ಬ್ರೇಕಿಂಗ್ ನ್ಯೂಸ್
11-08-25 03:29 pm Bangalore Correspondent ಕರ್ನಾಟಕ
ಬೆಂಗಳೂರು ಆ.11 : ರಾಜ್ಯದ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಘೋಷಣೆ ಮಾಡಿದ್ದು, ಆಡಳಿತ ಪಕ್ಷ ಕಾಂಗ್ರೆಸ್ಗೆ ಶಾಕ್ ನೀಡಿದ್ದಾರೆ. ಆದರೆ ಕಾಂಗ್ರೆಸ್ ಹೈಕಮಾಂಡ್ನಿಂದ ಆದೇಶ ಬಂದ ಹಿನ್ನೆಲೆಯಲ್ಲಿ ರಾಜಣ್ಣ ಈ ನಿರ್ಧಾರ ಮಾಡಿದ್ಧಾರೆ ಎನ್ನಲಾಗಿದೆ.
ಕೆಲವು ದಿನಗಳಿಂದ ಪಕ್ಷ, ಹೈಕಮಾಂಡ್ ಹಾಗೂ ರಾಜಕೀಯ ವಿಷಯಗಳಿಂದ ದೂರವಿದ್ದ ಕೆ.ಎನ್ ರಾಜಣ್ಣ ಅವರು ಇತ್ತೀಚೆಗೆ ಪಕ್ಷ ಹಾಗೂ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾತನಾಡಿದ್ದರು. ರಾಹುಲ್ ಗಾಂಧಿ ಮತಗಳ್ಳತನ ಬಗ್ಗೆ ಬಹಿರಂಗ ಆರೋಪ ಮಾಡಿದ್ದಕ್ಕೆ, ಕಳೆದ ಬಾರಿ ನಾವು ಇರುವಾಗಲೇ ವೋಟರ್ ಲಿಸ್ಟ್ ಮಾಡಿದ್ದಲ್ವೇ.. ನಾವೇ ನೋಡಿಕೊಳ್ಳಬೇಕಿತ್ತು ಎಂದು ಹೇಳಿ ಕೇಂದ್ರ ನಾಯಕರಿಗೆ ಮುಜುಗರ ತಂದಿದ್ದರು. ಜತೆಗೆ ಡಿ.ಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಜತೆಗೂ ಒಳಮುನಿಸು ಇತ್ತು. ಇದು ಕೂಡ ರಾಜೀನಾಮೆ ನೀಡಲು ಕಾರಣ ಎನ್ನಲಾಗುತ್ತಿದೆ.
ರಾಜಣ್ಣ ಅವರ ದಿಢೀರ್ ರಾಜೀನಾಮೆ ರಾಜ್ಯ ರಾಜಕೀಯದಲ್ಲಿ ಬಹುದೊಡ್ಡ ಸಂಚಲನ ಮೂಡಿಸಿದ್ದು, ಕಾಂಗ್ರೆಸ್ ಹಿರಿಯ ನಾಯಕ, ಗೃಹ ಸಚಿವರ ಆಪ್ತರ ವಿರುದ್ಧವೇ ಹೈಕಮಾಂಡ್ ಈ ರೀತಿ ಕ್ರಮ ಕೈಗೊಂಡಿರುವುದು ಚರ್ಚೆಗೆ ಕಾರಣವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬೆಂಬಲಿಗರು ಮುಖ್ಯಮಂತ್ರಿ ಸ್ಥಾನದ ಬಗ್ಗೆ ನೀಡುತ್ತಿದ್ದ ಹೇಳಿಕೆಗಳ ಸಂದರ್ಭ ರಾಜಣ್ಣ ಸಿದ್ದರಾಮಯ್ಯ ಪರ ಬಲವಾಗಿಯೇ ಹೇಳಿಕೆ ನೀಡುತ್ತಿದ್ದರಲ್ಲದೆ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯಲಿದ್ದಾರೆ ಎಂದು ಹೇಳುತ್ತಲೇ ಇದ್ದರು. ಹೀಗಾಗಿ ಡಿಕೆಶಿಗೆ ತೊಡರುಗಾಲಾಗಿದ್ದರು.
ಇತ್ತೀಚೆಗೆ ಮತಗಳವು ವಿಷಯದಲ್ಲಿ ರಾಹುಲ್ ಗಾಂಧಿ ಮಾತನಾಡಿದಾಗ ಅದನ್ನು ವಿರೋಧಿಸಿ ಹೇಳಿಕೆ ನೀಡಿದ್ದರು. ಮಹದೇವಪುರದಲ್ಲಿ ಚುನಾವಣಾ ಅಕ್ರಮ ನಡೆದಾಗ ಕಾಂಗ್ರೆಸ್ ಸರ್ಕಾರವೇ ಆಡಳಿತದಲ್ಲಿತ್ತು. ನಮ್ಮದೇ ಲೋಪದಿಂದ ಅಕ್ರಮ ನಡೆದಿತ್ತು ಎಂದು ಅವರು ಹೇಳಿಕೆ ನೀಡಿದ್ದು ಸಂಚಲನ ಮೂಡಿಸಿತ್ತು. ಈ ವಿಷಯದಿಂದ ಮುಜುಗರಕ್ಕೊಳಗಾಗಿ ಹೈಕಮಾಂಡ್ ರಾಜಣ್ಣ ರಾಜೀನಾಮೆಗೆ ಸೂಚಿಸಿತ್ತು ಎಂದು ಹೇಳಲಾಗಿದೆ.
Karnataka Cooperation minister KN Rajanna — a known supporter of chief minister (CM) Siddaramaiah — submitted his resignation to Chief Minister Siddaramaiah following a controversy with remarks that drew sharp response from deputy CM DK Shivakumar's supporters.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am