ಬ್ರೇಕಿಂಗ್ ನ್ಯೂಸ್
10-08-25 06:27 pm Bangalore Correspondent ಕರ್ನಾಟಕ
ಬೆಂಗಳೂರು, ಆ.10 : ಬೆಂಗಳೂರು ಮೆಟ್ರೋ ಯೋಜನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ನಡೆಯುವ ಯೋಜನೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶೇ. 50 ಅನುದಾನ ಕೊಟ್ಟು ಮಾಡುವಂತದ್ದು. ಆದರೆ ಇಂದು ಉದ್ಘಾಟನೆಗೊಂಡ ಯೋಜನೆಗೆ ರಾಜ್ಯ ಸರ್ಕಾರವೇ ಹೆಚ್ಚು ಖರ್ಚು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ಮೋದಿ ಸಮ್ಮುಖದಲ್ಲೇ ಮಾತಿನ ದಾಳ ಎಸೆದಿದ್ದಾರೆ.
ಮೆಟ್ರೋ ಹಳದಿ ಮಾರ್ಗದ ಯೋಜನೆಗೆ ಚಾಲನೆ ಕೊಟ್ಟ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರವೇ ಹಣಕಾಸು ಹೆಚ್ಚು ನೀಡಿದ್ದು ಎಂದು ಪ್ರಧಾನಿ ಮೋದಿಗೆ ತಿರುಗೇಟು ನೀಡುವಂತೆ ಮಾತನಾಡಿದರು. 2005ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದಾಗ ಬೆಂಗಳೂರು ಮೆಟ್ರೋ ಯೋಜನೆ ಆರಂಭವಾಗಿದ್ದು ಎಂಬುದನ್ನೂ ನೆನಪಿಸಿದ ಸಿದ್ದರಾಮಯ್ಯ, ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರ ತಾಂತ್ರಿಕ ನೆರವು ಮತ್ತು ಹಣಕಾಸಿನ ನೆರವನ್ನು ನೀಡುತ್ತದೆ. ಹಾಗಾಗಿ ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಕಾರ್ಯಕ್ರಮ ಎಂದಾಗುತ್ತದೆ. ಇದಕ್ಕೆ ರಾಜ್ಯ ಸರ್ಕಾರ 25,387 ಕೋಟಿ ರೂಪಾಯಿ ಖರ್ಚು ಮಾಡಿದೆ. ಕೇಂದ್ರ ಸರ್ಕಾರ ಕೊಟ್ಟದ್ದು ಕೇವಲ 7,468 ಕೋಟಿ ರೂಪಾಯಿ ಮಾತ್ರ. ಕೇಂದ್ರ ಸರ್ಕಾರ ಸಾಲ ಕೊಡುತ್ತದೆ. ಆ ಸಾಲವನ್ನು ನಾವು ಈಗಾಗಲೇ ಬಡ್ಡಿ ಸಮೇತ 3,987 ಕೋಟಿ ರೂಪಾಯಿ ಸಾಲ ಮರು ಪಾವತಿ ಮಾಡಿದ್ದೇವೆ ಎಂದರು.



ಇವತ್ತು ಬೆಂಗಳೂರಿನಿಂದ ಬೆಳಗಾವಿಗೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಉದ್ಘಾಟನೆಗೊಂಡಿದೆ. ಅದೇ ರೀತಿ ಅಮೃತ್ ಸರ್ - ಮಾತಾ ವೈಷ್ಣೋ ದೇವಿ ಹಾಗೂ ಪುಣೆ - ನಾಗಪುರ್ ವಂದೇ ಭಾರತ್ ಕೂಡ ಉದ್ಘಾಟನೆ ಆಗಿದೆ. ನಾವು 4ನೇ ಹಂತದ ಮೆಟ್ರೋ ಯೋಜನೆಗೆ ಡಿಪಿಆರ್ ಸಿದ್ದಪಡಿಸಿ ಕೇಂದ್ರಕ್ಕೆ ಕೊಟ್ಟಿದ್ದೇವೆ. ಕೇಂದ್ರ ಸರ್ಕಾರ ಅದಕ್ಕೆ ಅನುಮೋದನೆ ಕೊಟ್ಟರೆ 2030ರೊಳಗೆ ಆ ಕೆಲಸ ಪೂರ್ಣಗೊಳಿಸಿ 30 ಲಕ್ಷ ಜನರಿಗೆ ನೆರವಾಗಲು ಸಾಧ್ಯವಿದೆ. ಕೇಂದ್ರ ಸರ್ಕಾರ ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಿಗೆ ನೀಡುವ ಆದ್ಯತೆಯನ್ನು ಸ್ವಲ್ಪ ಕರ್ನಾಟಕ ರಾಜ್ಯಕ್ಕೂ ನೀಡಿ ಯೋಜನೆಗೆ ಅನುಮೋದನೆ ನೀಡಬೇಕು ಎಂದು ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಸಮ್ಮುಖದಲ್ಲಿ ಮಾತಿನಲ್ಲೇ ತಿವಿದರು.
ಮೆಟ್ರೋ ರೈಲು ಯೋಜನೆಯನ್ನು ಕೇಂದ್ರದ್ದು ಎನ್ನುವ ರೀತಿ ಬಿಂಬಿಸುತ್ತಿರುವ ಪ್ರಯತ್ನಕ್ಕೆ ಕಾಂಗ್ರೆಸ್ ಸರ್ಕಾರದ ಸಿಎಂ ಸಿದ್ದರಾಮಯ್ಯ ಗಟ್ಟಿ ಸ್ವರದಲ್ಲಿಯೇ ಗುಟುರು ಹಾಕಿದ್ದಾರೆ.
In a rare on-stage political jibe, Karnataka Chief Minister Siddaramaiah reminded Prime Minister Narendra Modi that the state government has contributed more funds than the Centre for the newly inaugurated Bengaluru Metro Yellow Line, urging equal priority for Karnataka as given to Gujarat and Maharashtra.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm