ಬ್ರೇಕಿಂಗ್ ನ್ಯೂಸ್
05-08-25 12:44 pm HK News Desk ಕರ್ನಾಟಕ
ತುಮಕೂರು, ಆ 04 : ಬರೋಬ್ಬರಿ 19 ನವಿಲುಗಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಹನುಮಂತಪುರ ಗ್ರಾಮದಲ್ಲಿ ನಡೆದಿದೆ. ರೈತರು ಬೆಳ್ಳಂ ಬೆಳಗ್ಗೆ ತಮ್ಮ ಹೊಲಗದ್ದೆಗಳಿಗೆ ಹೋದ ಸಂದರ್ಭದಲ್ಲಿ ಎಲ್ಲೆಂದರಲ್ಲಿ ನವಿಲುಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ರೈತರು ನವಿಲುಗಳು ಮೃತಪಟ್ಟಿರುವ ಬಗ್ಗೆ ತಕ್ಷಣವೇ ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಬಳಿಕ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ನವಿಲುಗಳ ಮೃತದೇಹವನ್ನು ಪ್ರಾಥಮಿಕ ಪರೀಕ್ಷೆಗಾಗಿ ಸ್ಥಳೀಯ ಪಶುಪಾಲನ ಇಲಾಖೆ ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.
ಗ್ರಾಮಸ್ಥರ ಪ್ರಕಾರ ಕೆರೆ ಕೋಡಿ ಜಲಪಾತದ ಬಳಿ ಆಗಸ್ಟ್ 2 ರಂದು ನವಿಲಿನ ಮೊದಲ ಕಳೇಬರ ಪತ್ತೆಯಾಗಿತ್ತು. ಬಳಿಕ ಐದು ಗಂಡು ಮತ್ತು 14 ಹೆಣ್ಣು ನವಿಲುಗಳ ಕಳೇಬರಗಳು ಹೊಲಗಳಲ್ಲಿ ಅಲ್ಲಲ್ಲಿ ಬಿದ್ದಿರುವುದು ಕಂಡುಬಂದಿದೆ. ಆಗಸ್ಟ್ 1 ರ ರಾತ್ರಿ ನವಿಲುಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿವೆ. ನವಿಲುಗಳ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ನವಿಲುಗಳಿಗೆ ವಿಷ ಇಟ್ಟು ಸಾಯಿಸಿರುವ ಅನುಮಾನ ಬಲವಾಗಿ ವ್ಯಕ್ತವಾಗಿದೆ.
ಪ್ರಕರಣದ ತನಿಖೆಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ನೇತೃತ್ವದ ತಂಡ ನಡೆಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, 'ನವಿಲುಗಳ ಸಾವಿನ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸಾವಿಗೆ ಕೀಟನಾಶಕ ಸೇವನೆ ಕಾರಣ ಎಂಬ ಅಂಶ ಮಾಧ್ಯಮಗಳಲ್ಲಿ ವರದಿಯಾಗಿದೆ. ನವಿಲುಗಳನ್ನು ಸಾಯಿಸಲೆಂದೇ ವಿಷ ಹಾಕಲಾಗಿತ್ತೆ ಅಥವಾ ಬೆಳೆಗಳಿಗೆ ಸಿಂಪಡಿಸಿದ ಕೀಟನಾಶಕಯುಕ್ತ ಫಸಲು ತಿಂದು ನವಿಲುಗಳು ಮೃತಪಟ್ಟಿವೆಯೇ ಎಂಬ ಬಗ್ಗೆ ತನಿಖೆ ನಡೆಸಿ, ಐದು ದಿನಗಳಲ್ಲಿ ವರದಿ ಸಲ್ಲಿಸಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಲಾಗಿದೆ' ಎಂದರು.
ಇತ್ತೀಚೆಗೆ ಚಾಮರಾಜನಗರದಲ್ಲಿ ಕೀಟ ನಾಶಕ ಬಳಸಿ ಐದು ಹುಲಿಗಳ ಕೊಲೆ:
ಚಾಮರಾಜನಗರದ ಹನೂರು ತಾಲೂಕಿನ ಮೀಣ್ಯಂ ಸಮೀಪದ ಮಲೆಮಹದೇಶ್ವರ ವನ್ಯಜೀವಿಧಾಮದಲ್ಲಿ ಜೂನ್ 26 ರಂದು ಐದು ಹುಲಿಗಳು ಸಾವನ್ನಪ್ಪಿದ್ದವು. ತಾಯಿ ಹುಲಿ ಮತ್ತು 4 ಮರಿಗಳು ಅಸುನೀಗಿದ್ದವು. ಹುಲಿಗಳು ಮೃತಪಟ್ಟ ಅಣತಿ ದೂರದಲ್ಲಿ ಹಸುವೊಂದರ ಕಳೇಬರ ಪತ್ತೆಯಾಗಿತ್ತು. ಬಳಿಕ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಉನ್ನತ ಮಟ್ಟದ ತನಿಖಾ ತಂಡ ರಚಿಸಿದ್ದರು. ಜೊತೆಗೆ ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯಲೋಪ ಮತ್ತು ನಿರ್ಲಕ್ಷ್ಯ ತೋರಿದ ಆರೋಪದ ಮೇರೆಗೆ ಹಲವರನ್ನು ಸಚಿವ ಈಶ್ವರ ಬಿ ಖಂಡ್ರೆ ಅಮಾನತುಗೊಳಿಸಿದ್ದರು.
In a shocking incident, as many as 19 peacocks have been found dead under mysterious circumstances in Hanumanthapura village of Madhugiri taluk, Tumakuru district. Early in the morning, local farmers discovered the lifeless birds scattered across their fields.
30-12-25 03:08 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಪತ್ತೆ ಪ್ರಕರಣ ; ಮೂರು ಪೊಲೀಸ್...
29-12-25 11:13 pm
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
30-12-25 03:32 pm
HK News Desk
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
30-12-25 12:42 pm
Mangalore Correspondent
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm