ಬ್ರೇಕಿಂಗ್ ನ್ಯೂಸ್
30-07-25 11:40 am Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 30 : ಪಾಕಿಸ್ತಾನದ ಅಲ್ ಖೈದಾ ಉಗ್ರರ ಬೇರುಗಳು ಕರ್ನಾಟಕ ರಾಜಧಾನಿಗೂ ವ್ಯಾಪಿಸಿದ್ದು ಗುಜರಾತ್ ಭಯೋತ್ಪಾದನಾ ನಿಗ್ರಹ ಘಟಕದ (ಎಟಿಎಸ್) ಪೊಲೀಸರು ಮಂಗಳವಾರ ನಗರದಲ್ಲಿ ವಾಸಿಸುತ್ತಿದ್ದ ಜಾರ್ಖಂಡ್ ಮೂಲದ ಯುವತಿಯೊಬ್ಬಳನ್ನು ಬಂಧಿಸಿದ್ದಾರೆ.
ಜಾರ್ಖಂಡ್ ಮೂಲದ ಶಮಾ ಪರ್ವೀನ್ (33) ಬಂಧಿತೆ. ಅಲ್ ಖೈದಾ ಉಗ್ರ ಸಂಘಟನೆ ಬಲಗೊಳಿಸಲು ಶಮಾ ಪರ್ವೀನ್ ಕೆಲಸ ಮಾಡುತ್ತಿದ್ದಳು ಎಂಬ ವಿಚಾರ ಎಟಿಎಸ್ ತನಿಖೆಯಲ್ಲಿ ಬಯಲಾಗಿತ್ತು. ಇದರ ಬೆನ್ನಲ್ಲೇ ಮನೋರಾಯನಪಾಳ್ಯದಲ್ಲಿ ವಾಸಿಸುತ್ತಿದ್ದ ಪರ್ವೀನ್ ಮನೆಯ ಮೇಲೆ ದಾಳಿ ನಡೆಸಿತ್ತು. ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಶಂಕಿತ ಭಯೋತ್ಪಾದಕಿ ಪರ್ವೀನ್ ಳನ್ನು ಬಂಧಿಸಲಾಗಿದೆ. ಮನೆಯಲ್ಲಿ ಹಲವು ಡಿಜಿಟಲ್ ಸಾಧನಗಳು, ಲ್ಯಾಪ್ಟಾಪ್ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಪರ್ವೀನ್ ಪದವೀಧರೆಯಾಗಿದ್ದು, ಮೂರು ವರ್ಷದ ಹಿಂದೆ ನಗರಕ್ಕೆ ಆಗಮಿಸಿದ್ದರು. ಬೆಂಗಳೂರಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿರುವ ಸಹೋದರನ ಮನೆಯಲ್ಲಿ ವಾಸವಿದ್ದರು. ಅಲ್ ಖೈದಾ ಭಾರತೀಯ ಘಟಕದ (ಎಕ್ಯೂಐಎಸ್) ಪರವಾಗಿ ಕೆಲಸ ಮಾಡುತ್ತಿದ್ದ ಪರ್ವೀನ್, ಇನ್ಸ್ ಟಾ ಗ್ರಾಂ ಸೇರಿದಂತೆ ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಅಲ್ ಖೈದಾ ವಿಚಾರಧಾರೆಯನ್ನು ಹರಿಯ ಬಿಡುತ್ತಿದ್ದಳು. ಅಲ್ ಖೈದಾ ಉಗ್ರನೊಬ್ಬನ ವಿಡಿಯೊಗಳನ್ನು ಹಂಚಿಕೊಂಡು ಭಯೋತ್ಪಾದನಾ ಕೃತ್ಯಕ್ಕೆ ಪ್ರೇರೇಪಿಸುತ್ತಿದ್ದಳು ಎಂದು ಮೂಲಗಳು ಹೇಳಿವೆ.
ಕೆಲವು ದಿನಗಳ ಹಿಂದೆ ಗುಜರಾತ್ ನಲ್ಲಿ ನಾಲ್ವರು ಅಲ್ ಖೈದಾ ಶಂಕಿತ ಉಗ್ರರನ್ನು ಎಟಿಎಸ್ ಬಂಧಿಸಿತ್ತು. ತನಿಖೆ ವೇಳೆ ನಾಲ್ವರ ಜತೆಗೂ ಪರ್ವೀನ್ ನಂಟಿರುವುದು ಪತ್ತೆಯಾಗಿದೆ. ಹೀಗಾಗಿ, ಸಾಕ್ಷಾಧಾರಗಳ ಜತೆಗೆ ಆಗಮಿಸಿದ ಎಟಿಎಸ್ ಪೊಲೀಸರು ಪರ್ವೀನ್ಳನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಳಿಕ ಟ್ರಾನ್ಸಿಟ್ ವಾರೆಂಟ್ ಮೇರೆಗೆ ಗುಜರಾತ್ಗೆ ಕೊಂಡೊಯ್ದಿದ್ದಾರೆ.
The roots of Pakistan-based terror outfit Al-Qaeda have reportedly extended into Karnataka's capital, Bengaluru. In a significant development, the Gujarat Anti-Terrorism Squad (ATS) on Tuesday arrested a 33-year-old woman residing in the city for alleged links with the banned terror group.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm