ಬ್ರೇಕಿಂಗ್ ನ್ಯೂಸ್
24-12-20 06:29 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.24: ರಾಜ್ಯಾದ್ಯಂತ ಜ.1ರಿಂದ ದ್ವಿತೀಯ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ತರಗತಿಗಳನ್ನು ಆರಂಭಿಸಲು ಸಿದ್ಧತೆ ನಡೆಸಿರುವಾಗಲೇ ಶಿಕ್ಷಣ ಇಲಾಖೆ ಎಸೆಸೆಲ್ಸಿ ಮತ್ತು 6ರಿಂದ 9ನೇ ತರಗತಿ ವಿದ್ಯಾರ್ಥಿಗಳ ವಿದ್ಯಾಗಮದ ವೇಳಾಪಟ್ಟಿಯನ್ನು ನಿಗದಿಗೊಳಿಸಿ ಬಿಡುಗಡೆ ಮಾಡಿದೆ.
ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರಥಮ ಭಾಷೆ (ಕನ್ನಡ), ದ್ವಿತೀಯ ಭಾಷೆ (ಇಂಗ್ಲೀಷ್), ತೃತೀಯ ಭಾಷೆ(ಹಿಂದಿ), ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ದೈಹಿಕ ಶಿಕ್ಷಣ ಹಾಗೂ ಇತರ(ಚಿತ್ರಕಲೆ/ವೃತ್ತಿ) ಸೇರಿ 8 ತಂಡ ಮಾಡಿ ತರಗತಿಗಳನ್ನು ನಡೆಸುವಂತೆ ಸೂಚಿಸಲಾಗಿದೆ. ಬೆಳಗ್ಗೆ 10ರಿಂದ 10.45ರ ತನಕ ಒಂದು ಅವಧಿ, 10.45ರಿಂದ 11.30ರ ವರೆಗೆ ಎರಡನೇ ಅವಧಿ ಹಾಗೂ 11.45ರಿಂದ 12.30ರ ವರೆಗೆ ಮೂರನೇ ಅವಧಿ ಇರಲಿದೆ.

ವಿದ್ಯಾಗಮ ವೇಳಾಪಟ್ಟಿ :
ಶಾಲೆಗಳಲ್ಲಿನ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕೊಠಡಿ, ವಾಚನಾಲಯ, ಪ್ರಯೋಗಾಲಯ ಹಾಗೂ ವರಾಂಡ ಸ್ಥಳಗಳನ್ನು ಬಳಸಿಕೊಳ್ಳಲು ಸೂಚನೆ. ಎಲ್ಲ ಕೋವಿಡ್ ಸುರಕ್ಷಿತ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ತಿಳಿಸಿದ್ದು, ದೈಹಿಕ ಅಂತರ, ಮಾಸ್ಕ್ , ಸ್ಯಾನಿಟೈಸರ್ ಬಳಸಬೇಕು. ಅಲ್ಲದೆ, ಒಂದು ಕೊಠಡಿಯಲ್ಲಿ 15 ರಿಂದ 20 ವಿದ್ಯಾರ್ಥಿಗಳು ಮಾತ್ರ ಆಸೀನರಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಲಾಗಿದೆ.
ವಿದ್ಯಾಗಮ ತರಗತಿಯು 8 ತಂಡಗಳಲ್ಲಿ ನಡೆಯಲಿದೆ. ಪ್ರತಿ ಸೋಮವಾರ, ಬುಧವಾರ ಹಾಗೂ ಶುಕ್ರವಾರ 9ನೇ ತರಗತಿ, ಪ್ರತಿ ಮಂಗಳವಾರ, ಗುರುವಾರ ಮತ್ತು ಶನಿವಾರ 8ನೇ ತರಗತಿಗಳ ವಿದ್ಯಾಗಮ ಪಾಠ ನಡೆಯಲಿದೆ. ಕೆಲವು ಶಾಲೆಗಳಲ್ಲಿ 8ನೇ ತರಗತಿಯ ವರೆಗೆ ಮಾತ್ರ ಇದ್ದು, ಅಲ್ಲಿ ಬುಧವಾರವೂ 8ನೇ ತರಗತಿ ನಡೆಯಲಿದೆ.
6ನೇ ತರಗತಿಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರ, 7ನೇ ತರಗತಿಗೆ ಮಂಗಳವಾರ, ಗುರುವಾರ ಮತ್ತು ಶನಿವಾರ ತರಗತಿಗಳು ನಡೆಯಲಿದೆ. ಇದು ಕೂಡ 45 ನಿಮಿಷಗಳ ಮೂರು ಅವಧಿಯಲ್ಲಿ ಇರಲಿದೆ. ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರ ವರೆಗೆ ವಿದ್ಯಾಗಮ ತರಗತಿ ಇರಲಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm