ಬ್ರೇಕಿಂಗ್ ನ್ಯೂಸ್
18-07-25 10:59 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 18 : ಶಾಸಕರು ತಮ್ಮ ಕ್ಷೇತ್ರಾಭಿವೃದ್ಧಿ ಅನುದಾನ ಸಿಕ್ಕಿಲ್ಲ ಎಂದು ನೋವು ಹೇಳಿಕೊಳ್ತಿರುವ ಬೆನ್ನಲ್ಲೇ ಕ್ಷೇತ್ರದ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50 ಕೋಟಿ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಅನುದಾನದ ಕೊರತೆಯಾದ ಬಗ್ಗೆ ಆಡಳಿತಾರೂಢ ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷದ ಶಾಸಕರಲ್ಲೂ ಅಸಮಾಧಾನವಿದೆ. ಈ ಸಂಬಂಧ ಜುಲೈ 15 ರಂದು ಶಾಸಕರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ, ಸಿಎಂ ಮೂಲಸೌಲಭ್ಯ ಅಭಿವೃದ್ಧಿ ಕಾರ್ಯಕ್ರಮದಡಿ, 2025-26ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಘೋಷಿಸಿದಂತೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50 ಕೋಟಿ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
ಇದರಲ್ಲಿ ಲೋಕೋಪಯೋಗಿ ಇಲಾಖೆ, ರಸ್ತೆ ಮತ್ತು ಸೇತುವೆ ಕೆಲಸ, ಗ್ರಾಮಾಂತರ ರಸ್ತೆ, ಸೇತುವೆ ಮತ್ತು ನಗರ ಪ್ರದೇಶದ ಕಾಮಗಾರಿಗೆ ರೂ. 37.50 ಕೋಟಿ ಮತ್ತು ಶಾಸಕರು ತಮ್ಮ ವಿವೇಚನೆಯಿಂದ ಆಯ್ಕೆ ಮಾಡಬಹುದಾದ ಇತರೆ ಇಲಾಖಾ ಕಾಮಗಾರಿಗಳಿಗೆ ರೂ. 12.50 ಕೋಟಿ ನೀಡಲಾಗುತ್ತಿದೆ.
ಶಾಸಕರು ತಮ್ಮ ಬೇಡಿಕೆ ಪತ್ರದೊಂದಿಗೆ ನಿಗದಿತ ನಮೂನೆಯಲ್ಲಿ ಕಾಮಗಾರಿಗಳ ವಿವರಗಳನ್ನು ಮುಖ್ಯಮಂತ್ರಿಗಳಿಗೆ ನೀಡುವಂತೆ ಸೂಚಿಸಲಾಗಿದೆ. ಜುಲೈ 30 ಮತ್ತು 31 ರಂದು ಕೊಠಡಿ ಸಂಖ್ಯೆ-313, ಸಮಿತಿ ಕೊಠಡಿ, 3ನೇ ಮಹಡಿ, ವಿಧಾನಸೌಧದಲ್ಲಿ ಶಾಸಕರ ಜಿಲ್ಲಾವಾರು ಸಭೆ ಏರ್ಪಡಿಸಲಾಗಿದ್ದು, ಕಾಮಗಾರಿಗಳ ವಿವರಗಳೊಂದಿಗೆ ಶಾಸಕರು ಸಭೆಗೆ ಹಾಜರಾಗುವಂತೆ ತಿಳಿಸಲಾಗಿದೆ.
ಪತ್ರದಲ್ಲಿ ಕಾಂಗ್ರೆಸ್ ಶಾಸಕರಿಗೆ ಮಾತ್ರ ಹಣ ಹಂಚಿಕೆ ಎಂದು ಎಲ್ಲಿಯೂ ಸೂಚಿಸಿಲ್ಲವಾದರೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ತಾರತಮ್ಯದ ಆರೋಪ ಮಾಡಿವೆ. ಎಲ್ಲ ಶಾಸಕರಿಗೂ ಹಣ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ. ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಗೆ ರೂ. 25 ಕೋಟಿ ನೀಡಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಆರೋಪಿಸಿದ ವಿಪಕ್ಷ ನಾಯಕ ಆರ್. ಅಶೋಕ, ಸಮತೋಲಿತ ಅಭಿವೃದ್ಧಿಗೆ ಎಲ್ಲ ಶಾಸಕರಿಗೆ ಸಮಾನ ಅನುದಾನ ನೀಡುವಂತೆ ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ತಮ್ಮ ಕ್ಷೇತ್ರಗಳಿಗೆ ಮುಖ ತೋರಿಸಲು ಆಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಹೇಳಿಕೊಳ್ಳುತ್ತಿದ್ದಾರೆ. ಈಗ ರೂ. 50 ಕೋಟಿ ಅನುದಾನ ನೀಡುವ ಕುರಿತು ಸುತ್ತೋಲೆ ಹೊರಡಿಸಲಾಗಿದೆ. ಆದರೆ, ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಗೆ ರೂ. 25 ಕೋಟಿ ನೀಡಲಾಗುವ ಬಗ್ಗೆ ಮಾಹಿತಿ ಇದೆ. ಆದರೆ ಇದರಲ್ಲಿ ಇನ್ನೂ ಗ್ಯಾರಂಟಿ ಇಲ್ಲ ಎಂದು ಅಶೋಕ್ ಸುದ್ದಿಗಾರರಿಗೆ ತಿಳಿಸಿದರು.
In a major move aimed at addressing growing dissatisfaction among legislators over the lack of development funds, Chief Minister Siddaramaiah has announced a ₹50 crore grant for developmental works in each assembly constituency across Karnataka.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am