ಬ್ರೇಕಿಂಗ್ ನ್ಯೂಸ್
11-08-25 11:18 am Bangalore Correspondent ಕರ್ನಾಟಕ
ಬೆಂಗಳೂರು, ಆ.11 : ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಪೋಷಕರು ವಿವಾಹಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ, ದಯವಿಟ್ಟು ರಕ್ಷಣೆ ಕೊಡಿ ಎಂದು ತಾನೇ ಖುದ್ದಾಗಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಇದರಂತೆ, ಹೆಂಡತಿ ಕಳೆದುಕೊಂಡ ವ್ಯಕ್ತಿಯೊಬ್ಬನಿಗೆ ಕೊಟ್ಟು ಎರಡನೇ ಮದುವೆ ಮಾಡಲು ಹೊರಟಿದ್ದ ಪೋಷಕರಿಂದ ಬಾಲಕಿಯನ್ನು ರಕ್ಷಿಸಲಾಗಿದೆ.
'ನನಗೆ ವಯಸ್ಸಿನ್ನು ಹದಿನಾರು. 8ನೇ ತರಗತಿಯಲ್ಲಿ ಓದುತ್ತಿದ್ದಾಗ ಪೊಲೀಸ್ ಸಿಬ್ಬಂದಿ ಶಾಲೆಗೆ ಆಗಮಿಸಿ ಬಾಲ್ಯ ವಿವಾಹದಲ್ಲಿ ಅನುಭವಿಸಬೇಕಾದ ತೊಂದರೆ ಬಗ್ಗೆ ತಿಳಿಸಿದ್ದರು. ಮುಂಬರುವ ದಿನಗಳಲ್ಲಿ ಬರಬಹುದಾದ ಸಮಸ್ಯೆ ಬಗ್ಗೆ ಜಾಗೃತಿ ಮೂಡಿಸಿದ್ದರು. ಅಂದು ಶಾಲೆಯಲ್ಲಿ ಕೇಳಿದ್ದ ಪೊಲೀಸರ ಬುದ್ದಿ ಮಾತು ನೆನಪಾಗಿ ನೇರವಾಗಿ ಪೊಲೀಸ್ ಸ್ಟೇಷನ್ ಬಂದೆ ಎಂದು ಬಾಲಕಿ ಠಾಣೆಯ ಪಿಎಸ್ಐ ಮುಂದೆ ವಿವರಿಸಿದ್ದಾಳೆ.
''ನಾನೀಗ ಶಾಲೆ ಬಿಟ್ಟು ಮನೆಯಲ್ಲಿದ್ದೇನೆ. ನಮ್ಮ ಅಪ್ಪ, ಅಮ್ಮ ಹಾಗೂ ಅಣ್ಣ ನನಗೆ ಮದುವೆ ಮಾಡಲು ಮುಂದಾಗಿದ್ದಾರೆ. ಮದುವೆ ಮಾಡಲು ಆಗಸ್ಟ್ 17 ರಂದು ದಿನಾಂಕ ನಿಗದಿ ಮಾಡಿದ್ದಾರೆ. ನನಗೆ ಮದುವೆಯಾಗಲು ಈಗಲೇ ಇಷ್ಟವಿಲ್ಲ. ಆದರೂ ನನ್ನ ಪೋಷಕರು ಬಲವಂತ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾಳೆ.
ನಂತರ ಪಿಎಸ್ಐ ಮಹೇಶ್ ಹೊಸಪೇಟೆ, ತಾಲ್ಲೂಕು ಸಿಡಿಪಿಒ ನವೀನ್ ಕುಮಾರ್, ಹುಡುಗಿಯ ಪೋಷಕರನ್ನು ಕರೆಸಿ ಮದುವೆಯನ್ನು ನಿಲ್ಲಿಸುವಂತೆ ಸೂಚಿಸಿದರು. ಈ ಮಧ್ಯೆ, ಪುನರ್ವಸತಿ ಯೋಜನೆಯ ಪ್ರಕಾರ ಬಾಲಕಿಯನ್ನು ಚಿತ್ರದುರ್ಗದಲ್ಲಿರುವ ಸರ್ಕಾರಿ ಬಾಲಗೃಹಕ್ಕೆ ಕಳುಹಿಸಲಾಗಿದೆ.
In a commendable act of courage, a 16-year-old girl from Chitradurga district approached the police directly to report that her parents were preparing to get her married against her will. The girl’s swift action led to the prevention of the planned child marriage.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 11:06 pm
Mangalore Correspondent
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm