ಬ್ರೇಕಿಂಗ್ ನ್ಯೂಸ್
            
                        22-07-25 11:10 pm Bangalore Correspondent ಕರ್ನಾಟಕ
            ಬೆಂಗಳೂರು, ಜುಲೈ 22 : ಧರ್ಮಸ್ಥಳ ಯಾವುದೇ ಒಂದು ಕುಟುಂಬದ ಆಸ್ತಿಯಲ್ಲ. ಇದನ್ನು ಒಂದು ಕುಟುಂಬ ನೋಡಿಕೊಳ್ಳುತ್ತಿದ್ದರೂ ಎಲ್ಲಾ ಭಕ್ತರಿಗೂ ಸೇರಿದ ಸ್ವತ್ತು. ಮಂಜುನಾಥ ಸ್ವಾಮಿಗೆ ಅಪಮಾನವಾದರೆ ನಮಗೂ ಅಪಮಾನವಾದಂತೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಪ್ರತಿಕ್ರಿಯೆ ನೀಡಿದರು.
ಎಸ್ಐಟಿ ರಚನೆ ಹಿಂದೂ ಪರ ನೀತಿ
“ಧರ್ಮಸ್ಥಳ ಶ್ರೀಕ್ಷೇತ್ರವನ್ನು ರಾಜ್ಯದ ಬಹುತೇಕ ಮಂದಿ ನಂಬಿ ಪೂಜೆ, ಹರಕೆ ಮಾಡಿಕೊಂಡು ಬಂದಿದ್ದಾರೆ. ಕೆಲವು ವಿಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಮಾಡುತ್ತಲೇ ಬಂದಿದೆ. ಈ ವಿಚಾರದಲ್ಲಿ ಜನರ ಅನುಮಾನಗಳನ್ನು ನಿವಾರಣೆ ಮಾಡುವುದು ಸರ್ಕಾರದ ಕರ್ತವ್ಯ. ಇದರಿಂದ ಶ್ರೀಕ್ಷೇತ್ರಕ್ಕೂ ಒಳ್ಳೆಯದು. ಕೆಲವರು ಇದನ್ನು ಹಿಂದೂ ವಿರೋಧಿ ನೀತಿ ಎಂಬ ರೀತಿ ಬಿಂಬಿಸುತ್ತಿದ್ದಾರೆ. ಇದು ಹಿಂದೂ ವಿರೋಧಿ ನೀತಿ ಅಲ್ಲ. ಇದು ಹಿಂದೂಗಳ ಪರವಾದ ನೀತಿ. ಹಿಂದೂಗಳಿಗೆ ಅನ್ಯಾಯ ಆಗಿದ್ದರೆ ಅದನ್ನು ಸರಿಪಡಿಸಬೇಕಾಗಿದೆ. ಈ ಜವಾಬ್ದಾರಿ ಮಾತನಾಡುತ್ತಿರುವವರು ಸೇರಿದಂತೆ ಎಲ್ಲರ ಮೇಲಿದೆ ಎಂದರು
ಯಾರನ್ನೂ ರಕ್ಷಿಸುವ ಅವಮಾನಿಸುವ ಪ್ರಶ್ನೆ ಇಲ್ಲ:
ಇದು ಶ್ರೀಕ್ಷೇತ್ರದ ಪಾವಿತ್ರ್ಯತೆ ನಂಬಿಕೆ ಉಳಿಸಿಕೊಳ್ಳುವ ಕೆಲಸವಾಗಿದೆ. ಇದು ರಾಜಕೀಯ ಕೆಸರೆರೆಚಾಟದಿಂದ ಹೊರಗೆ ಬರಬೇಕು. 40 ವರ್ಷಗಳಿಂದ ಪ್ರತಿ ವರ್ಷ ನಾನು ಶ್ರೀಕ್ಷೇತ್ರಕ್ಕೆ ಹೋಗಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಇಲ್ಲಿ ನಂಬಿಕೆ ಎಂಬುದು ಬಹಳ ಮುಖ್ಯ. ಇಲ್ಲಿ ಯಾರು ತಪ್ಪು ಮಾಡಿದ್ದಾರೆ, ಯಾರಿಂದ ತಪ್ಪಾಗಿದೆ ಎಂದು ಯಾರಿಗೂ ಗೊತ್ತಿಲ್ಲ. ಶ್ರೀಕ್ಷೇತ್ರದ ಹೆಸರಿನಲ್ಲಿ ಏನಾದರೂ ಅಪಮಾನ ಆಗಿದ್ದರೆ ಇದನ್ನು ಸರಿಪಡಿಸುವ ಜವಾಬ್ದಾರಿ ಇದರ ಉಸ್ತುವಾರಿಗಳ ಮೇಲೆ ಇದೆ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವ ಅಥವಾ ಅಪಮಾನ ಮಾಡುವ ಪ್ರಶ್ನೆಯಲ್ಲ” ಎಂದು ತಿಳಿಸಿದರು.
            
            
            Senior Congress leader and former MP D.K. Suresh has stated that the Dharmasthala temple is not the private property of any one family, but a sacred place that belongs to all devotees. He emphasized that if Lord Manjunatha is disrespected, it is an insult to all devotees.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm