ಬ್ರೇಕಿಂಗ್ ನ್ಯೂಸ್
30-07-25 11:40 am Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 30 : ಪಾಕಿಸ್ತಾನದ ಅಲ್ ಖೈದಾ ಉಗ್ರರ ಬೇರುಗಳು ಕರ್ನಾಟಕ ರಾಜಧಾನಿಗೂ ವ್ಯಾಪಿಸಿದ್ದು ಗುಜರಾತ್ ಭಯೋತ್ಪಾದನಾ ನಿಗ್ರಹ ಘಟಕದ (ಎಟಿಎಸ್) ಪೊಲೀಸರು ಮಂಗಳವಾರ ನಗರದಲ್ಲಿ ವಾಸಿಸುತ್ತಿದ್ದ ಜಾರ್ಖಂಡ್ ಮೂಲದ ಯುವತಿಯೊಬ್ಬಳನ್ನು ಬಂಧಿಸಿದ್ದಾರೆ.
ಜಾರ್ಖಂಡ್ ಮೂಲದ ಶಮಾ ಪರ್ವೀನ್ (33) ಬಂಧಿತೆ. ಅಲ್ ಖೈದಾ ಉಗ್ರ ಸಂಘಟನೆ ಬಲಗೊಳಿಸಲು ಶಮಾ ಪರ್ವೀನ್ ಕೆಲಸ ಮಾಡುತ್ತಿದ್ದಳು ಎಂಬ ವಿಚಾರ ಎಟಿಎಸ್ ತನಿಖೆಯಲ್ಲಿ ಬಯಲಾಗಿತ್ತು. ಇದರ ಬೆನ್ನಲ್ಲೇ ಮನೋರಾಯನಪಾಳ್ಯದಲ್ಲಿ ವಾಸಿಸುತ್ತಿದ್ದ ಪರ್ವೀನ್ ಮನೆಯ ಮೇಲೆ ದಾಳಿ ನಡೆಸಿತ್ತು. ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಶಂಕಿತ ಭಯೋತ್ಪಾದಕಿ ಪರ್ವೀನ್ ಳನ್ನು ಬಂಧಿಸಲಾಗಿದೆ. ಮನೆಯಲ್ಲಿ ಹಲವು ಡಿಜಿಟಲ್ ಸಾಧನಗಳು, ಲ್ಯಾಪ್ಟಾಪ್ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಪರ್ವೀನ್ ಪದವೀಧರೆಯಾಗಿದ್ದು, ಮೂರು ವರ್ಷದ ಹಿಂದೆ ನಗರಕ್ಕೆ ಆಗಮಿಸಿದ್ದರು. ಬೆಂಗಳೂರಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿರುವ ಸಹೋದರನ ಮನೆಯಲ್ಲಿ ವಾಸವಿದ್ದರು. ಅಲ್ ಖೈದಾ ಭಾರತೀಯ ಘಟಕದ (ಎಕ್ಯೂಐಎಸ್) ಪರವಾಗಿ ಕೆಲಸ ಮಾಡುತ್ತಿದ್ದ ಪರ್ವೀನ್, ಇನ್ಸ್ ಟಾ ಗ್ರಾಂ ಸೇರಿದಂತೆ ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಅಲ್ ಖೈದಾ ವಿಚಾರಧಾರೆಯನ್ನು ಹರಿಯ ಬಿಡುತ್ತಿದ್ದಳು. ಅಲ್ ಖೈದಾ ಉಗ್ರನೊಬ್ಬನ ವಿಡಿಯೊಗಳನ್ನು ಹಂಚಿಕೊಂಡು ಭಯೋತ್ಪಾದನಾ ಕೃತ್ಯಕ್ಕೆ ಪ್ರೇರೇಪಿಸುತ್ತಿದ್ದಳು ಎಂದು ಮೂಲಗಳು ಹೇಳಿವೆ.
ಕೆಲವು ದಿನಗಳ ಹಿಂದೆ ಗುಜರಾತ್ ನಲ್ಲಿ ನಾಲ್ವರು ಅಲ್ ಖೈದಾ ಶಂಕಿತ ಉಗ್ರರನ್ನು ಎಟಿಎಸ್ ಬಂಧಿಸಿತ್ತು. ತನಿಖೆ ವೇಳೆ ನಾಲ್ವರ ಜತೆಗೂ ಪರ್ವೀನ್ ನಂಟಿರುವುದು ಪತ್ತೆಯಾಗಿದೆ. ಹೀಗಾಗಿ, ಸಾಕ್ಷಾಧಾರಗಳ ಜತೆಗೆ ಆಗಮಿಸಿದ ಎಟಿಎಸ್ ಪೊಲೀಸರು ಪರ್ವೀನ್ಳನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಳಿಕ ಟ್ರಾನ್ಸಿಟ್ ವಾರೆಂಟ್ ಮೇರೆಗೆ ಗುಜರಾತ್ಗೆ ಕೊಂಡೊಯ್ದಿದ್ದಾರೆ.
The roots of Pakistan-based terror outfit Al-Qaeda have reportedly extended into Karnataka's capital, Bengaluru. In a significant development, the Gujarat Anti-Terrorism Squad (ATS) on Tuesday arrested a 33-year-old woman residing in the city for alleged links with the banned terror group.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm