ಬ್ರೇಕಿಂಗ್ ನ್ಯೂಸ್
25-07-25 12:25 pm HK News Desk ಕರ್ನಾಟಕ
ಬೆಂಗಳೂರು, ಜುಲೈ 25 : 10 ಲಕ್ಷ ನೀಡುವಂತೆ ಲಂಚ ಕೇಳಿದ ಆರೋಪದಡಿ ಸುಬ್ರಮಣ್ಯಪುರ ಠಾಣೆಯ ಪಿಎಸ್ಐ ಭೈರಪ್ಪ ಹಾಗೂ ಕೆಂಗೇರಿ ಪೊಲೀಸ್ ಠಾಣೆಯ ಪಿಎಸ್ಐ ಮುರುಳಿ ಮೋಹನ್ ವಿರುದ್ಧ ನಗರದ ಲೋಕಾಯುಕ್ತ ಅಧಿಕಾರಿಗಳು ಎಫ್ಐಆರ್ ದಾಖಲಿಸಿಕೊಂಡಿದ್ಧಾರೆ.
ಪ್ರಶಾಂತ್ ನಗರದ ನಿವಾಸಿ ಶಿವಕುಮಾರ್ ಎಂಬವರು ನೀಡಿದ ದೂರು ಆಧರಿಸಿ, ಇಬ್ಬರು ಸಬ್ ಇನ್ಸ್ಪೆಕ್ಟರ್ಗಳ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧ ಕಾಯ್ದೆಯಡಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ದೂರುದಾರ ಶಿವಕುಮಾರ್ 10 ಕಳೆದ ವರ್ಷಗಳಿಂದ ರಿಯಲ್ ಎಸ್ಟೇಟ್ ಕೆಲಸ ಮಾಡಿಕೊಂಡಿದ್ದಾರೆ. ಇವರ ಸಂಬಂಧಿ ಪುಟ್ಟಸ್ವಾಮಿ ಅವರಿಗೆ ಸೇರಿದ ನಿವೇಶನದ ಸುತ್ತ ನಿರ್ಮಾಣವಾಗಿದ್ದ ಗೋಡೆ ಒಡೆದು ಕೆಲ ವ್ಯಕ್ತಿಗಳು ನಿವೇಶನ ತನ್ನದೆಂದು ಅತಿಕ್ರಮಕ್ಕೆ ಮುಂದಾಗಿದ್ದರು. ಈ ಬಗ್ಗೆ ಅಸಮಾಧಾನಗೊಂಡ ಪುಟ್ಟಸ್ವಾಮಿ, ಮೋಸದಿಂದ ನಿವೇಶನ ಮಾರಾಟ ಮಾಡಿಸಿರುವುದಾಗಿ ಶಿವಕುಮಾರ್ ವಿರುದ್ಧ ಸುಬ್ರಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಬಳಿಕ ತಪ್ಪು ತಿಳುವಳಿಕೆಯಿಂದ ದೂರು ನೀಡಿದ್ದು, ಪ್ರಕರಣವನ್ನು ಹಿಂಪಡೆಯುವುದಾಗಿ ಪುಟ್ಟಸ್ವಾಮಿ ಒಪ್ಪಿಕೊಂಡಿದ್ದರು ಎಂದು ದೂರಿನಲ್ಲಿ ಶಿವಕುಮಾರ್ ತಿಳಿಸಿದ್ದಾರೆ.
ನಿವೇಶನದ ಸುತ್ತ ಗೋಡೆ ಒಡೆದು ಹಾಕಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ತನಿಖಾಧಿಕಾರಿಯಾಗಿದ್ದ ಪಿಎಸ್ಐ ಬೈರಪ್ಪ ಅವರಿಗೆ ಮನವಿ ಮಾಡಿದ್ದೆ. ಈ ಕುರಿತು ಪಿಎಸ್ಐ ಮುರುಳಿ ಮೋಹನ್ ಅವರ ನಂಬರ್ ನೀಡಿ ಸಂಪರ್ಕಿಸುವಂತೆ ತಿಳಿಸಿದ್ದರು. ಕೆಂಗೇರಿ ಬಳಿಯ ಹೊಟೇಲ್ ವೊಂದರಲ್ಲಿ ಮುರುಳಿ ಅವರನ್ನ ಭೇಟಿ ಮಾಡಿದ್ದರು. ನಿವೇಶನ ವಿಚಾರವಾಗಿ ಭೈರಪ್ಪ ಎಲ್ಲವನ್ನು ಹೇಳಿದ್ದಾರೆ. ನಿವೇಶನವನ್ನು ನಿಮ್ಮ ಸುಪರ್ದಿಗೆ ಕೊಡಿಸಲು ಸಹಾಯ ಮಾಡುತ್ತೇನೆ. ಇದಕ್ಕಾಗಿ 10 ಲಕ್ಷ ನೀಡುವಂತೆ ಡಿಮ್ಯಾಂಡ್ ಮಾಡಿದ್ದು, ಅಡ್ವಾನ್ಸ್ 5 ಲಕ್ಷ ನೀಡುವಂತೆ ಒತ್ತಾಯಿಸಿದ್ದರು'' ಎಂದು ದೂರಿನಲ್ಲಿ ಶಿವಕುಮಾರ್ ಉಲ್ಲೇಖಿಸಿದ್ದಾರೆ. ಸದ್ಯ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
In a shocking case of alleged corruption, the Lokayukta officials in Bengaluru have registered an FIR against two police sub-inspectors — Bhairappa from Subramanyapura Police Station and Muruli Mohan from Kengeri Police Station — for allegedly demanding a bribe of ₹10 lakh in connection with a land dispute.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am