷಯದಲ್ಲಿ ಗೊಂದಲ ಇದೆ. ಎಲ್ಲಾ ಸಂಭಾವ್ಯ ಪರ್ಯಾಯಗಳನ್ನು ಅಧ್ಯಯನ ಮಾಡಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಪ್ರಸ್ತುತ NTPC ಗುರುತಿಸಿರುವ ಮೂರು ಸ್ಥಳಗಳು ವಿಜಯಪುರ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯಲ್ಲಿವೆ. ಚರ್ಚೆಯ ನಂತರ ವಿವಿಧ ಕಾರಣಗಳಿಗಾಗಿ ಅವುಗಳನ್ನು ಪರಿಗಣಿಸಲಾಗಿಲ್ಲ ಎಂದು ಎಚ್ ಕೆ ಪಾಟೀಲ್ ಹೇಳಿದರು.
ರಾಜ್ಯದಲ್ಲಿ ಪ್ರವಾಸೋದ್ಯಮ ಉತ್ತೇಜಿಸಲು ಹಂಪಿ- ಬಾದಾಮಿ- ಐಹೊಳೆ- ಪಟ್ಟದಕಲ್ಲು- ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕ ಪ್ರವಾಸಿ ಸರ್ಕ್ಯೂಟ್ ಅನ್ನು ಕರ್ನಾಟಕ ಪ್ರವಾಸೋದ್ಯಮ ಮೂಲಸೌಕರ್ಯ ಲಿಮಿಟೆಡ್ ಮೂಲಕ ಅಂದಾಜು 2,166.22 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದು ಪಾಟೀಲ್ ಹೇಳಿದರು.
ಕೋಲಾರ ಜಿಲ್ಲೆ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿರುವ 126 ಕೆರೆಗಳನ್ನು ಬೆಂಗಳೂರು ನಗರದ ಸಂಸ್ಕರಿಸಿದ ತ್ಯಾಜ್ಯ ನೀರಿನಿಂದ ತುಂಬಿಸುವ ನೀರಾವರಿ ಯೋಜನೆಯ 5 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಕೆಲಸವನ್ನು 128 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ.
            
            
            The Karnataka Cabinet has given in-principle approval to identify potential locations for establishing a nuclear power plant and three additional thermal power plants in the state, Law and Parliamentary Affairs Minister H.K. Patil announced on Thursday.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm