ಬ್ರೇಕಿಂಗ್ ನ್ಯೂಸ್
09-08-25 01:40 pm Bangalore Correspondent ಕರ್ನಾಟಕ
ಬೆಂಗಳೂರು, ಆ 09 : ಕೆಡಿ ಸಿನಿಮಾದ ಬಿಡುಗಡೆ ಕೆಲಸವಾಗಿ ಬ್ಯುಸಿಯಾಗಿರುವ ಆ್ಯಕ್ಷನ್ ಪ್ರಿನ್ಸ್ಗೆ ಶಾಕ್ ಸಿಕ್ಕಿದೆ. ಕೆಡಿ ಮೂಲಕ ಪ್ರೇಕ್ಷಕರ ಮುಂದೆ ಅಬ್ಬರಿಸೋಕೆ ರೆಡಿಯಾಗಿದ್ದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ಎಫ್ಐಆರ್ ಈಗ FIR ದಾಖಲಾಗಿದೆ. ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ವಂಚನೆ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ.
ಸಿನಿಮಾ ಮಾಡುವುದಾಗಿ ಹಣ ಪಡೆದು ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ರಾಘವೇಂದ್ರ ಹೆಗ್ಗಡೆ ಎಂಬುವವರಿಂದ ದೂರು ದಾಖಲಾಗಿದೆ.
ಧ್ರುವ ಹಾಗೂ ರಾಘವೇಂದ್ರ ಹೆಗ್ಗಡೆ 2016 ರಿಂದ 2018 ರವರೆಗೆ ಜೊತೆಗೆ ಕೆಲಸ ಮಾಡಿದ್ದರು. ಸಿನಿಮಾ ಮಾಡುವುದಾಗಿ 3 ಕೋಟಿ ಪಡೆದು ನಟ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಸೋಲ್ಜರ್ ಎಂಬ ಸಿನಿಮಾ ಮಾಡುವುದಾಗಿ ಸ್ಕ್ರಿಪ್ಟ್ ಮಾಡಿದ್ದ ಧ್ರುವ ಸರ್ಜಾ ಅವರು ಒಪ್ಪಂದಕ್ಕೆ ಸಹಿ ಹಾಕುವ ಮೊದಲು 3 ಕೋಟಿ ಹಣ ಪಡೆದಿದ್ದರು ಎಂದು ಆರೋಪ ಮಾಡಲಾಗಿದೆ.
ಹಣ ಪಡೆದು ಅಪಾರ್ಟ್ಮೆಂಟ್ ಖರೀದಿ ಮಾಡಿದ ಆರೋಪ ಕೇಳಿ ಬಂದಿದ್ದು ಹಣ ಪಡೆದ ಬಳಿಕ ಸಿನಿಮಾ ಮಾಡಿಕೊಡುವ ಭರವಸೆ ಕೂಡಾ ನೀಡಿದ್ದರು ಎಂದು ಆರೋಪಿಸಿದ್ದಾರೆ. ರಾಘವೇಂದ್ರ ಹೆಗ್ಗಡೆ ಹೆಚ್ಚಿನ ಬಡ್ಡಿಗೆ ಹಣ ಪಡೆದು ಧ್ರುವಗೆ ನೀಡಿದ್ದ ಆರೋಪ ಕೇಳಿ ಬಂದಿದೆ.
ಹೆಗಡೆ ಅವರು ಹೆಚ್ಚಿನ ಬಡ್ಡಿದರದಲ್ಲಿ ಸಾಲ ಪಡೆದು, ತಮ್ಮ ನಿರ್ಮಾಣ ಕಂಪನಿಗಳಾದ RH ಎಂಟರ್ಟೈನ್ಮೆಂಟ್ ಹಾಗೂ ರೂ 9 ಎಂಟರ್ಟೈನ್ಮೆಂಟ್ ಮೂಲಕ ಮತ್ತು ವೈಯಕ್ತಿಕ ನಿಧಿಯಿಂದ ಒಟ್ಟು 3.15 ಕೋಟಿಯನ್ನು ಫೆಬ್ರವರಿ 21, 2019ರ ಒಳಗೆ ವರ್ಗಾಯಿಸಿದರು. ಒಪ್ಪಂದದ ಪ್ರಕಾರ ಚಿತ್ರೀಕರಣ ಜನವರಿ 2020ರಲ್ಲಿ ಪ್ರಾರಂಭವಾಗಿ ಜೂನ್ 2020ರಲ್ಲಿ ಪೂರ್ಣಗೊಳ್ಳಬೇಕಿತ್ತು. ಆದರೆ ಹಣ ಪಡೆದ ನಂತರ, ಸರ್ಜಾ ಪದೇಪದೇ ಡೇಟ್ಸ್ ಮುಂದೆ ಹಾಕುತ್ತಲೇ ಬಂದಿದ್ದಾರೆ, ನಂತರ COVID-19 ಲಾಕ್ಡೌನ್ ನಂತರವೂ ಪ್ರತಿಕ್ರಿಯೆ ನೀಡಲಿಲ್ಲ ಎಂದು ಹೆಗಡೆ ಆರೋಪಿಸಿದ್ದಾರೆ. ಅಲ್ಲದೆ, ಸ್ಕ್ರಿಪ್ಟ್ ರೈಟರ್ ಹಾಗೂ ಪ್ರಚಾರ ಸಲಹೆಗಾರರಿಗೆ ಹೆಚ್ಚುವರಿ ಪಾವತಿಗಳನ್ನು ಒತ್ತಾಯಿಸಿ, ಒಟ್ಟು ವೆಚ್ಚವನ್ನು ₹3.43 ಕೋಟಿಗೆ ಹೆಚ್ಚಿಸಿದರು. ಕೊನೆಗೆ ಸರ್ಜಾ ಯೋಜನೆಯಿಂದ ಹಿಂದೆ ಸರಿದು, ಕರೆಗಳಿಗೆ ಪ್ರತಿಕ್ರಿಯೆ ನೀಡದೆ, ಸಭೆಗಳಿಗೆ ಹಾಜರಾಗದೆ, ಮುಂದುವರಿಸಲು ಸಾಧ್ಯವಿಲ್ಲವೆಂದು ಅಲ್ಲಗಳೆದಿದ್ದಾರೆ.
ಹೆಗಡೆ ಅವರು 2021ರಲ್ಲಿ ಕರ್ನಾಟಕ ಫಿಲ್ಮ್ ಚೇಂಬರ್ಗೆ ಬಂದ ಹೈದರಾಬಾದ್ ಮೂಲದ ಪೀಪಲ್ ಮೀಡಿಯಾ ಫ್ಯಾಕ್ಟರಿಯ ಪತ್ರವನ್ನು ಉಲ್ಲೇಖಿಸಿದ್ದು, ಅದರಲ್ಲಿ ಸರ್ಜಾ ಮತ್ತೊಂದು ಯೋಜನೆಗೆ ಹಣ ಪಡೆದು ಕೆಲಸ ನಿರಾಕರಿಸಿದ್ದಾಗಿ ಮತ್ತು ಮಾಧಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದಾಗಿ ತಿಳಿಸಲಾಗಿದೆ.
ಅಂಬೋಲಿ ಪೊಲೀಸರು, ಹೆಗಡೆ ಸಲ್ಲಿಸಿದ ಹಣಕಾಸಿನ ದಾಖಲೆಗಳು, ಒಪ್ಪಂದಗಳು ಹಾಗೂ ಬ್ಯಾಂಕ್ ವ್ಯವಹಾರಗಳನ್ನು ಪರಿಶೀಲಿಸುತ್ತಿದ್ದು, 2018ರಿಂದ 18% ಬಡ್ಡಿದರದಲ್ಲಿ ಒಟ್ಟಾರೆ ನಷ್ಟ ₹9.58 ಕೋಟಿಗೂ ಮೀರಿದೆ ಎಂದು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ದೂರು ಸ್ವೀಕರಿಸಿದ ಬಳಿಕ ಸರ್ಜಾಗೆ ಎರಡು ಬಾರಿ ಸಮನ್ಸ್ ಕಳುಹಿಸಿದರು. ಹಾಜರಾಗದೆ, ಸರ್ಜಾ ಬೆಂಗಳೂರಿನ ನ್ಯಾಯಾಲಯದಿಂದ 10 ದಿನಗಳ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಪಡೆದು, ಜುಲೈ 30ರಂದು ದಿನೋಶಿ ಸೆಷನ್ಸ್ ಕೋರ್ಟ್ಗೆ ಅರ್ಜಿ ಸಲ್ಲಿಸಿದರು. ಆಗಸ್ಟ್ 5ರಂದು ಮಧ್ಯಂತರ ರಕ್ಷಣೆಯೊಂದಿಗೆ ₹50,000 ಜಾಮೀನು ನೀಡಲು ನ್ಯಾಯಾಲಯ ಆದೇಶಿಸಿದ್ದು, ಪ್ರಕರಣವನ್ನು ಆಗಸ್ಟ್ 14, 2025ರವರೆಗೆ ಮುಂದೂಡಲಾಗಿದೆ.
ಸರ್ಜಾ ಪರ ವಕೀಲೆ ಅಶಿಮಾ ಮಂಡ್ಲಾ, ವಿಷಯ ವಿಚಾರಣೆಯಲ್ಲಿರುವುದರಿಂದ ಪ್ರತಿಕ್ರಿಯೆ ನೀಡಲು ನಿರಾಕರಿಸಿ, ತಮ್ಮ ಕಕ್ಷಿದಾರರು ನಿಯಮಾನುಸಾರ ಸಾಕ್ಷ್ಯಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅಂಬೋಲಿ ಪೊಲೀಸ್ ಠಾಣೆಯ ಹಿರಿಯ ಇನ್ಸ್ಪೆಕ್ಟರ್ ಪ್ರಮೋದ್ ಕುಮಾರ್ ಶ್ರೀರಾಮ್ ಕೊಕಟೆ, ಪ್ರಕರಣ ದಾಖಲಾಗಿ ತನಿಖೆ ಮುಂದುವರಿಯುತ್ತಿದೆ ಎಂದಿದ್ದಾರೆ.
Actor Dhruva Sarja, currently busy with the release preparations of his film KD, has been hit with a fraud case in Mumbai. The Amboli police have registered an FIR against him based on a complaint by Raghavendra Hegde, alleging that Sarja took ₹3 crore for a film project but failed to deliver.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm