ಬ್ರೇಕಿಂಗ್ ನ್ಯೂಸ್
01-08-25 10:45 pm Bangalore Correspondent ಕರ್ನಾಟಕ
ಬೆಂಗಳೂರು, ಆ.1 : ಜೀ ಕನ್ನಡ ವಾಹಿನಿಯ ರಿಯಾಲಿಟಿ ಶೋ 'ಕಾಮಿಡಿ ಕಿಲಾಡಿಗಳು' ಕಾರ್ಯಕ್ರಮದಲ್ಲಿ ಹೆಸರು ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮೂಲದ ಕಲಾವಿದ ಚಂದ್ರಶೇಖರ್ ಸಿದ್ದಿ ತನ್ನ ಊರಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ ಜನಾಂಗದ ಯುವಕ, ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಮೂಲಕ ರಾಜ್ಯಕ್ಕೆ ಪರಿಚಯವಾಗಿದ್ದರು.
ನೀನಾಸಂನಲ್ಲಿ ನಾಟಕ ತರಬೇತಿ ಪಡೆದಿದ್ದ ಚಂದ್ರು ಉತ್ತಮ ಯೋಗಪಟುವೂ ಆಗಿದ್ದರು. ರಿಯಾಲಿಟಿ ಶೋ ನಂತರ ಧಾರವಾಹಿಗಳಲ್ಲಿ ಚಿಕ್ಕ ಪುಟ್ಟ ಪಾತ್ರಗಳನ್ನು ಮಾಡುತ್ತಿದ್ದ ಇವರಿಗೆ ಅವಕಾಶಗಳು ಹೆಚ್ಚು ಸಿಕ್ಕಿರಲಿಲ್ಲ. ಇದರಿಂದಾಗಿ ಯಲ್ಲಾಪುರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ರಿಯಾಲಿಟಿ ಶೋನಿಂದಾಗಿ ಸಾಕಷ್ಟು ಅಭಿಮಾನಿಗಳನ್ನೂ ಹೊಂದಿದ್ದರು. ಆದರೆ, ಹೆಚ್ಚಿನ ಅವಕಾಶ ಸಿಗದೇ ಜೀವನಕ್ಕಾಗಿ ಕೂಲಿ ಕೆಲಸ ಹೋಗಬೇಕಾಗಿ ಬಂದಿತ್ತು.
ಇದೇ ಕಾರಣಕ್ಕೆ ಖಿನ್ನತೆಗೆ ಒಳಗಾಗಿದ್ದರು. ಮೂರು ತಿಂಗಳ ಹಿಂದೆ ನನ್ನ ಬಗ್ಗೆ ಜನ ಆಡಿಕೊಳ್ಳುತ್ತಾರೆ, ಟಾರ್ಗೆಟ್ ಮಾಡಿ ನಗುತ್ತಾರೆ, ಜೀವನ ಬೇಡ ಅನಿಸುತ್ತಿದೆ’ ಎಂದು ಮಾನಸಿಕ ತಜ್ಞರಲ್ಲಿ ಹೇಳಿಕೊಂಡಿದ್ದರು. ಕ್ರಿಮ್ಸ್ನಲ್ಲಿ ಚಿಕಿತ್ಸೆಯನ್ನೂ ಪಡೆದಿದ್ದರು. ಶುಕ್ರವಾರ ತನ್ನ ಊರು ಯಲ್ಲಾಪುರದಲ್ಲಿ ಕೆಲಸಕ್ಕಾಗಿ ತೆರಳಿದ್ದಾಗ ಅರಣ್ಯಕ್ಕೆ ಹೋಗಿ ಆತ್ಮಹತ್ಯೆ ಮಾಡಿದ್ದಾರೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, Chandrashekhar Siddi — a young actor known for his appearance on Zee Kannada’s popular reality show ‘Comedy Kiladigalu’ — has died by suicide in his native village near Yellapur, Uttara Kannada district. He was found hanging in a forest area on Friday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am