ಬ್ರೇಕಿಂಗ್ ನ್ಯೂಸ್
24-12-20 01:05 pm Headline Karnataka News Network ಕರ್ನಾಟಕ
ಕಲಬುರಗಿ, ಡಿ.24 : ತನ್ನ ಮಗ ಕಾಣೆಯಾಗಿದ್ದಾನೆಂದು ಮಹಿಳೆಯೊಬ್ಬರು ನೀಡಿದ ದೂರನ್ನು ಪರಿಗಣಿಸದೆ, ನಿರ್ಲಕ್ಷ್ಯ ತೋರಿದ ಆರೋಪಕ್ಕೀಡಾಗಿದ್ದ ಕಲಬುರಗಿ ಸ್ಟೇಷನ್ ಬಜಾರ್ ಠಾಣಾಧಿಕಾರಿಗೆ ಕಲಬುರಗಿ ಹೈಕೋರ್ಟ್ ಕಸ ಗುಡಿಸುವ ಶಿಕ್ಷೆ ವಿಧಿಸಿದೆ.
ಕಲಬುರಗಿ ತಾಲುಕಿನ ಮಿಣಜಗಿ ತಾಂಡಾದ ಕೂಲಿ ಕಾರ್ಮಿಕ ಮಹಿಳೆ ತಾರಾಬಾಯಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಆಲಿಸಿದ ಕಲಬುರಗಿ ಪೀಠ ಈ ಆದೇಶ ನೀಡಿದೆ. ಮಹಿಳೆ ತನ್ನ ಮಗ ಸುರೇಶ್ ಕಾಣೆಯಾಗಿದ್ದಾನೆ ಎಂದು ದೂರು ನೀಡಿದರೂ ಠಾಣಾಧಿಕಾರಿ ಅದನ್ನು ಗಂಭೀರವಾಗಿ ಪರಿಗಣಿಸದೆ ಕರ್ತವ್ಯ ಲೋಪ ಎಸಗಿದ್ದರು. ಹಾಗಾಗಿ ಠಾಣಾಧಿಕಾರಿ ಒಂದು ವಾರ ಠಾಣೆಯ ಮುಂಭಾಗದ ರಸ್ತೆಯನ್ನು ಸ್ವಚ್ಛಗೊಳಿಸಬೇಕು ಎಂದು ನ್ಯಾಯಪೀಠ ಅಪರೂಪದ ಶಿಕ್ಷೆ ನೀಡಿದೆ.

ಅರ್ಜಿದಾರರ ಪುತ್ರ ಸುರೇಶ್ ನಾಪತ್ತೆಯಾದ ಸಂದರ್ಭದಲ್ಲಿ ಠಾಣೆಯ ಅಧಿಕಾರಿಗಳ ಕಾರ್ಯವೈಖರಿ ತುಂಬಾ ಆಘಾತಕಾರಿಯಾಗಿದೆ. ಠಾಣೆಯ ಪೊಲೀಸ್ ಅಧಿಕಾರಿ, ಅಪರಾಧ ಪ್ರಕರಣದ ನಿಯಮಗಳನ್ನು ಪಾಲಿಸದೇ ಇರುವುದು ಕಾಣುತ್ತಿದೆ. ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯ ರಕ್ಷಣೆಗೆ ಮುಂದಾಗಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.
ದೂರುದಾರ ತಾರಾಬಾಯಿ ಠಾಣೆಗೆ ಬಂದಿದ್ದಾಗಿ ಹೇಳುತ್ತಾರೆ. ಹೀಗಿದ್ದಾಗ ಅಧಿಕಾರಿ ಠಾಣೆಯ ಡೈರಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕಿತ್ತು. ಬಳಿಕ ಎಫ್ಐಆರ್ ದಾಖಲಿಸಬೇಕಿತ್ತು. ಆದರೆ, ಅದ್ಯಾವುದನ್ನೂ ಮಾಡದಿರುವುದು ಠಾಣಾಧಿಕಾರಿಯ ನಿರ್ಲಕ್ಷ್ಯಕ್ಕೆ ಸಾಕ್ಷಿ ಎಂದಿದೆ ಕೋರ್ಟ್.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am