ಬ್ರೇಕಿಂಗ್ ನ್ಯೂಸ್
01-08-25 10:45 pm Bangalore Correspondent ಕರ್ನಾಟಕ
ಬೆಂಗಳೂರು, ಆ.1 : ಜೀ ಕನ್ನಡ ವಾಹಿನಿಯ ರಿಯಾಲಿಟಿ ಶೋ 'ಕಾಮಿಡಿ ಕಿಲಾಡಿಗಳು' ಕಾರ್ಯಕ್ರಮದಲ್ಲಿ ಹೆಸರು ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮೂಲದ ಕಲಾವಿದ ಚಂದ್ರಶೇಖರ್ ಸಿದ್ದಿ ತನ್ನ ಊರಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ ಜನಾಂಗದ ಯುವಕ, ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಮೂಲಕ ರಾಜ್ಯಕ್ಕೆ ಪರಿಚಯವಾಗಿದ್ದರು.
ನೀನಾಸಂನಲ್ಲಿ ನಾಟಕ ತರಬೇತಿ ಪಡೆದಿದ್ದ ಚಂದ್ರು ಉತ್ತಮ ಯೋಗಪಟುವೂ ಆಗಿದ್ದರು. ರಿಯಾಲಿಟಿ ಶೋ ನಂತರ ಧಾರವಾಹಿಗಳಲ್ಲಿ ಚಿಕ್ಕ ಪುಟ್ಟ ಪಾತ್ರಗಳನ್ನು ಮಾಡುತ್ತಿದ್ದ ಇವರಿಗೆ ಅವಕಾಶಗಳು ಹೆಚ್ಚು ಸಿಕ್ಕಿರಲಿಲ್ಲ. ಇದರಿಂದಾಗಿ ಯಲ್ಲಾಪುರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ರಿಯಾಲಿಟಿ ಶೋನಿಂದಾಗಿ ಸಾಕಷ್ಟು ಅಭಿಮಾನಿಗಳನ್ನೂ ಹೊಂದಿದ್ದರು. ಆದರೆ, ಹೆಚ್ಚಿನ ಅವಕಾಶ ಸಿಗದೇ ಜೀವನಕ್ಕಾಗಿ ಕೂಲಿ ಕೆಲಸ ಹೋಗಬೇಕಾಗಿ ಬಂದಿತ್ತು.
ಇದೇ ಕಾರಣಕ್ಕೆ ಖಿನ್ನತೆಗೆ ಒಳಗಾಗಿದ್ದರು. ಮೂರು ತಿಂಗಳ ಹಿಂದೆ ನನ್ನ ಬಗ್ಗೆ ಜನ ಆಡಿಕೊಳ್ಳುತ್ತಾರೆ, ಟಾರ್ಗೆಟ್ ಮಾಡಿ ನಗುತ್ತಾರೆ, ಜೀವನ ಬೇಡ ಅನಿಸುತ್ತಿದೆ’ ಎಂದು ಮಾನಸಿಕ ತಜ್ಞರಲ್ಲಿ ಹೇಳಿಕೊಂಡಿದ್ದರು. ಕ್ರಿಮ್ಸ್ನಲ್ಲಿ ಚಿಕಿತ್ಸೆಯನ್ನೂ ಪಡೆದಿದ್ದರು. ಶುಕ್ರವಾರ ತನ್ನ ಊರು ಯಲ್ಲಾಪುರದಲ್ಲಿ ಕೆಲಸಕ್ಕಾಗಿ ತೆರಳಿದ್ದಾಗ ಅರಣ್ಯಕ್ಕೆ ಹೋಗಿ ಆತ್ಮಹತ್ಯೆ ಮಾಡಿದ್ದಾರೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, Chandrashekhar Siddi — a young actor known for his appearance on Zee Kannada’s popular reality show ‘Comedy Kiladigalu’ — has died by suicide in his native village near Yellapur, Uttara Kannada district. He was found hanging in a forest area on Friday.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm