ಬ್ರೇಕಿಂಗ್ ನ್ಯೂಸ್
18-07-25 10:59 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 18 : ಶಾಸಕರು ತಮ್ಮ ಕ್ಷೇತ್ರಾಭಿವೃದ್ಧಿ ಅನುದಾನ ಸಿಕ್ಕಿಲ್ಲ ಎಂದು ನೋವು ಹೇಳಿಕೊಳ್ತಿರುವ ಬೆನ್ನಲ್ಲೇ ಕ್ಷೇತ್ರದ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50 ಕೋಟಿ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಅನುದಾನದ ಕೊರತೆಯಾದ ಬಗ್ಗೆ ಆಡಳಿತಾರೂಢ ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷದ ಶಾಸಕರಲ್ಲೂ ಅಸಮಾಧಾನವಿದೆ. ಈ ಸಂಬಂಧ ಜುಲೈ 15 ರಂದು ಶಾಸಕರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ, ಸಿಎಂ ಮೂಲಸೌಲಭ್ಯ ಅಭಿವೃದ್ಧಿ ಕಾರ್ಯಕ್ರಮದಡಿ, 2025-26ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಘೋಷಿಸಿದಂತೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50 ಕೋಟಿ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
ಇದರಲ್ಲಿ ಲೋಕೋಪಯೋಗಿ ಇಲಾಖೆ, ರಸ್ತೆ ಮತ್ತು ಸೇತುವೆ ಕೆಲಸ, ಗ್ರಾಮಾಂತರ ರಸ್ತೆ, ಸೇತುವೆ ಮತ್ತು ನಗರ ಪ್ರದೇಶದ ಕಾಮಗಾರಿಗೆ ರೂ. 37.50 ಕೋಟಿ ಮತ್ತು ಶಾಸಕರು ತಮ್ಮ ವಿವೇಚನೆಯಿಂದ ಆಯ್ಕೆ ಮಾಡಬಹುದಾದ ಇತರೆ ಇಲಾಖಾ ಕಾಮಗಾರಿಗಳಿಗೆ ರೂ. 12.50 ಕೋಟಿ ನೀಡಲಾಗುತ್ತಿದೆ.
ಶಾಸಕರು ತಮ್ಮ ಬೇಡಿಕೆ ಪತ್ರದೊಂದಿಗೆ ನಿಗದಿತ ನಮೂನೆಯಲ್ಲಿ ಕಾಮಗಾರಿಗಳ ವಿವರಗಳನ್ನು ಮುಖ್ಯಮಂತ್ರಿಗಳಿಗೆ ನೀಡುವಂತೆ ಸೂಚಿಸಲಾಗಿದೆ. ಜುಲೈ 30 ಮತ್ತು 31 ರಂದು ಕೊಠಡಿ ಸಂಖ್ಯೆ-313, ಸಮಿತಿ ಕೊಠಡಿ, 3ನೇ ಮಹಡಿ, ವಿಧಾನಸೌಧದಲ್ಲಿ ಶಾಸಕರ ಜಿಲ್ಲಾವಾರು ಸಭೆ ಏರ್ಪಡಿಸಲಾಗಿದ್ದು, ಕಾಮಗಾರಿಗಳ ವಿವರಗಳೊಂದಿಗೆ ಶಾಸಕರು ಸಭೆಗೆ ಹಾಜರಾಗುವಂತೆ ತಿಳಿಸಲಾಗಿದೆ.
ಪತ್ರದಲ್ಲಿ ಕಾಂಗ್ರೆಸ್ ಶಾಸಕರಿಗೆ ಮಾತ್ರ ಹಣ ಹಂಚಿಕೆ ಎಂದು ಎಲ್ಲಿಯೂ ಸೂಚಿಸಿಲ್ಲವಾದರೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ತಾರತಮ್ಯದ ಆರೋಪ ಮಾಡಿವೆ. ಎಲ್ಲ ಶಾಸಕರಿಗೂ ಹಣ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ. ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಗೆ ರೂ. 25 ಕೋಟಿ ನೀಡಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಆರೋಪಿಸಿದ ವಿಪಕ್ಷ ನಾಯಕ ಆರ್. ಅಶೋಕ, ಸಮತೋಲಿತ ಅಭಿವೃದ್ಧಿಗೆ ಎಲ್ಲ ಶಾಸಕರಿಗೆ ಸಮಾನ ಅನುದಾನ ನೀಡುವಂತೆ ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ತಮ್ಮ ಕ್ಷೇತ್ರಗಳಿಗೆ ಮುಖ ತೋರಿಸಲು ಆಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಹೇಳಿಕೊಳ್ಳುತ್ತಿದ್ದಾರೆ. ಈಗ ರೂ. 50 ಕೋಟಿ ಅನುದಾನ ನೀಡುವ ಕುರಿತು ಸುತ್ತೋಲೆ ಹೊರಡಿಸಲಾಗಿದೆ. ಆದರೆ, ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಗೆ ರೂ. 25 ಕೋಟಿ ನೀಡಲಾಗುವ ಬಗ್ಗೆ ಮಾಹಿತಿ ಇದೆ. ಆದರೆ ಇದರಲ್ಲಿ ಇನ್ನೂ ಗ್ಯಾರಂಟಿ ಇಲ್ಲ ಎಂದು ಅಶೋಕ್ ಸುದ್ದಿಗಾರರಿಗೆ ತಿಳಿಸಿದರು.
In a major move aimed at addressing growing dissatisfaction among legislators over the lack of development funds, Chief Minister Siddaramaiah has announced a ₹50 crore grant for developmental works in each assembly constituency across Karnataka.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm