ಬ್ರೇಕಿಂಗ್ ನ್ಯೂಸ್
            
                        25-07-25 12:25 pm HK News Desk ಕರ್ನಾಟಕ
            ಬೆಂಗಳೂರು, ಜುಲೈ 25 : 10 ಲಕ್ಷ ನೀಡುವಂತೆ ಲಂಚ ಕೇಳಿದ ಆರೋಪದಡಿ ಸುಬ್ರಮಣ್ಯಪುರ ಠಾಣೆಯ ಪಿಎಸ್ಐ ಭೈರಪ್ಪ ಹಾಗೂ ಕೆಂಗೇರಿ ಪೊಲೀಸ್ ಠಾಣೆಯ ಪಿಎಸ್ಐ ಮುರುಳಿ ಮೋಹನ್ ವಿರುದ್ಧ ನಗರದ ಲೋಕಾಯುಕ್ತ ಅಧಿಕಾರಿಗಳು ಎಫ್ಐಆರ್ ದಾಖಲಿಸಿಕೊಂಡಿದ್ಧಾರೆ.
ಪ್ರಶಾಂತ್ ನಗರದ ನಿವಾಸಿ ಶಿವಕುಮಾರ್ ಎಂಬವರು ನೀಡಿದ ದೂರು ಆಧರಿಸಿ, ಇಬ್ಬರು ಸಬ್ ಇನ್ಸ್ಪೆಕ್ಟರ್ಗಳ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧ ಕಾಯ್ದೆಯಡಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ದೂರುದಾರ ಶಿವಕುಮಾರ್ 10 ಕಳೆದ ವರ್ಷಗಳಿಂದ ರಿಯಲ್ ಎಸ್ಟೇಟ್ ಕೆಲಸ ಮಾಡಿಕೊಂಡಿದ್ದಾರೆ. ಇವರ ಸಂಬಂಧಿ ಪುಟ್ಟಸ್ವಾಮಿ ಅವರಿಗೆ ಸೇರಿದ ನಿವೇಶನದ ಸುತ್ತ ನಿರ್ಮಾಣವಾಗಿದ್ದ ಗೋಡೆ ಒಡೆದು ಕೆಲ ವ್ಯಕ್ತಿಗಳು ನಿವೇಶನ ತನ್ನದೆಂದು ಅತಿಕ್ರಮಕ್ಕೆ ಮುಂದಾಗಿದ್ದರು. ಈ ಬಗ್ಗೆ ಅಸಮಾಧಾನಗೊಂಡ ಪುಟ್ಟಸ್ವಾಮಿ, ಮೋಸದಿಂದ ನಿವೇಶನ ಮಾರಾಟ ಮಾಡಿಸಿರುವುದಾಗಿ ಶಿವಕುಮಾರ್ ವಿರುದ್ಧ ಸುಬ್ರಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಬಳಿಕ ತಪ್ಪು ತಿಳುವಳಿಕೆಯಿಂದ ದೂರು ನೀಡಿದ್ದು, ಪ್ರಕರಣವನ್ನು ಹಿಂಪಡೆಯುವುದಾಗಿ ಪುಟ್ಟಸ್ವಾಮಿ ಒಪ್ಪಿಕೊಂಡಿದ್ದರು ಎಂದು ದೂರಿನಲ್ಲಿ ಶಿವಕುಮಾರ್ ತಿಳಿಸಿದ್ದಾರೆ.
ನಿವೇಶನದ ಸುತ್ತ ಗೋಡೆ ಒಡೆದು ಹಾಕಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ತನಿಖಾಧಿಕಾರಿಯಾಗಿದ್ದ ಪಿಎಸ್ಐ ಬೈರಪ್ಪ ಅವರಿಗೆ ಮನವಿ ಮಾಡಿದ್ದೆ. ಈ ಕುರಿತು ಪಿಎಸ್ಐ ಮುರುಳಿ ಮೋಹನ್ ಅವರ ನಂಬರ್ ನೀಡಿ ಸಂಪರ್ಕಿಸುವಂತೆ ತಿಳಿಸಿದ್ದರು. ಕೆಂಗೇರಿ ಬಳಿಯ ಹೊಟೇಲ್ ವೊಂದರಲ್ಲಿ ಮುರುಳಿ ಅವರನ್ನ ಭೇಟಿ ಮಾಡಿದ್ದರು. ನಿವೇಶನ ವಿಚಾರವಾಗಿ ಭೈರಪ್ಪ ಎಲ್ಲವನ್ನು ಹೇಳಿದ್ದಾರೆ. ನಿವೇಶನವನ್ನು ನಿಮ್ಮ ಸುಪರ್ದಿಗೆ ಕೊಡಿಸಲು ಸಹಾಯ ಮಾಡುತ್ತೇನೆ. ಇದಕ್ಕಾಗಿ 10 ಲಕ್ಷ ನೀಡುವಂತೆ ಡಿಮ್ಯಾಂಡ್ ಮಾಡಿದ್ದು, ಅಡ್ವಾನ್ಸ್ 5 ಲಕ್ಷ ನೀಡುವಂತೆ ಒತ್ತಾಯಿಸಿದ್ದರು'' ಎಂದು ದೂರಿನಲ್ಲಿ ಶಿವಕುಮಾರ್ ಉಲ್ಲೇಖಿಸಿದ್ದಾರೆ. ಸದ್ಯ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
            
            
            In a shocking case of alleged corruption, the Lokayukta officials in Bengaluru have registered an FIR against two police sub-inspectors — Bhairappa from Subramanyapura Police Station and Muruli Mohan from Kengeri Police Station — for allegedly demanding a bribe of ₹10 lakh in connection with a land dispute.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm