ಬ್ರೇಕಿಂಗ್ ನ್ಯೂಸ್
08-08-25 11:20 am Bangalore Correspondent ಕರ್ನಾಟಕ
ಬೆಂಗಳೂರು, ಆ 08 : ಧರ್ಮಸ್ಥಳ ಗ್ರಾಮದಲ್ಲಿ ಆಗಸ್ಟ್ 6 ರಂದು ಗಲಾಟೆ ನಡೆದಿದ್ದು, ಕೆಲ ಯೂಟ್ಯೂಬರ್ಗಳು ಹಾಗೂ ಪತ್ರಕರ್ತರ ಮೇಲೆ ಹಲ್ಲೆ ನಡೆದಿದೆ. ಗಲಾಟೆ ನಡೆದ ಸ್ಥಳದಲ್ಲಿ ಮಾಜಿ ಬಿಗ್ಬಾಸ್ ಸ್ಪರ್ಧಿ ರಜತ್ ಸಹ ಹಾಜರಿದ್ದರು. ಈ ವೇಳೆ ಸೌಜನ್ಯ ಕುಟುಂಬವನ್ನು ಭೇಟಿಯಾಗಲು ಹೋಗಿದ್ದ ರಜತ್ ವಿರುದ್ಧ ವಾಗ್ದಾಳಿ, ನೂಕಾಟ-ತಳ್ಳಾಟಗಳು ನಡೆದಿವೆ. ಮಾತ್ರವಲ್ಲ, ಸೋಶಿಯಲ್ ಮೀಡಿಯಾದಲ್ಲಿ ರಜತ್ ಹಾಗೂ ಅವರ ಕುಟುಂಬದ ವಿರುದ್ಧ ಜೀವ ಬೆದರಿಕೆ ಮಾಡಿದ್ದಾರೆ ಎಂದು ಆರೋಪಿಸಿ ಡಿಜಿಐಜಿಪಿಗೆ ದೂರು ದಾಖಲಿಸಿದ್ದಾರೆ
ಧರ್ಮಸ್ಥಳ ಗ್ರಾಮದ ಸಮೀಪದಲ್ಲಿರುವ ಸೌಜನ್ಯ ಕುಟುಂಬವನ್ನು ಭೇಟಿಯಾಗಲು ಹೋಗಿದ್ದ ರಜತ್ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಹಾಗೂ ಸ್ಥಳದಲ್ಲಿ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಮಾಜಿ ಬಿಗ್ ಬಾಸ್ ಸ್ಪರ್ಧಿ ರಜತ್ ಡಿಜಿಐಜಿಪಿಗೆ ದೂರು ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ಕೊಲೆ ಮಾಡ್ತಿವಿ ಅದು ಇದು ಅಂತ ಬೆದರಿಕೆ ಬಂದಿತ್ತು. ನನ್ನ ಪತ್ನಿ ಅಕ್ಷತಾಗೆ ಬೆದರಿಕೆ ಸಂದೇಶ ಬಂದಿತ್ತು. ಇದು ಬಹಳ ಕೆಟ್ಟ ಬೆಳವಣಿಗೆ ಹಾಗಾಗಿ ದೂರು ನೀಡಿರುವುದಾಗಿ ತಿಳಿಸಿದರು.
ದೂರು ಕೊಟ್ಟ ಬಳಿಕ ಹೇಳಿದ್ದೇನು?
ನಾನು ಯಾವುದೇ ಜಾತಿ ಧರ್ಮ ಜಾಗ ದೇವಸ್ಥಾನ ಬಗ್ಗೆ ಮಾತಾಡಿಲ್ಲ, ನಾವು ಹೋಗಿದ್ದು ಸೌಜನ್ಯ ಪರ ನ್ಯಾಯಕ್ಕಾಗಿ. ಕತ್ತರಿಸ್ತೀನಿ ಅಂದ್ರೆ ಹೇಗೆ? ಹಾಡಹಗಲೇ ನಮ್ಮ ಕಣ್ಣ ಮುಂದೆನೇ ಎಲ್ಲಾ ನಡೆದಿದ್ದು, ಹಲ್ಲೆ ಮಾಡಿದವರ ಮೇಲೆ ದೂರು ಕೊಟ್ಟಿದ್ದೇನೆ. ನನ್ನ ಪತ್ನಿಗೆ ಬೆದರಿಕೆ ಸಂದೇಶ ಹಾಕಿದವರ ವಿರುದ್ದವೂ ದೂರು ಕೊಟ್ಟಿದ್ದೇವೆ. ನಾವು ಕೊಟ್ಟ ದೂರು ಸೈಬರ್ ಠಾಣೆಗೆ ವರ್ಗಾವಣೆ ಆಗಿದೆ. ಕರಾವಳಿ ಮಂಡ್ಯ ಅಂತೆಲ್ಲ ಅಂತಾವ್ರೆ, ನಾವು ಮಂಡ್ಯದವರನ್ನು ಕರ್ಕೊಂಡ್ ಬರ್ತೀವಿ ಅಂತ ಹೇಳಿಲ್ಲ. ಬೆದರಿಗೆಗಳಿಗೆ ನಾವು ಹೆದರಲ್ಲ ಎಂದು ಕಿಡಕಾರಿದರು.
ಇದೇ ಘಟನೆಗೆ ಸಂಬಂಧಿಸಿದಂತೆ ರಜತ್ ಪತ್ನಿ ಅಕ್ಷತಾ ಮಾತನಾಡಿ, ಸೋಶಿಯಲ್ ಮೀಡಿಯಾ ಸ್ಟೇಟಸ್ನಲ್ಲಿ ಮೆಸೇಜ್ ಹಾಕಿದ್ದಾರೆ. ನಿನ್ನ ಗಂಡನನ್ನ ವಾಪಸ್ ಕರೆಸ್ಕೊ, ಕರಾವಳಿ ಬೇರೆ ಥರ ಮಂಡ್ಯ ಅಲ್ಲ ಅಂತೆಲ್ಲ ಹಾಕಿದ್ದಾರೆ. ನಾವು ನಮ್ಮ ಮನೆಯವರನ್ನು ಕರೆಯೋ ಅವಶ್ಯಕತೆ ಇಲ್ಲ. ನಾವು ಹುಟ್ಟಿ ಬೆಳೆದಿದ್ದು ಮಂಡ್ಯದಲ್ಲಿ. ನಾವು ದೂರು ಕೊಟ್ಟಿದ್ದೀವಿ ಎಂದರು
ತುಂಬ ದಿನದಿಂದ ಸ್ನೇಹಿತರ ಜೊತೆ ಸೇರಿ ಸೌಜನ್ಯ ಮನೆಗೆ ಹೋಗಬೇಕು ಅಂತ ರಜತ್ ಅಂದುಕೊಳ್ಳುತ್ತಿದ್ದರು. ಬಿಗ್ ಬಾಸ್ ಶೋಗೆ ತೆರಳುವುದಕ್ಕೂ ಮುನ್ನವೇ ಈ ಘಟನೆ ಬಗ್ಗೆ ರಜತ್ ಅವರು ಮಾತನಾಡಿದ್ದರು. ಟೈಮ್ ಸಿಕ್ಕಿಲ್ಲ ಎಂಬ ಕಾರಣಕ್ಕೆ ಇಷ್ಟು ದಿನ ಧರ್ಮಸ್ಥಳಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ. ಈಗ ಟೈಮ್ ಮಾಡಿಕೊಂಡು ಹೋದರು. ಆ ಭೇಟಿ ಸಹಜವಾಗಿ ಮುಗಿಯಿತು. ಕಾಕತಾಳೀಯ ಎಂಬಂತೆ ಅವರು ಹೋದಾಗಲೇ ಅಲ್ಲಿ ಗಲಾಟೆ ನಡೆಯಿತು’ ಎಂದು ಅಕ್ಷಿತಾ ಹೇಳಿದ್ದಾರೆ.
ರಜತ್ ಅವರು ಸುರಕ್ಷಿತವಾಗಿ ಮನೆಗೆ ಬಂದರು. ಎಲ್ಲವೂ ಸರಿಯಾಗಿಯೇ ಇತ್ತು. ಬೆಳಗ್ಗೆ ಎದ್ದ ತಕ್ಷಣ ಅನೇಕ ಫೋನ್ ಕರೆಗಳು ಬರಲು ಶುರುವಾಯಿತು. ಯಾರೋ ಶಾರದಾ ಭಟ್ ಎಂಬುವವರು ಸ್ಕ್ರೀನ್ ಶಾಟ್ ಕಳಿಸುತ್ತಿದ್ದರು. ಬೆದರಿಕೆ ಸಂದೇಶ, ಬೆದರಿಕೆ ಸ್ಟೇಟಸ್ ಬರಲು ಆರಂಭ ಆಯಿತು. ನಾನು, ನನ್ನ ಮಕ್ಕಳು, ನನ್ನ ಮಂಡ್ಯ ಜಿಲ್ಲೆ ಇದಕ್ಕೆ ಹೇಗೆ ಸಂಬಂಧಿಸಿದೆ ಅಂತ ನನಗೆ ಪ್ರಶ್ನೆ ಮೂಡಿತು. ಮಂಡ್ಯಕ್ಕೂ ಕರಾವಳಿಗೂ ಸಂಬಂಧವೇ ಇಲ್ಲ’ ಎಂದಿದ್ದಾರೆ ಅಕ್ಷಿತಾ.
‘ಸೋಶಿಯಲ್ ಮೀಡಿಯಾದಲ್ಲಿ ಒಬ್ಬರು ಇಷ್ಟು ಧೈರ್ಯವಾಗಿ, ಬಹಿರಂಗವಾಗಿ ಬೆದರಿಕೆ ಹಾಕುತ್ತಾರೆ ಎಂದರೆ ಅವರಿಗೆ ಎಷ್ಟು ಬೆಂಬಲ ಇರಬಹುದು ಎಂಬುದನ್ನು ನಾವು ನೋಡಬಹುದು. ಈ ಬಗ್ಗೆ ರಜತ್ ಬಳಿ ಮಾತಾಡಿದಾಗ ನಿರ್ಲಕ್ಷ್ಯ ಮಾಡೋಣ ಎಂದರು. ಆದರೆ, ಮಂಡ್ಯದ ಬಗ್ಗೆ ಮಾತನಾಡಿದಾಗ ಅದು ಆಕ್ಷೇಪಾರ್ಹ ಹೇಳಿಕೆ. ನಿನ್ನ ಗಂಡನನ್ನು ಕರೆದುಕೊಂಡು ಹೋಗು, ಇಲ್ಲದಿದ್ದರೆ ಕೇಸರಿ ಬಣ್ಣ ಮಾಡಿಬಿಡುತ್ತೇವೆ ಅಂತ ಏನೋ ಹಾಕಿದ್ದಾರೆ’ ಎಂದು ಅಕ್ಷಿತಾ ಹೇಳಿದ್ದಾರೆ.
ಮೂಟೆ ಕಟ್ಟಿ, ಸಿಲಿಂಡರ್ ಹಾಕಿ ಸಾಯಿಸುತ್ತೇವೆ ಎಂಬ ಹೇಳಿಕೆ ಕೂಡ ಬಂದಿದೆ. ಅದರ ಫೋಟೋಕಾಪಿ ತೆಗೆದುಕೊಂಡಿದ್ದೇನೆ. ಈ ರೀತಿ ಹೇಳಿಕೆಗಳು ಸರಿಯಲ್ಲ. ಅದು ಭಯಾನಕ ಆಗಿರುತ್ತದೆ. ಅಕಸ್ಮಾತ್ ಹೆಚ್ಚು-ಕಡಿಮೆ ಆದರೆ ಏನು ಗತಿ? ನಮ್ಮ ಮುಂಜಾಗೃತಾ ಕ್ರಮವಾಗಿ ಪೊಲೀಸರಿಗೆ ದೂರು ನೀಡಲು ಬಂದಿದ್ದೇವೆ’ ಎಂದಿದ್ದಾರೆ ಅಕ್ಷಿತಾ.
Tensions flared in Dharmasthala village on August 6 after a clash during which several YouTubers and journalists were allegedly assaulted. Among those present at the scene was former Bigg Boss contestant Rajath, who had gone to meet the family of the late Soujanya.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am